ಕುಡಿವ ನೀರು ಸರಬರಾಜಿಗೆ ಆದ್ಯತೆ ನೀಡಿ

•ತಾಲೂಕಾವಾರು ಅಧಿಕಾರಿಗಳ ಸಭೆ •ತಾಲೂಕಾಡಳಿತ ಚುರುಕಾಗಲು ಜಿಲ್ಲಾಧಿಕಾರಿ ಸೂಚನೆ

Team Udayavani, May 7, 2019, 1:26 PM IST

uk-tdy-1..

ಕಾರವಾರ: ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು.

ಕುಮಟಾ/ಅಂಕೋಲಾ/ಕಾರವಾರ: ಕುಡಿಯುವ ನೀರು ಸರಬರಾಜು ಮಾಡಲು ತಾಲೂಕು ಆಡಳಿತಗಳು ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಸೂಚಿಸಿದ್ದಾರೆ.

ಕುಮಟಾ ಹಾಗೂ ಅಂಕೋಲದಲ್ಲಿ ಸೋಮವಾರ ಪ್ರತ್ಯೇಕವಾಗಿ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರಸ್ತುತ ಕುಡಿಯುವ ನೀರು ಪ್ರಮುಖ ವಿಷಯ. ಪ್ರಸಕ್ತ ಮಾಸದಲ್ಲಿ ಕುಡಿಯುವ ನೀರಿನ ಕುರಿತು ಸಾರ್ವಜನಿಕರಿಂದ ಅಹವಾಲುಗಳು ಕೇಳಿ ಬರುತ್ತಿದ್ದು, ತಾಲೂಕು ಆಡಳಿತ ಆದ್ಯತೆ ಮೇರೆಗೆ ಕುಡಿಯುವ ನೀರಿನ ಸರಬರಾಜಿಗೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಮೊದಲು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಹಾಗೂ ಸಮೀಪದ ನೀರಿನ ಮೂಲ ಯಾವುದೆಂದು ಗುರುತಿಸಿ ಅದಕ್ಕೆ ಬೇಕಿರುವ ಕಾಮಗಾರಿ ಕೈಗೆತ್ತಿಕೊಂಡು ತಕ್ಷಣದ ಕ್ರಮಕ್ಕೆ ಮುಂದಾಗಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಲಭ್ಯವಿರುವ ನೀರಿನ ಮೂಲದಿಂದ ಈ ತಿಂಗಳು ಟ್ಯಾಂಕರ್‌ಗಳ ಮೂಲಕ ನೀರಿನ ಸರಬರಾಜು ಮಾಡಲು ತಾಪಂ ಇಒಗಳು ಆಯಾ ಪಿಡಿಒಗಳೊಂದಿಗೆ ಕ್ರಮ ಕೈಗೊಳ್ಳಬೇಕು ಹಾಗೂ ನೀರಿನ ಮೂಲ ಇರುವುದನ್ನು ಗುರುತಿಸಿ ಪೈಪ್‌ಲೈನ್‌ ಅವಶ್ಯಕತೆ ಇದ್ದಲ್ಲಿ ಅದರ ಕಾಮಗಾರಿ ಕೈಗೊಳ್ಳುವ ಹಾಗೂ ಪ್ರಸ್ತುತ ನೀರಿನ ಸೆಲೆ ಕಡಿಮೆ ಆಗಿರುವ ಬೋರ್‌ವೆಲ್ಗಳನ್ನು ಪುನರ್ಜೀವಗೊಳಿಸಬೇಕು ಎಂದು ಅವರು ಹೇಳಿದರು.

ಕೆಲವು ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್ಗಳಲ್ಲಿ ನೀರಿನ ಲಭ್ಯತೆ ಇದ್ದು, ಗ್ರಾಮಸ್ಥರಿಗೆ ಅನುಕೂಲವಾಗುವಂತಿದ್ದರೆ ಆ ಬೋರ್‌ವೆಲ್ ಮಾಲೀಕರೊಂದಿಗೆ ಚರ್ಚಿಸಿ ಬಾಡಿಗೆ ಆಧಾರದಲ್ಲಿ ಕುಡಿಯುವ ನೀರಿಗಾಗಿ ವ್ಯವಸ್ಥೆ ಮಾಡಿಕೊಳ್ಳುವುದು ಹಾಗೂ ಮುಂದಿನ ಮುಂಗಾರು ಆರಂಭವಾಗುವವರೆಗೆ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ಸೂಚಿಸಿದರು.

ಅಲ್ಲದೆ, ಮುಂದಿನ ಮುಂಗಾರಿನಲ್ಲಿ ಮುಳುಗಡೆ ಪ್ರದೇಶ ಹಾಗೂ ಗುಡ್ಡಕುಸಿತ ಸೇರಿದಂತೆ ವಿವಿಧ ಅವಘಡಗಳು ಈ ಹಿಂದಿನ ಘಟನೆಗಳನ್ನಾಧರಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ ಈ ಸಂಬಂಧ ಅಗತ್ಯ ಕಾಮಗಾರಿ ಕೈಗೊಳ್ಳುವುದಿದ್ದರೆ ಕ್ರಿಯಾ ಯೋಜನೆಯನ್ನು ತಯಾರಿಸಿ ಅನುಮೋದನೆ ಪಡೆದಕೊಳ್ಳಬೇಕು ಎಂದು ಅವರು ಹೇಳಿದರು.

ಅಲ್ಲದೆ ಬೇಸಿಗೆ ಹಾಗೂ ಮುಂಗಾರು ಸಂದರ್ಭದಲ್ಲಿ ಸಹಜವಾಗಿ ಕಂಡು ಬರುವ ರೋಗ ಲಕ್ಷಣಗಳ ಬಗ್ಗೆ ಸಾರ್ವಜನಿಕರಲ್ಲಿ ಎಚ್ಚರಿಕೆ ವಹಿಸುವಂತೆ ತಾಲೂಕು ಆರೋಗ್ಯಾಧಿಕಾರಿಗಳು ಗಮನ ಹರಿಸಬೇಕು ಎಂದೂ ತಿಳಿಸಿದರು.

ಕುಮಟಾ ಸಹಾಯಕ ಕಮಿಷನರ್‌ ಪ್ರೀತಿ ಗೆಹ್ಲೂಟ್, ತಹಶೀಲ್ದಾರ್‌ ಪರಿಮಳ ಕೆ., ತಾಪಂ ಇಒ ಸಿ.ಟಿ. ನಾಯ್ಕ ಹಾಗೂ ಅಂಕೋಲಾದ ಸಭೆಯಲ್ಲಿ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.