“ಜನನದಿಂದ ಮರಣದ ತನಕವೂ ಕಾನೂನು ಕಟ್ಟಲೆ ಆವಶ್ಯಕ’


Team Udayavani, May 6, 2019, 6:10 AM IST

janaja

ಶನಿವಾರಸಂತೆ: ಮನುಷ್ಯನ ಜನನದಿಂದ ಮರಣದ ತನಕವೂ ಕಾನೂನು ಕಟ್ಟಲೆಯ ಅವಶ್ಯಕತೆ ಇದೆ ಎಂದು ಸೋಮವಾರಪೇಟೆ ಸಿವಿಲ್‌ ನ್ಯಾಯಲಯದ ಸಿವಿಲ್‌ ನ್ಯಾಯಧೀಶ ಪರಶುರಾಮ್‌ ದೊಡ್ಡಮನಿ ಹೇಳಿದರು. ಅವರು ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ, ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸೋಮವಾರಪೇಟೆ ತಾಲ್ಲೋಕು ಕಾನೂನು ಸೇವಾ ಸಮಿತಿ, ತಾಲ್ಲೋಕು ವಕೀಲರ ಸಂಘ ಹಾಗೂ ಶನಿವಾರಸಂತೆ ಗ್ರಾ.ಪಂ. ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು-ಮನುಷ್ಯನ ಜೀವನದ ಉದ್ದಕ್ಕೂ ಕಾನೂನಿನ ವ್ಯಾಪ್ತಿ ಒಳಗೊಂಡಿರುತ್ತದೆ ಆದರೆ ಕಾನೂನಿನ ಬಗ್ಗೆ ಅರಿತೊಕೊಳ್ಳುವವರು ವಿರಳ ಈ ನಿಟ್ಟಿನಲ್ಲಿ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ, ಕೃಷಿ-ರೈತಾಪಿ ವರ್ಗದವರಿಗೆ, ಬಡವರ್ಗದವರು, ಅವಿದ್ಯಾವಂತರು ಮುಂತಾದವರು ಕಾನೂನು ನಿಯಮಗಳ ಬಗ್ಗೆ ಅರಿತುಕೊಳ್ಳಬೇಕೆಂಬ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಹಳ್ಳಿಗಳ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೂ ಕಾನೂನಿನ ಅಗತ್ಯವಿದೆ, ಪ್ರತಿಯೊಂದು ಕುಟುಂಬ ತಂದೆ ತಾಯಿ, ಅಣ್ಣತಮ್ಮ, ಅಕ್ಕ-ತಂಗಿ ಸಂಬಂಧಲ್ಲಿ ಆಸ್ತಿ ಪಡೆದುಕೊಳ್ಳುವ ಹಕ್ಕು ಬಂದಾಗಲೂ ಇದು ಕಾನೂನು ನಿಯಮದಂತೆ ನಡೆಯುತ್ತದೆ ಎಂದರು. ಅಧ್ಯಕ್ಷತೆವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ತಿಮ್ಮಯ್ಯ-ಕಾನೂನಿನ ಬಗ್ಗೆ ತಾನು ತಿಳಿದುಕೊಂಡಿದ್ದೇನೆಂಬ ಮನೋಭಾವನೆಯನ್ನು ಬಿಡಬೇಕು, ನಮ್ಮ ದೇಶದಲ್ಲಿ 900 ಕಿಂತ ಹೆಚ್ಚಿನ ಕಾನೂನುಗಳಿದ್ದು ಎಲ್ಲಾವನ್ನು ತಿಳಿದುಕೊಳ್ಳಲಾಗದಿದ್ದರೂ ಅವಶ್ಯಕತೆ ಇರುವ ಕಾನೂನಿನ ಬಗ್ಗೆ ಪ್ರತಿಯೊಬ್ಬರೂ ಅರಿವು ಹೋದಬೇಕಾಗಿದೆ ಎಂದರು. ಕಾನೂನು ನಿಯಮಗಳಿಗೆ ಪ್ರತಿಯೊಬ್ಬರೂ ಗೌರವ ಕೊಡಬೇಕು ಅದೆರೀತಿ ಕಾನೂನು ನಿಯಮಗಳ ತಿಳಿದುಕೊಂಡವರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಇಂತಹ ಸಂದರ್ಭದಲ್ಲಿ ಅಂಥಹವರು ಕಾನೂನು ಪರಿಣಾಮವನ್ನು ಎದುರಿಸಬೇಕಾಗುತ್ತದೆ, ಪ್ರತಿಯೊಬ್ಬರು ಮಗು ಹುಟ್ಟಿದ 1 ತಿಂಗಳ ಒಳಗಡೆ ಜನನ ನೋಂದಾವಣೆ ಮತ್ತು ವ್ಯಕ್ತಿ ಮರಣ ಹೊಂದಿದ ನಂತರ ತಿಂಗಳ ಒಳಗಡೆ ಮರಣ ನೋಂದಾವಣೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಜೀವನಾಂಶದ ಹಕ್ಕು ವಿಚಾರದ ಬಗ್ಗೆ ಸೋಮವಾರಪೇಟೆ ವಕೀಲ ಎಚ್‌.ಎಸ್‌.ವೆಂಕಟೇಶ್‌ ಮಾಹಿತಿ ನೀಡಿದರು. ಕತಹಶೀಲ್ದಾರ ಆರ್‌.ಗೋವಿಂದ್‌ರಾಜ್‌, ಗ್ರಾ.ಪಂ.ಅಧ್ಯಕ್ಷ ಮಹಮ್ಮದ್‌ಗೌಸ್‌ ಉಪಸ್ಥಿರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.