ಜಿಲ್ಲೆಯ 20 ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಆರಂಭ

ಶಾಲಾ ಪ್ರಾರಂಭದ ದಿನವೇ ಪುಸ್ತಕ, ಸಮವಸ್ತ್ರ, ಶೂ ವಿತರಣೆ

Team Udayavani, May 7, 2019, 1:07 PM IST

Udayavani Kannada Newspaper

ಎನ್‌ ಆರ್‌ ಪುರ: ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದನ್ನು ಗಮನಿಸಿ ರಾಜ್ಯ ಸರ್ಕಾರವು 1 ಸಾವಿರ ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್‌ ಮಾಧ್ಯಮ ಮಂಜೂರು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವನಂಜಯ್ಯ ಹೇಳಿದರು.

ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ 20 ಶಾಲೆಗಳಿಗೆ ಇಂಗ್ಲಿಷ್‌ ಮಾಧ್ಯಮ ಮಂಜೂರಾಗಿದೆ ಎಂದರು.

ಇವು ಪ್ರಸಕ್ತ ಸಾಲಿನಲ್ಲೇ ಪ್ರಾರಂಭವಾಗಲಿವೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆ ಮುಚ್ಚುತ್ತಿರುವುದನ್ನು ಗಮನಿಸಿ ಗ್ರಾಮೀಣ ಭಾಗದ ಶಾಲೆಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಇದಕ್ಕಾಗಿ ಶಿಕ್ಷಕರಿಗೆ ರಜಾ ಅವಧಿಯಲ್ಲೂ ಇಂಗ್ಲಿಷ್‌ ತರಬೇತಿ ನೀಡಲಾಗುತ್ತಿದೆ. ಪ್ರತಿ ತಾಲೂಕಿಗೆ 1ರಂತೆ ಜಿಲ್ಲೆಗೆ 8 ಪಬ್ಲಿಕ್‌ ಶಾಲೆ ಮಂಜೂರಾಗಿದೆ ಎಂದರು.

ಶಾಲಾ ಪ್ರಾರಂಭೋತ್ಸವದಂದೇ ಪಠ್ಯಪುಸ್ತಕ: ಈ ವರ್ಷ ಮೇ 29 ರಂದು ಶಾಲಾ ಪ್ರಾರಂಭೋತ್ಸವದ ದಿನದಂದೇ ಪಠ್ಯಪುಸ್ತಕ, ಸಮವಸ್ತ್ರ‌್ತ್ರ ಹಾಗೂ ಶೂ, ಸಾಕ್ಸ್‌ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರದೇ ಮುಚ್ಚಿರುವ ಶಾಲೆಗೆ 3 ವರ್ಷದೊಳಗೆ ಮತ್ತೆ ಮಕ್ಕಳು ಬಂದರೆ ಶಾಲೆ ಪ್ರಾರಂಭಿಸಲಾಗುವುದು.ಇಲ್ಲದಿದ್ದರೆ ಆ ಶಾಲಾ ಕಟ್ಟಡವನ್ನು ಅಂಗನವಾಡಿ ಅಥವಾ ಸರ್ಕಾರದ ಇತರ ಇಲಾಖೆಗೆ ಹಸ್ತಾಂತರ ಮಾಡಲಾಗುವುದು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ನಾಗರಾಜ್‌ ಇದ್ದರು.

ಶಿಕ್ಷಕರು ಮಕ್ಕಳ ಪರಿಶ್ರಮದಿಂದ ಫಲಿತಾಂಶ ಹೆಚ್ಚಳ
ಶಿಕ್ಷಕರು ಹಾಗೂ ಮಕ್ಕಳ ಪರಿಶ್ರಮದಿಂದ ಚಿಕ್ಕಮಗಳೂರು ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಕಳೆದ ವರ್ಷ ಶೇ. 72 ಇದ್ದದ್ದು, ಈ ವರ್ಷ ಶೇ. 82ಕ್ಕೆ ಏರಿದೆ. ಹಿಂದಿನ ವರ್ಷ ಎಸ್ಸೆಸ್ಸೆಲ್ಸಿಯಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ 28ನೇ ಸ್ಥಾನದಲ್ಲಿತ್ತು. ಈ ವರ್ಷ 14ನೇ ಸ್ಥಾನಕ್ಕೆ ಏರಿದೆ ಎಂದರು. ಶಿಕ್ಷಣ ಇಲಾಖೆಯ ಸೂಚನೆಯಂತೆ ಮಕ್ಕಳಿಗೆ ವಿಶೇಷ ತರಗತಿ, ರಾತ್ರಿ ಮನೆಗಳಲ್ಲಿ ಪಾಠ ಅಲ್ಲದೆ ಶಿಕ್ಷಕರು ವೈಯಕ್ತಿಕವಾಗಿಯೂ ಆಸಕ್ತಿಯಿಂದ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಪಾಠ ಬೋಧಿಸಿದ್ದಾರೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಪ್ರತ್ಯೇಕವಾಗಿ ಪಾಸಿಂಗ್‌ ಪ್ಯಾಕೇಜ್‌ ಎಂಬ ವಿಶೇಷ ತರಗತಿ ನಡೆಸಲಾಗಿದೆ. ಇದೆಲ್ಲದರ ಪರಿಣಾಮವಾಗಿ ಫಲಿತಾಂಶದಲ್ಲಿ ಹೆಚ್ಚಳವಾಗಿದೆ ಎಂದರು.

ಆರ್‌.ಟಿ.ಇ.ತಿದ್ದುಪಡಿ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳವಾಗಲಿ ಎಂದು ಶಿಕ್ಷಣ ಹಕ್ಕು ಕಾಯ್ದೆಗೆ (ಆರ್‌ಟಿಇ) ತಿದ್ದುಪಡಿ ತರಲಾಗಿದೆ. ಆರ್‌ಟಿಇ ಕಾಯ್ದೆಯಲ್ಲಿ ಇದುವರೆಗೆ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ 1 ನೇ ತರಗತಿಯ ದಾಖಲಾತಿಗೆ ದುರ್ಬಲ ವರ್ಗದವರಿಗಾಗಿ ಶೇ. 25 ಮೀಸಲಾತಿ ಇತ್ತು. ಈಗ ತಂದಿರುವ ತಿದ್ದುಪಡಿ ಪ್ರಕಾರ ಆ ಅನುದಾನ ರಹಿತ ಶಾಲೆಯ 1 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಶಾಲೆ ಅಥವಾ ಅನುದಾನಿತ ಶಾಲೆ ಇದ್ದರೆ, ಆ ವ್ಯಾಪ್ತಿಯ ದುರ್ಬಲ ವರ್ಗದ ಮಕ್ಕಳಿಗೆ ಅನುದಾನ ರಹಿತ ಶಾಲೆಗೆ ಪ್ರವೇಶ ಇರುವುದಿಲ್ಲ ಎಂದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.