ಬಿರುಗಾಳಿ ಮಳೆಗೆ 100 ಎಕರೆ ಬಾಳೆ ನಾಶ


Team Udayavani, May 8, 2019, 3:00 AM IST

birugali

ಹುಣಸೂರು: ತಾಲೂಕಿನಾದ್ಯಂತ ಸೋಮವಾರ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿಳಿಕೆರೆ ಹೋಬಳಿಯಲ್ಲಿ 100 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಫಸಲು ಬಿರುಗಾಳಿಗೆ ಸಿಲುಕಿ ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ಹನಗೋಡು ಹೋಬಳಿಯಲ್ಲಿ 10 ದಿನಗಳ ಹಿಂದಷ್ಟೆ ಬಿರುಗಾಳಿ ಮಳೆಗೆ ಒಂದು ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಪಾಸ್ತಿ, ಬೆಳೆ ನಷ್ಟ ಉಂಟಾದ ಘಟನೆ ಬೆನ್ನಲ್ಲೇ ಬಿಳಿಕೆರೆ ಹೋಬಳಿಯಲ್ಲಿ ಬಿರುಗಾಳಿ ಅವಘಡ ಉಂಟುಮಾಡಿರುವುದು ರೈತರನ್ನು ಚಿಂತೆಗೀಡು ಮಾಡಿದೆ.

ಬಿಳಿಕೆರೆ ಹೋಬಳಿ ವ್ಯಾಪ್ತಿಯ ಹಳ್ಳದಕೊಪ್ಪಲು, ಶಾಂತಿಪುರ, ಏಲಕ್ಕಿಕಟ್ಟೆ, ಗದ್ದಿಗೆ ಮತ್ತಿತರ ಕಡೆ ಸಂಜೆ ಬೀಸಿದ ಬಿರುಗಾಳಿಗೆ ಈ ಭಾಗದಲ್ಲಿ ಅತಿಹೆಚ್ಚು ಬೆಳೆಯುವ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ಹಳ್ಳದಕೊಪ್ಪಲು ಗ್ರಾಮದ ಶಿವಣ್ಣ ಹಾಗೂ ಕುಮಾರ ಅವರ ತಲಾ ಒಂದು ಎಕರೆ, ತರೀಕಲ್‌ ಗಣೇಶ್‌ 2 ಎಕರೆ,

ಕೆಂಡಗಣಪುರದ ಪಾನಿಪುರಿ ಚಂದ್ರ ಹಾಗೂ ಸೋಮೇಶ್‌ ತಲಾ 2 ಎಕರೆ ಬಾಳೆ ಹಾನಿಯಾಗಿದೆ. ಈ ಭಾಗದಲ್ಲಿ ಜಮೀನಿನ ಬದಿಯಲ್ಲಿದ್ದ 10ಕ್ಕು ಹೆಚ್ಚು ಮರಗಳು ನೆಲಕ್ಕುರುಳಿವೆ. ಗದ್ದಿಗೆಯ ಮಯೂರಾಪುರದ ವೆಂಕಟೇಶ್‌ ಅವರ ಎರಡು ಎಕರೆ ಬಾಳೆ, ಕುಟ್ಟುವಾಡಿಯ ಶಿವಣ್ಣೇಗೌಡರ 1 ಎಕರೆ ಬಾಳೆ ನಾಶವಾಗಿದೆ.

ಕರಿಮುದ್ದನಹಳ್ಳಿ ಬಳಿಯ ಮೀನುಗಾರಿಕೆ ಇಲಾಖೆ ಸ್ಥಾಪಿಸಿರುವ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರದ ಆವರಣದಲ್ಲಿನ ಮೂರು ಬೃಹದಾಕಾರದ ಸುರಗಿ ಮರಗಳು ನೆಲಕ್ಕುರುಳಿವೆ. ಈ ಮರಗಳ ಬಳಿ ಹಾದು ಹೋಗಿದ್ದ 5 ವಿದ್ಯುತ್‌ ಕಂಬಗಳು ಬಿದ್ದಿವೆ. ಕಂಬದಿಂದ ಹಾದುಹೋಗಿದ್ದ ತಂತಿಗಳು ಜೊಂಪೆಯಾಗಿ ಅಲ್ಲೇ ಬಿದ್ದಿವೆ.

ಅಧಿಕಾರಿಗಳ ಭೇಟಿ: ಬಿರುಗಾಳಿಯಿಂದ ಹಾನಿಯಾದ ಪ್ರದೇಶಗಳಿಗೆ ರಾಜಸ್ವ ನಿರೀಕ್ಷಕ ವೆಂಕಟಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಧರ್ಮಾಪುರದಲ್ಲಿ ಎರಡು ಮನೆಗಳ ಶೀಟ್‌ ಗಾಳಿಗೆ ಹಾರಿಹೋಗಿದೆ. ಹಾನಿಯ ಸಂಪೂರ್ಣ ವರದಿ ಬಂದ ನಂತರ ಪರಿಶೀಲನೆ ನಡೆಸುತ್ತೇನೆಂದು ತಹಸೀಲ್ದಾರ್‌ ಐ.ಇ.ಬಸವರಾಜು ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.