ಆರ್‌ಟಿಇ ಸೀಟು ಬಡವರಿಗೆ ಗಗನ ಕುಸುಮ

ಹೊಸ ನಿಯಮದಿಂದ ಪಟ್ಟಣದ 45ಶಾಲೆಗಳ ಪೈಕಿ 1ಖಾಸಗಿ ಶಾಲೆಗೆ ಮಾತ್ರ ಪ್ರವೇಶ ಪಡೆಯಲು ಅವಕಾಶ

Team Udayavani, May 6, 2019, 5:07 PM IST

hasan-2..

ಚನ್ನರಾಯಪಟ್ಟಣ: ಬಡವರ, ಕೂಲಿ ಕಾರ್ಮಿಕರ ಹಾಗೂ ರೈತರ ಮಕ್ಕಳು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಲೆಂದು 2012-13ರಲ್ಲಿ ರಾಜ್ಯ ಸರ್ಕಾರ ಆರ್‌ಟಿಇ ಜಾರಿ ಮಾಡಿತು ಆದರೆ ಇದನ್ನು ಅನುಷ್ಠಾನದಲ್ಲಿ ಅಧಿಕಾರಿಗಳು ವಿಫ‌ಲವಾದ್ದರಿಂದ ಯೋಜನೆ ಉಳ್ಳವರ ಪಾಲಾಗಿದ್ದು ಬಡವರಿಗೆ ಗಗನ ಕುಸುಮವಾಗಿದೆ.

ಆರ್‌ಟಿಇ ಸೀಟು ಉಳ್ಳವರ ಪಾಲು: ಆರ್‌ಟಿಇ ಜಾರಿಗೆ ಬಂದಾಗಿನಿಂದ ಈ ಯೋಜನೆ ಉಳ್ಳವರ ಪಾಲಾಗಿದೆ. ಪಟ್ಟಣದ ಸಮೀಪದಲ್ಲಿನ ಗ್ರಾಮೀಣರು ತಮ್ಮ ಹಾಗೂ ಶಾಲೆಗೆ ದಾಖಲಾಗಬೇಕಿರುವ ಮಗುವಿನ ಆಧಾರ್‌ ವಿಳಾಸ ಬದಲಾಯಿಸಿಕೊಂಡು ಬಡವರ ಯೋಜನೆಯನ್ನು ಲಪಟಾಯಿಸಿಸುವ ಮೂಲಕ ದ್ರೋಹ ಮಾಡುತ್ತಿದ್ದಾರೆ. ಈ ರೀತಿ ದ್ರೋಹ ಬಗೆದಿರುವವರಲ್ಲಿ ಕೆಲ ಗುತ್ತಿಗೆದಾರರು, ಜನಪ್ರತಿನಿಧಿಗಳು, ಉದ್ಯಮಿಗಳು, ವ್ಯಾಪಾರಸ್ಥರು, ರಾಜಕಾರಣಿಗಳ ಹಿಂಬಾಲಕರು ಸೇರಿದಂತೆ ಸಮಾಜವನ್ನು ಸರಿದಾರಿಗೆ ತರುವ ಸಮಾಜಿಕ ಕಳಕಳಿ ಹೊಂದಿರುವರೂ ಇದ್ದಾರೆ.

ಆರ್‌ಟಿಇಗಾಗಿ ದಾಖಲೆ ತಿದ್ದಿದವರಿಗೆ ಕ್ರಮವಾಗಲಿ: ಕಳೆದ ಎಂಟು ವರ್ಷದಿಂದ ಆರ್‌ಟಿಇ ಮೂಲಕ ದಾಖಲಾಗಿರುವ 1,642 ವಿದ್ಯಾರ್ಥಿಗಳ ಮತ್ತು ಪೋಷಕರ ದಾಖಲೆ ಮರು ಪರಿಶೀಲಿಸಿದರೆ ದಾಖಲಾತಿ ತಿದ್ದಿರುವುದು ಬೆಳಕಿಗೆ ಬರಲಿದೆ.

ತಾಲೂಕಿನ ವಿದ್ಯಾರ್ಥಿಗಳಿಗಾಗಿ ಸರ್ಕಾರ ಪ್ರತಿ ವರ್ಷ 26.27 ಲಕ್ಷ ರೂ. ವ್ಯಯಿಸುತ್ತಿದೆ. ಇದಲ್ಲಿ ಶೇ.50 ರಷ್ಟು ಹಣ ಉಳ್ಳವರ ಪಾಲಾಗುತ್ತಿದೆ ಈ ಬಗ್ಗೆ ಸರ್ಕಾರ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಅಂತಹವರ ಮಕ್ಕಳನ್ನು ಆರ್‌ಟಿಇ ನಿಂದ ಹೊರಗೆ ಇಡಬೇಕಾಗಿದೆ.

ಉಳ್ಳವರಿಗೆ ನಿರಾಸೆ: ಈ ಬಾರಿಯೂ ಆಧಾರ್‌ ತಿದ್ದುಪಡಿ ಮಾಡಿಸಿಕೊಂಡು, ಆರ್‌ಟಿಇಗೆ ಅಗತ್ಯ ದಾಖಲಾತಿಯನ್ನು ಹೊಂದಿಸಿಕೊಂಡು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಹಣವಂತರಿಗೆ ಮೈತ್ರಿ ಸರ್ಕಾರ ತಕ್ಕ ಶಾಸ್ತಿ ಮಾಡಿದೆ. ಆದರೆ ಇಂತಹ ದೇಶ ದ್ರೋಹಿಗಳಿಂದ ಬಡವರು, ಕೂಲಿಕಾರ್ಮಿಕರು ಹಾಗೂ ರೈತರ ಮಕ್ಕಳಿಗೂ ಆರ್‌ಟಿಇ ನಿಂದ ವಂಚಿತವಾಗಿರುವುದು ಎಷ್ಟರ ಮಟ್ಟಿಗೆ ಸರಿ ?

ಖಾಸಗಿ ಶಾಲೆಗಳ ಹಿಡಿ ಶಾಪ: ಆರ್‌ಟಿಇಗೆ ಕಡಿವಾಣ ಹಾಕಲು ಹೊಸ ನಿಯಮ ಜಾರಿಗೆ ತಂದಿರುವುದರಿಂದ ಬಡವರು, ಕೂಲಿ ಕಾರ್ಮಿಕರು ಮಾತ್ರ ಮೈತ್ರಿ ಸರ್ಕಾರಕ್ಕೆ ಶಾಪ ಹಾಕುತ್ತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯೂ ಶಾಪ ಹಾಕುತ್ತಿದೆ. ಯಾವುದೇ ತೊಂದರೆ ಇಲ್ಲದೇ ಪ್ರತಿ ವರ್ಷ ತಮ್ಮ ಸಂಸ್ಥೆ ಖಾತೆಗೆ ಹಣ ಜಮೆ ಆಗುತ್ತಿತ್ತು. ಆದರೆ ಸಿಎಂ ಕುಮಾರಸ್ವಾಮಿ ಮಾಡಿದ ಒಂದು ಎಡವಟ್ಟು ಹೊಸದಾಗಿ ದಾಖಲಾತಿ ನಿಂತಿರುವುದಲ್ಲದೇ ಸರ್ಕಾರದ ಹಣ ಖಾತೆಗೆ ಜಮಾ ಆಗುವುದು ನಿಲ್ಲುತ್ತಿದೆ, ಈ ಹಿಂದೆ ನೀಡಿದ ಸೀಟಿಗೆ ಮಾತ್ರ ಹಣ ಬರುವಂತಾಗಿದೆ.

ಆರ್‌ಟಿಇ ವ್ಯಾಪ್ತಿಗೆ ಒಂದೇ ಶಾಲೆ: ಕಂದಾಯ ಗ್ರಾಮದ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಯಿದ್ದರೆ ಅಲ್ಲಿಯೇ ಮಕ್ಕಳನ್ನು ದಾಖಲಿಸಬೇಕೆಂಬ ಹೊಸ ನಿಯಮವನ್ನು ರಾಜ್ಯದ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಜಾರಿಗೆ ತಂದಿರುವುರಿಂದ ತಾಲೂಕಿನಲ್ಲಿ 45 ಖಾಸಗಿ ಶಾಲೆಗಳ ಪೈಕಿ ಒಂದು ಶಾಲೆ ಮಾತ್ರ ಆರ್‌ಟಿಇಗೆ ಒಳಪಡಲಿದೆ. ದಂಡಿಗನಹಳ್ಳಿ ಹೋಬಳಿ ಅರಳಬರಗೂರು ಸಮೀಪದ ವೆಸ್ಟ್‌ಹಿಲ್ ರಿಪಬ್ಲಿಕ್‌ ಶಾಲೆ ಮಾತ್ರ ಹೊಸ ನಿಯಮದ ಅಡಿಗೆ ಬರುವುದಿಲ್ಲ. ಉಳಿದ 44 ಖಾಸಗಿ ಶಾಲೆ ಈ ಸಾಲಿನಲ್ಲಿ ಆರ್‌ಟಿಇ ಮೂಲಕ ವಿದ್ಯಾರ್ಥಿಯನ್ನು ದಾಖಲು ಮಾಡಿಕೊಳ್ಳುವಂತಿಲ್ಲ.

ಆರ್‌ಟಿಇ ಯೋಜನೆ ಜಾರಿಯಾದಾಗಿನಿಂದ ಶಾಲೆಗೆ ದಾಖಲಾಗುವುದರಲ್ಲಿ ಶೇ.25 ರಷ್ಟು ಸೀಟು ಆರ್‌ಟಿಇಗೆ ಮೀಸಲಿಡಬೇಕಿದೆ. 2012-13ರಲ್ಲಿ ತಾಲೂಕಿನ 43 ಖಾಸಗಿ ಶಾಲೆಗಳಿಗೆ 143 ಮಂದಿ ಆರ್‌ಟಿಇ ಮೂಲಕ ಪ್ರವೇಶಾತಿ ಪಡೆದಿದ್ದರು. 2013-14ರ ಸಾಲಿನಲ್ಲಿ ದತ್ತಾತ್ರೇಯ ಹಾಗೂ ಜಗನ್ಮಾತ ಈ ಎರಡು ಖಾಸಗಿ ಶಾಲೆಗಳ ಮಾನ್ಯತೆಯನ್ನು ಸರ್ಕಾರ ಹಿಂಪಡೆಯಲಾಗಿತ್ತು ಹಾಗಾಗಿ 43 ಶಾಲೆಯಿಂದ 41ಕ್ಕೆ ಕುಸಿಯುವಂತಾಯಿತು. ಆದರೂ ದಾಖಲೆ ಪ್ರಮಾಣ ಏರಿಕೆಯಾಯಿತು. ಆ ವರ್ಷದಲ್ಲಿ 41 ಶಾಲೆಗಳಿಂದ 215 ವಿದ್ಯಾರ್ಥಿಗಳು ಆರ್‌ಟಿಇ ಮೂಲಕ ಖಾಸಗಿ ಶಾಲೆಗ ದಾಖಲಾದರು.

2014-15ರಲ್ಲಿ 41 ಖಾಸಗಿ ಶಾಲೆಗಳಿಂದ 275 ವಿದ್ಯಾರ್ಥಿಗಳು, 2015-16ರಲ್ಲಿ 41 ಶಾಲೆಯಿಂದ 313 ವಿದ್ಯಾರ್ಥಿಗಳು, 2016-17 ರಲ್ಲಿ 41 ಖಾಸಗಿ ಶಾಲೆಯಿಂದ 279 ವಿದ್ಯಾರ್ಥಿಗಳು ಆರ್‌ಟಿಇ ಯೋಜನೆ ಫ‌ಲಾನುಭವಿಗಳಾಗಿದ್ದು ಸರ್ಕಾರದ ಹಣದಲ್ಲಿ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಪ್ರಾರಂಭಿಸಿದ್ದರು.

2017-18ರಲ್ಲಿ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆಗಳಿದ್ದರೆ ಅವುಗಳಿಗೆ ದಾಖಲು ಮಾಡಬೇಕು ಎಂಬ ನಿಯಮವನ್ನು ಸಡಿಲ ಮಾಡಿದ್ದರಿಂದ ಆ ಸಾಲಿನಲ್ಲಿ ನಾಲ್ಕು ಖಾಸಗಿ ಶಾಲೆಗಳಿಗೆ ಆರ್‌ಟಿಇ ಮೂಲಕ ವಿದ್ಯಾರ್ಥಿಗಳು ದಾಖಲೆ ಮಾಡಿಕೊಳ್ಳಲು ಅವಕಾಶ ದೊರೆಯಿತು. ಅಂದು 45 ಖಾಸಗಿ ಶಾಲೆಯಿಂದ 417 ವಿದ್ಯಾರ್ಥಿಗಳು ಸರ್ಕಾರದ ಹಣದಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಅವಕಾಶ ಪಡೆದರು.

ಸಾಲಮನ್ನಾಕ್ಕೆ ಹಣ ಹೊಂದಿಸಲು ಆರ್‌ಟಿಇಗೆ ಬ್ರೇಕ್‌: ರಾಜ್ಯದ ಮೈತ್ರಿ ಸರ್ಕಾರ ರೈತರ ಬೆಳೆ ಸಾಲಮನ್ನಾ ಮಾಡಿದ್ದರಿಂದ ಹಣ ಹೊಂದಿಸಲು ಅನ್ಯ ಮಾರ್ಗವಿಲ್ಲದೆ ಆರ್‌ಟಿಇಗೆ ಬ್ರೇಕ್‌ ಹಾಕಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಹಿಂದೆ ಬಡವರ ಯೋಜನೆಯನ್ನು ಕಿತ್ತುಕೊಂಡವರಿಂದ ಬಡವರಿಗೆ ಮುಳುವಾಗುವಂತೆ ಸರ್ಕಾರ ಹೊಸ ನಿಯಮ ಜಾರಿಗೆ ತಂದಿರುವುದು ಸಮಂಜಸವಲ್ಲ.

● ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.