ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಸಿಜೆ ರಂಜನ್ ಗೊಗೋಯ್ ಆರೋಪ ಮುಕ್ತ
Team Udayavani, May 6, 2019, 5:50 PM IST
ನವದೆಹಲಿ: ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರ ಮೇಲೆ ಕೇಳಿ ಬಂದಿದ್ದ ಮಹಿಳೆಯೊಬ್ಬರ ಮೆಲಿನ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಲಭಿಸಿದೆ.
ಸರ್ವೋಚ್ಛ ನ್ಯಾಯಾಲಯದ ಆಂತರಿಕ ವಿಚಾರಣಾ ಮಂಡಳಿಯು ಗೊಗೋಯ್ ಮೇಲಿನ ಈ ಆರೋಪಗಳನ್ನು ವಜಾಗೊಳಿಸಿದೆ. ಮೂರು ಜನ ನ್ಯಾಯಾಧೀಶರನ್ನು ಒಳಗೊಂಡಿದ್ದ ಈ ಮಂಡಳಿಯು ತನ್ನ ವರದಿಯನ್ನು ಮೇ 5ರಂದು ಮುಖ್ಯ ನ್ಯಾಯಮೂರ್ತಿಗಳಿಗೆ ಸಲ್ಲಿಸಿದೆ.
ಸರ್ವೋಚ್ಛ ನ್ಯಾಯಾಲಯದ ಮಾಜೀ ಮಹಿಳಾ ಉದ್ಯೋಗಿಯೊಬ್ಬರು ಮುಖ್ಯ ನ್ಯಾಯಮೂರ್ತಿಯವರ ಮೇಲೆ ಲೈಂಗಿಕ ಕಿರುಕುಳ ಆರೋಪವನ್ನು ವಹಿಸಿದ್ದರು. ತನ್ನ ಮೇಲೆ ಕೇಳಿಬಂದಿರುವ ಈ ಆರೋಪದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಗೊಗೋಯ್ ಅವರು ಆಂತರಿಕ ವಿಚಾರಣಾ ಮಂಡಳಿಯೊಂದನ್ನು ರಚನೆ ಮಾಡಿದ್ದರು.
ಮುಖ್ಯ ನ್ಯಾಯಮೂರ್ತಿ ಅವರು ಈ ತ್ರಿಸದಸ್ಯ ವಿಚಾರಣಾ ಮಂಡಳಿಯ ಮುಂದೆ ಕಳೆದ ವಾರ ಹಾಜರಾಗಿ ತಮ್ಮ ಮೇಲಿನ ಆರೋಪಗಳಿಗೆ ಸ್ಪಷ್ಟನೆಯನ್ನು ನೀಡಿದ್ದರು. ಮುಖ್ಯ ನ್ಯಾಯಮೂರ್ತಿಗಳ ಮೇಲೆ ಮಹಿಳೆ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಸತ್ಯತೆ ಇಲ್ಲ ಎಂಬ ನಿರ್ಧಾರಕ್ಕೆ ವಿಚಾರಣಾ ಮಂಡಳಿಯು ಬಂದಿರುವುದರಿಂದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರನ್ನು ಮಂಡಳಿಯು ದೋಷಮುಕ್ತಗೊಳಿಸಿದೆ ಎಂದು ತಿಳಿದುಬಂದಿದೆ.
ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯೊಬ್ಬರ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಅವರು ಆಂತರಿಕ ವಿಚಾರಣಾ ಮಂಡಳಿಯ ಮುಂದೆ ಹಾಜರಾಗಿರುವುದು ಭಾರತೀಯ ನ್ಯಾಯಾಂಗ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗುತ್ತಿದೆ.
ಈ ವಿಚಾರಣಾ ಮಂಡಳಿಯು ಸಲ್ಲಿಸಿರುವ ವರದಿಯನ್ನು ಬಹಿರಂಗಗೊಳಿಸಲಾಗುವುದಿಲ್ಲ. ಆಂತರಿಕ ಕಾರ್ಯಚಟುವಟಿಕೆಗಳ ಭಾಗವಾಗಿ ಈ ಮಂಡಳಿ ರಚನೆಯಾಗಿರುವುದರಿಂದ ಇದು ನೀಡುವ ವರದಿಗಳನ್ನು 2003ರಿಂದ ಬಹಿರಂಗಗೊಳಿಸಲಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ