ಭದ್ರಾ ಅಣೆಕಟ್ಟೆಯಿಂದ ನೀರು ಹರಿಸಲು ಒತ್ತಾಯ
Team Udayavani, May 7, 2019, 1:15 PM IST
ಶಿವಮೊಗ್ಗ: ಭದ್ರಾ ಅಣೆಕಟ್ಟಿನಿಂದ ನೀರು ಹರಿಸಲು ಒತ್ತಾಯಿಸಿ ಕಾಂಗ್ರೆಸ್ ಕಿಸಾನ್ ಸೆಲ್ ನಿಂದ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ: ಭದ್ರಾ ಅಣೆಕಟ್ಟಿನಿಂದ ಬಲ ಮತ್ತು ಎಡ ನಾಲೆಗಳಿಗೆ ಮೇ ತಿಂಗಳ ಕೊನೆಯವರೆಗೂ ನೀರು ಹರಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ವತಿಯಿಂದ ಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಬೇಸಿಗೆ ಹಂಗಾಮಿನಲ್ಲಿಬೆಳೆಗಳಿಗೆ ನೀರು ಹರಿಸಲಾಗುತ್ತಿದೆ. ಎಡ ಮತ್ತು ಭದ್ರಾ ನಾಲೆಯಿಂದ 25,574 ಹೆಕ್ಟೇರ್ ಪ್ರದೇಶದಲ್ಲಿ ರೈತರು ಭತ್ತ ಬೆಳೆದಿದ್ಧಾರೆ. ಭತ್ತ ಹೂ ಕಟ್ಟುವ ಸಮಯವಾಗಿದ್ದು ಜೊತೆಗೆ ಅಡಕೆ ಹಿಂಗಾರು ಒಡೆಯುತ್ತಿದೆ. ಬೆಳೆ ಫಸಲಿಗೆ ಬರುವ ಸಂದರ್ಭದಲ್ಲಿ ನೀರಿನ ಅವಶ್ಯಕತೆ ಇದೆ ಎಂದರು.
ಭದ್ರಾ ಮತ್ತು ಎಡದಂಡೆ ನಾಲೆಗಳಿಗೆ ಜ.2ರ ಮಧ್ಯರಾತ್ರಿಯಿಂದ 125 ದಿನಗಳವರೆಗೆ ನೀರು ಹರಿಸಲು ವೇಳಾಪಟ್ಟಿ ನಿಗದಿ ಪಡಿಸಲಾಗಿದೆ. ಈ ದಿನಾಂಕ ಮೇ 6ಕ್ಕೆ ಕೊನೆಯಾಗುತ್ತದೆ. ಇದರಿಂದಾಗಿ ಕೃಷಿಯನ್ನೇ ನಂಬಿಕೊಂಡ ಸಾವಿರಾರು ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ಎದುರಾಗಿದೆ ಎಂದು ಹೇಳಿದರು
ಅಚ್ಚುಕಟ್ಟು ಪ್ರದೇಶದ ರೈತರು ಸಾಲ ಮಾಡಿ ಬಂಡವಾಳ ಹಾಕಿದ್ದಾರೆ. ಭತ್ತ ಬೆಳೆಯಲು ಎಕರೆಗೆ ಸುಮಾರು 30 ಸಾವಿರ ರೂ.ಖರ್ಚು ಮಾಡಿದ್ದಾರೆ. ನಾಲೆಗಳಿಗೆ ನೀರು ನಿಲ್ಲಿಸುವುದರಿಂದ ಭತ್ತ, ಅಡಕೆ, ತೆಂಗು, ಕಬ್ಬು ಇತರೆ ಬೆಳೆ ನಂಬಿ ಅವಲಂಬಿತರಾಗಿರುವ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ನೀರು ನಿಲ್ಲಿಸಿದರೆ ರೈತರು ಆರ್ಥಿಕ ಸಂಕಷ್ಟ ಎದುರಿಸಲಿದ್ದಾರೆ ಎಂದು ತಿಳಿಸಿದರು.
ಈ ಬಗ್ಗೆ ಗಮನ ಹರಿಸಿ ಮೇ ತಿಂಗಳ ಕೊನೆಯವರೆಗೆ ನಾಲೆಗಳಿಗೆ ನೀರು ಹರಿಸುವ ಮೂಲಕ ಬೆಳೆ ನಷ್ಟವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನಗರದ ಮಹದೇವಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಎಸ್. ಗಿರೀಶ್, ಶಿವಕುಮಾರ್, ಮಧುಸೂದನ್, ಚೇತನ್, ಬಿ.ಎ. ರಮೇಶ್ ಹೆಗ್ಡೆ, ನಿರಂಜನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ