ಮೇ ಮೇಳದಲ್ಲಿ ತೆರೆಗೆ ಬಂದ ಜಾತ್ಯತೀತತೆ

•ರಾಷ್ಟ್ರದ ಜ್ವಲಂತ ಸಮಸ್ಯೆ-ಸವಾಲುಗಳ ಚರ್ಚೆ•ಬಂಡವಾಳಶಾಹಿಗಳ ವಿರುದ್ಧ ಹೋರಾಟದ ಎಚ್ಚರಿಕೆ ಸಂದೇಶ

Team Udayavani, May 6, 2019, 3:48 PM IST

gadaga-01..

ಗದಗ: ಸಮಾರೋಪ ಸಮಾರಂಭದಲ್ಲಿ ಹೈದ್ರಾಬಾದಿನ ಗೋರಟಿ ವೆಂಕನ್ನ ಸಮಾರೋಪ ಭಾಷಣ ಮಾಡಿದರು.

ಗದಗ: ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶನ ಕವಲಕ್ಕಿ ಹಾಗೂ ಚಿತ್ತಾರ ಕಲಾ ಬಳಗ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಂಬೇಡ್ಕರ್‌ ಭವನದ ಲಿಂ| ಡಾ| ಸಿದ್ಧಲಿಂಗ ಸ್ವಾಮಿಗಳ ವೇದಿಕೆಯಲ್ಲಿ ನಡೆದ ಎರಡು ದಿನಗಳ 6ನೇ ಮೇ ಸಾಹಿತ್ಯ ಮೇಳ ರವಿವಾರ ಸಂಜೆ ಅದ್ಧೂರಿ ತೆರೆ ಕಂಡಿತು.

ಆಡಳಿತ ವರ್ಗ ಎಚ್ಚರಿಸುವುದರೊಂದಿಗೆ ಜನಸಾಮಾನ್ಯರು ಪ್ರಸ್ತುತ ಸನ್ನಿವೇಶದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಎಳೆಎಳೆಯಾಗಿ ವಿವರಿಸಿತು. ಈ ಮೂಲಕ ಜನ ಸಮುದಾಯದಲ್ಲಿ ಸ್ವಾಭಿಮಾನದ ಧ್ವನಿಯನ್ನು ಬಡಿದೆಬ್ಬಿಸುವ ಪ್ರಯತ್ನ ನಡೆಸಿತು.

ಅಭಿವೃದ್ಧಿ ಹೆಸರಲ್ಲಿ ಆದಿವಾಸಿಗಳು, ಬಡವರನ್ನು ಬೀದಿಗೆ ತಳ್ಳುವ ಅಧಿಕಾರಿ ವರ್ಗ, ಕಾರ್ಮಿಕರಿಗೆ ಕನಿಷ್ಠ ಸವಲತ್ತು ನೀಡದೇ ಶೋಷಿಸುವ ಬಂಡವಾಳಶಾಹಿಗಳ ವಿರುದ್ಧ ಹೋರಾಟದ ಎಚ್ಚರಿಕೆ ಸಂದೇಶ ರವಾನಿಸಿತು. ಸಮಾಜವಾದ, ಜಾತ್ಯತೀತ ನೆಲೆಗಟ್ಟಿನಲ್ಲಿ ರೂಪಿತವಾದ ಭಾರತವನ್ನು ಧರ್ಮ, ಜಾತಿಗಳ ಹೆಸರಲ್ಲಿ ಒಡೆದಾಳುವ ರಾಜಕಾರಣಿಗಳ ವಿರುದ್ಧ ವಿಚಾರವಾದಿಗಳು ಕೆಂಡ ಕಾರಿದರು.

ಆಳುವ ಪಕ್ಷಗಳು, ಕಾರ್ಪೊರೆಟ್ ಕಂಪನಿಗಳ ಸ್ವಾರ್ಥಗಳನ್ನೊಳಗೊಂಡ ಬಣ್ಣದ ಮಾತುಗಳಿಗೆ ಮಾರು ಹೋಗಿ, ಬದುಕಿನ ನೈಜ ಸ್ಥಿತಿಯನ್ನು ಮರೆಯುವ ಮುಗ್ಧ ಜನರ ಬಗ್ಗೆ ಮಮ್ಮಲ ಮರುಗಿದರು.

ಮೇಳದಲ್ಲಿ ಪುಸ್ತಕ ಮಾರಾಟವೂ ಜೋರಾಗಿತ್ತು. ಸುಮಾರು 11ಕ್ಕೂ ಹೆಚ್ಚು ಮಳಿಗೆಗಳಲ್ಲಿ ಎರಡು ದಿನಗಳಲ್ಲಿ ಸಾವಿರಾರು ಪುಸ್ತಕಗಳು ಓದುಗರ ಕೈಸೇರಿದವು.

ಕುಂಚದಲ್ಲಿ ಮೂಡಿ ಮನವ ಅರಳಿಸಿದ ಕಲಾಕೃತಿಗಳು..:

ಚಿತ್ರಕಲಾ ಪ್ರದರ್ಶನಕ್ಕೆ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರ ಕುಂಚದಲ್ಲಿ ಅರಳಿದ ಕಲಾಕೃತಿಗಳು ‘ಭಾರತದ ಅಭಿವೃದ್ಧಿ’ ಹಿಂದಿನ ಕಥೆಗಳಿಗೆ ಬಣ್ಣದ ಮೂಲಕ ಜೀವ ತುಂಬಿದವು. ಬಂಧಿಯಾಗಿರುವ ಭಾರತಾಂಬೆ, ಹಳ್ಳಿಯ ಹೆಣ್ಣು ಮಗಳು ಅಕ್ಷರಕ್ಕಾಗಿ ಭವಿಷ್ಯದತ್ತ ದೃಷ್ಟಿ ನೆಟ್ಟಿರುವುದು, ಭಾರತದ ನಕಾಶೆಯಲ್ಲಿ ಜಾತಿ ಕಲ್ಮಶಗಳು ಹರಡಿರುವ ಚಿತ್ರಗಳು ಮನಸ್ಸನ್ನು ಸೆಳೆದವು. ಗದುಗಿನ ಶಿವರಾಜ ಕಮ್ಮಾರ ಬಿಡಿಸಿದ ಚಿತ್ರದಲ್ಲಿ ನ್ಯಾಯದೇವತೆಯೊಂದಿಗೆ ಭಾರತಮಾತೆಯೂ ಬಂಧನದ ಸಂಕೋಲೆಯಲ್ಲಿರುವಂತೆ ಬಿಂಬಿಸಿರುವುದು ನೋಡುಗರ ಗಮನ ಸೆಳೆಯುತ್ತಿತ್ತು.

ಕೊಪ್ಪಳದ ಸಂತೋಷ್‌ ಚಿತ್ರಿಸಿದ ಚಿತ್ರ ಕುರ್ಚಿಗಾಗಿ ನಡೆಯುವ ಪೈಪೋಟಿಯೇ ಅಭಿವೃದ್ಧಿಯಾ? ಎಂದು ಪ್ರಶ್ನಿಸುವಂತಿತ್ತು. ಮೂಲಸೌಕರ್ಯಗಳಿಲ್ಲ ದೆ ನಿಟ್ಟುಸಿರು ಬಿಡುತ್ತಿರುವ ಗ್ರಾಮೀಣ ಮಹಿಳೆ ಒಳ್ಳೆಯ ನಾಳೆಗಳಿಗಾಗಿ ಕಾದಿರುವ ಸನ್ನಿವೇಶವನ್ನು ಗದಗಿನ ಡಾ| ಲಕ್ಷ್ಮೀದೇವಿ ಗವಾಯಿ ಅವರು ಚಿತ್ರಿಸಿದ್ದರು. ಭೂಮಿಯನ್ನೇ ಖರೀದಿಸಲು ಹೊರಟ ಬಂಡವಾಳಶಾಹಿಗಳ ಹುನ್ನಾರವನ್ನು ಬಾದಾಮಿಯ ವೀರಣ್ಣ ಕರಡಿ ತೆರೆದಿಟ್ಟರೆ, ಜಾತಿ ವ್ಯವಸ್ಥೆ ಕುರಿತು ಕಲಬುರ್ಗಿಯ ಸೂರ್ಯಕಾಂತ ನಂದೂರು ಅವರ ಚಿತ್ರ ಗಮನ ಸೆಳೆಯಿತು.

ಕ್ಯಾಮರಾದಲ್ಲಿ ಸೆರೆಯಾದ ಬದುಕಿನ ಬವಣೆಯ ನೋಟ:

ಸಾಹಿತ್ಯ ಮೇಳದ ಅಂಗವಾಗಿ ನಡೆದ ಛಾಯಾಚಿತ್ರ ಪ್ರದರ್ಶನವೂ ಗಮನ ಸೆಳೆಯಿತು. ಗ್ರಾಮೀಣ ಕಲೆ, ಸಂಸ್ಕೃತಿ, ಸೊಬಗು ಬಿಂಬಿಸುವ ನೂರಾರು ಚಿತ್ರಗಳು ಪ್ರದರ್ಶನಗೊಂಡವು. ಛಾಯಾಗ್ರಾಹಕ ರಾಮು ವಗ್ಗಿ, ಮುತ್ತು ಹಾಳಕೇರಿ, ವೀರಪ್ಪ ತಾಳದವರ ಅವರು ವಿವಿಧೆಡೆ ಕ್ಯಾಮರಾದಲ್ಲಿ ಸೆರೆ ಹಿಡಿದ ಸುಮಾರು 150ಕ್ಕೂ ಹೆಚ್ಚು ಛಾಯಾ ಚಿತ್ರಗಳನ್ನು ಪ್ರದರ್ಶಿಸಲಾಯಿತು.

ತುತ್ತಿನ ಚೀಲ ತುಂಬಿಸಿಕೊಳ್ಳಲು ಚಿಂದಿ ಆಯುವ ಬಾಲಕಿ, ಬರಗಾಲದಲ್ಲಿ ಜನ, ಜಾನುವಾರುಗಳ ಪಡಿಪಾಟಿಲು, ತಿಪ್ಪೆಯಲ್ಲಿ ಸತ್ತು ಬಿದ್ದಿರುವ ದನದ ಮಾಂಸವನ್ನು ಸಂಗ್ರಹಿಸುತ್ತಿರುವ ಮಕ್ಕಳ ಛಾಯಾಚಿತ್ರಗಳು ಗ್ರಾಮೀಣ ಮತ್ತು ದಲಿತರ ಜೀವನದ ದಯನೀಯ ಸ್ಥಿತಿಯನ್ನು ಎತ್ತಿ ತೋರಿಸುತ್ತಿದ್ದವು.

ಕಪ್ಪತಗುಡ್ಡದ ಸೊಬಗು, ಪೋಸ್ಕೊ ಹೋರಾಟದಲ್ಲಿ ಭಾಗವಹಿಸಿದ್ದ ಮೇಧಾ ಪಾಟ್ಕರ್‌, ಕೃಷಿ ಜಮೀನಿನ ಫಲವತ್ತಾದ ಮಣ್ಣಿನ ಮಹತ್ವ ತಿಳಿಸುವ ಅಜ್ಜಿ, ಅಲೆಮಾರಿಗಳ ಬದುಕು, ರೈತರ ಕೃಷಿ ಚಟುವಟಿಕೆ, ಗ್ರಾಮೀಣ ಜನಪದ ಕಲೆಗಳ ದೃಶ್ಯ ವೈಭವ, ದೀಪಾಲಂಕಾರದಲ್ಲಿ ಕಂಗೊಳಿಸುತ್ತಿರುವ ಭೀಷ್ಮಕೆರೆ ಮತ್ತು ಬಸವಣ್ಣನ ಮೂರ್ತಿ, ಜಿಲ್ಲಾಡಳಿತ ಭವನದ ವೈಭವವನ್ನು ಚಿತ್ರಗಳು ಸಾರಿದವು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.