688 ಜನ ವಸತಿಗೆ ಶಾಶ್ವತ ನೀರಿಲ್ಲ!

•ಜಿಲ್ಲೆಯಲ್ಲಿವೆ 1072 ಜನ ವಸತಿ•602 ಕಂದಾಯ ಗ್ರಾಮಗಳು•ಮೂರು ನದಿ ಇದ್ದರೂ ನೀರಿನ ಸದ್ಬಳಕೆ ಇಲ್ಲ

Team Udayavani, May 6, 2019, 2:56 PM IST

bagalkote-tdy-02

ಬಾಗಲಕೋಟೆ: ಹುನಗುಂದ ತಾಲೂಕು ಭೀಮನಗಡ ಜನ ವಸತಿಯಲ್ಲಿ ಖಾಸಗಿ ಟ್ಯಾಂಕರ್‌ ಮೂಲಕ ನೀರು ಪಡೆಯುತ್ತಿರುವ ಜನರು.

ಬಾಗಲಕೋಟೆ: ಮುಳುಗಡೆ ಜಿಲ್ಲೆಯ 688 ಜನ ವಸತಿ ಪ್ರದೇಶಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆ ಇಲ್ಲ ಎಂದರೆ ನಂಬಲೇಬೇಕು.

ಹೌದು, ಜಿಲ್ಲೆಯ ಆರು ತಾಲೂಕು (ಹೊಸದಾಗಿ ನಾಲ್ಕು ಘೋಷಣೆ ಮಾಡಿದ್ದು, ಆಡಳಿತಾತ್ಮಕವಾಗಿ ಆಡಳಿತ ನಡೆಸುತ್ತಿಲ್ಲ) ತಾಲೂಕು ಮತ್ತು 18 ಹೋಬಳಿ ವ್ಯಾಪ್ತಿಯಲ್ಲಿ ಒಟ್ಟು 602 ಕಂದಾಯ ಗ್ರಾಮಗಳು, 20 ಅಧಿಕೃತ ಕಂದಾಯ ಗ್ರಾಮಗಳೆಂದು ಘೋಷಣೆಯಾಗದ ಗ್ರಾಮಗಳು ಸೇರಿ ಒಟ್ಟು 1072 ಜನ ವಸತಿ ಪ್ರದೇಶಗಳಿವೆ. ಅಲ್ಲದೇ 15 ನಗರ ಸ್ಥಳೀಯ ಸಂಸ್ಥೆಗಳಿವೆ. ಅದರಲ್ಲಿ 688 ಜನ ವಸತಿ ಪ್ರದೇಶಗಳಿಗೆ ಈ ವರೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಈ ವರೆಗೂ ಕೈಗೊಂಡಿಲ್ಲ.

384 ಹಳ್ಳಿಗೆ ಮಾತ್ರ ಶಾಶ್ವತ ಯೋಜನೆ: ನಗರ ಪ್ರದೇಶ ಹೊರತುಪಡಿಸಿ, ಗ್ರಾಮೀಣ ಪ್ರದೇಶದ ಹಳ್ಳಿ, ಜನವಸತಿಗಳಿಗೆ ಕುಡಿಯುವ ನೀರು ಪೂರೈಸುವ ಹೊಣೆಹೊತ್ತ ಜಿ.ಪಂ, ಜಿಲ್ಲೆಯಲ್ಲಿ ಒಟ್ಟು 33 ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆ ಅನುಷ್ಠಾನಗೊಳಿಸಿದೆ. ಅದರಲ್ಲಿ 3 ಯೋಜನೆಗಳು ವಿವಿಧ ಕಾರಣಕ್ಕೆ ನೀರು ಕೊಡುತ್ತಿಲ್ಲ. ಉಳಿದ 30 ಯೋಜನೆಗಳಡಿ 384 ಹಳ್ಳಿಗಳಿಗೆ ನೀರು ಕೊಡಲಾಗುತ್ತಿದೆ ಎಂದು ಇಲಾಖೆ, ಅಂಕಿ-ಸಂಖ್ಯೆಯ ದಾಖಲೆ ಕೊಡುತ್ತದೆ.

ನದಿಗಳೇ ಆಸರೆ: ಬಹುಹಳ್ಳಿ ಕುಡಿಯುವ ನೀರು ಪೂರೈಕೆಗೆ ಜಿಲ್ಲೆಯ ಮೂರು ನದಿಗಳೇ ಆಸರೆಯಾಗಿವೆ. ಘಟಪ್ರಭಾ ನದಿ ಪಾತ್ರದಲ್ಲಿ ಬಾದಾಮಿ-2, ಮುಧೋಳ-1, ಬಾಗಲಕೋಟೆ-3 ಹಾಗೂ ಬೀಳಗಿ ತಾಲೂಕಿನಲ್ಲಿ 3 ಬಹುಹಳ್ಳಿ ಕು.ನೀರಿನ ಯೋಜನೆ ಇವೆ.

ಕೃಷ್ಣಾ ನದಿ ಪಾತ್ರದಲ್ಲಿ ಜಮಖಂಡಿ ತಾಲೂಕಿನಲ್ಲಿ 6, ಮುಧೋಳ-1, ಹುನಗುಂದ-4, ಬಾಗಲಕೋಟೆ-5, ಬೀಳಗಿ-3 ಯೋಜನೆಗಳು, ಮಲಪ್ರಭಾ ನದಿ ಪಾತ್ರದಲ್ಲಿ ಬಾದಾಮಿ-3 ಹಾಗೂ ಹುನಗುಂದ ತಾಲೂಕಿನಲ್ಲಿ 2 ಬಹುಹಳ್ಳಿ ಯೋಜನೆ ಚಾಲ್ತಿಯಲ್ಲಿವೆ. ಈ ಯೋಜನೆಗಳಿಗೆ ನದಿ ಪಾತ್ರದಲ್ಲಿ ಬ್ಯಾರೇಜ್‌ ನಿರ್ಮಿಸಿದ್ದು, ಅಲ್ಲಿ ಜಾಕವೆಲ್ ನಿರ್ಮಿಸಿ, ಪೈಪ್‌ಲೈನ್‌ ಮೂಲಕ 384 ಹಳ್ಳಿಗಳಿಗೆ ನೀರು ಕೊಡಲಾಗುತ್ತಿದೆ.

688 ಜನ ವಸತಿಗೆ ಶಾಶ್ವತ ಯೋಜನೆ ಇಲ್ಲ: ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಜಿಲ್ಲೆಯ 384 ಹಳ್ಳಿಗಳು ಮಾತ್ರ ಒಳಗೊಂಡಿದ್ದು, ಉಳಿದ 688 ಜನವಸತಿಗಳಿಗೆ ಶಾಶ್ವತ ಯೋಜನೆ ಕೈಗೊಂಡಿಲ್ಲ. ಈ ಜನ ವಸತಿಗಳಲ್ಲಿ ಕೊಳವೆ ಬಾವಿಗಳ ಮೂಲಕವೇ ಇಂದಿಗೂ ಕುಡಿಯುವ ನೀರು ಒದಗಿಸಲಾಗುತ್ತಿದೆ. ಆ ಕೊಳವೆ ಬಾವಿಗಳಲ್ಲಿ ನೀರು ಬತ್ತಿದರೆ, ಮತ್ತೂಂದು ಹೊಸ ಕೊಳವೆ ಬಾವಿ ಕೊರೆದು ನೀರು ಕೊಡುವ ಪರ್ಯಾಯ ಮಾರ್ಗ ಬಿಟ್ಟರೆ, ಶಾಶ್ವತ ಯೋಜನೆ ಕೈಗೊಳ್ಳಲು ಈ ವರೆಗೆ ಯಾರೂ ಮುಂದಾಗದಿರುವುದು ಆಡಳಿತ ವ್ಯವಸ್ಥೆಯ ಕಾಳಜಿ ಎಂಬ ಬೇಸರದ ಮಾತು ಕೇಳಿ ಬರುತ್ತಿದೆ.

ಏನಿದೆ ನೀರಿನ ವ್ಯವಸ್ಥೆ : ಜಿಲ್ಲೆಯ ಆರು ತಾಲೂಕಿನ 1072 ಜನ ವಸತಿ ಪ್ರದೇಶಗಳಲ್ಲಿ ಒಟ್ಟು 13,01,686 ಜನಸಂಖ್ಯೆ ಇದೆ. ಬಹುಹಳ್ಳಿ ಕುಡಿಯುವ ನೀರು ಪೂರೈಕೆ ಯೋಜನೆಯ ಜತೆಗೆ ಈ ಜನ ವಸತಿಗಳಲ್ಲಿ 1,243 ಕೊಳವೆ ಬಾವಿಗಳು, 1097 ಕಿರು ನೀರು ಪೂರೈಕೆ ಯೋಜನೆಗಳು, 3,758 ಕೈ ಪಂಪ್‌ಗ್ಳು ಸೇರಿ ಒಟ್ಟು 6,719 ಕೊಳವೆ ಬಾವಿಯಿಂದ ನೀರು ಪೂರೈಕೆ ವ್ಯವಸ್ಥೆ ಜಿಲ್ಲೆಯಲ್ಲಿವೆ.

ಆದರೆ, ಮೂರು ವರ್ಷಗಳ ಸತತ ಬರಗಾಲದಿಂದ ಶೇ.35ರಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಅದಕ್ಕಾಗಿ ಈ ವರ್ಷ ಮತ್ತೆ 305 ಹೊಸ ಕೊಳವೆ ಬಾವಿ ಕೊರೆಸಲಾಗಿದೆ. ಅದರಲ್ಲಿ 233 ಮಾತ್ರ ಸಫಲವಾಗಿದ್ದು, ಅವುಗಳಿಂದಲೇ ನೀರು ಕೊಡುವ ಪ್ರಯತ್ನ, ಜಿ.ಪಂ.ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಾಡುತ್ತಿದೆ.

ಒಟ್ಟಾರೆ, ಮೂರು ನದಿಗಳು ಹರಿದು, ರಾಷ್ಟ್ರದ ಅತ್ಯಂತ ದೊಡ್ಡ ಆಲಮಟ್ಟಿ ಜಲಾಶಯ ಜಿಲ್ಲೆಯಲ್ಲಿದ್ದರೂ, ಕುಡಿಯುವ ನೀರಿನ ಶಾಶ್ವತ ಯೋಜನೆ ಕೈಗೊಳ್ಳುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಡಳಿತ ಗಂಭೀರ ಪ್ರಯತ್ನ ನಡೆಸಿಲ್ಲ ಎಂಬುದು ಜಿಲ್ಲೆಯ ಜನರ ಆರೋಪ.

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.