ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪರ ಬಸವಣ್ಣ ಧ್ವನಿ


Team Udayavani, May 8, 2019, 3:00 AM IST

shoshita

ಗುಡಿಬಂಡೆ: ಲಿಂಗ, ಜಾತಿ ಬೇಧಗಳನ್ನೆಲ್ಲಾ ಮುರಿದು ಸರ್ವರೂ ಸಮಾನರೆಂದು ಸಾರಿರುವ ಬಸವಣ್ಣ ಸಮಾನತೆಯ ಹರಿಕಾರ ಎಂದು ತಹಶೀಲ್ದಾರ್‌ ಹನುಮಂತರಾಯಪ್ಪ ಬಣ್ಣಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬಸವೇಶ್ವರ ಜಯಂತ್ಯುತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಸವಣ್ಣನವರು ಉನ್ನತ ಸಮುದಾಯದಲ್ಲಿ ಜನಿಸಿದರೂ ಶೋಷಿತ ಹಾಗೂ ಹಿಂದುಳಿದ ವರ್ಗಗಳ ಪರ ಧ್ವನಿ ಎತ್ತಿದ ಮಹನೀಯ. ಬಸವಣ್ಣನವರ ತತ್ವ, ಆದರ್ಶಗಳು° ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

12ನೇ ಶತಮಾನದಲ್ಲಿ ಸಮಾಜದ ಶೋಷಿತ ವರ್ಗಗಳ ಪರವಾಗಿ ಬಸವಣ್ಣನವರು ನಿಂತಿದ್ದರು. ಎಲ್ಲರೂ ಸಮಾನರು ಎಂದು ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದಿದ್ದರು. ಅಲ್ಲದೇ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹಿಸಿದರು ಎಂದು ವಿವರಿಸಿದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಗ್ರಾಮ ಲೆಕ್ಕಾಧಿಕಾರಿ ವಿದ್ಯಾ, ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಬೇಕೆಂದು ಪ್ರತಿಪಾದಿಸಿದ್ದ ಬಸವಣ್ಣನವರು, ಕಾಯಕವೇ ಕೈಲಾಸ ಎಂಬುದನ್ನು ವಚನಗಳಲ್ಲಿ ತಿಳಿಸಿದ್ದಾರೆ.

12ನೇ ಶತಮಾನದಲ್ಲಿಯೇ ಬಸವಣ್ಣ ಸಮ ಸಮಾಜ ನಿರ್ಮಾಣದ ಕನಸು ಕಂಡಿದ್ದರು. ಬಸವಣ್ಣನವರ ಕನಸು ನನಸು ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಲಿಂಗತಾರತಮ್ಯ, ವರ್ಗ ತಾರತಮ್ಯ, ಜಾತಿ ತಾರತಮ್ಯ ಹೋಗಲಾಡಿಸುವ ಚಿಂತನೆ ಸಮಾಜಕ್ಕೆ ನೀಡಿದ ಅವರು ಧಾರ್ಮಿಕತೆಗೆ ಹೊಸ ವ್ಯಾಖ್ಯಾನ ನೀಡಿ ಬಡವರಿಗೂ ದೇವರ ಕಾಣುವ, ದೇವಸ್ಥಾನ ಕಟ್ಟುವ ಹಕ್ಕಿದೆ ಎಂಬುವುದನ್ನು ಮೊಟ್ಟ ಮೊದಲಿಗೆ ಅರಿವು ಮೂಡಿಸಿದರೆಂದರು.

ಕನ್ನಡ ಸಾಹಿತ್ಯ ಪರಿಷತ್‌ ನಿಕಟ ಪೂರ್ವ ಅಧ್ಯಕ್ಷ ಸ.ನ ನಾಗೇಂದ್ರ ಮಾತನಾಡಿ, ಶತಮಾನಗಳ ಹಿಂದೆ ಇದ್ದ ಮೌಡ್ಯ, ಕಂದಾಚಾರ ಪದ್ಧತಿಗಳು 21ನೇ ಶತಮಾನದಲ್ಲೂ ಆಚರಣೆಯಲ್ಲಿವೆ.

ಮೇಲು, ಕೀಳು, ಜಾತಿ ಎಂಬ ಸಂಪ್ರದಾಯ ಜೀವಂತವಾಗಿದೆ. ಇದನ್ನು ಹೋಗಲಾಡಿಸಲು ಪ್ರತಿಯೊಬ್ಬರೂ ಶ್ರಮಿಸಬೇಕು. ಎಲ್ಲಾ ಕುಲ ಕಸಬುಗಳ ವ್ಯಕ್ತಿಗಳ ಕಾಯಕಕ್ಕೆ ಗೌರವ ನೀಡಿ ಅಸಮಾನತೆ ಹೋಗಲಾಡಿಸಲು ಪಣ ತೊಟ್ಟಿದ್ದರು ಎಂದರು.

12 ಶತಮಾನದ ಕಾಲಘಟ್ಟದಲ್ಲಿ ಬಸವಣ್ಣವನರು ಹಾಕಿಕೊಂಡ ಸಮಾಜ ಸುಧಾರಣೆ ಅಭಿವೃದ್ಧಿ ಚಿಂತನೆಗಳು ಎಲ್ಲಾ ಕಾಲಗಳಲ್ಲೂ ಪ್ರಸ್ತುತವೆನ್ನಿಸುತ್ತದೆ. ಅವರ ಚಿಂತನೆಗಳ ಸಾಕಾರ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಹಲವು ಸರ್ಕಾರಗಳು ಯೋಜನೆಗಳನ್ನು ಅನುಷ್ಠಾನಗೊಳಿಸಲು ಪ್ರೇರಣೆ ಎಂದು ಬಣ್ಣಿಸಿದರು.

ದಯೆ ಧರ್ಮದ ಮೂಲ ಎಂಬ ಸಾರವನ್ನು ಸನಾತನ, ಬೌದ್ಧ, ಸಿಖ್‌, ಜೈನ, ಇಸ್ಲಾಂ ಧರ್ಮಗಳಲ್ಲಿ ಅಡಕವಾಗಿದ್ದರೂ ಅದನ್ನು ಸಮಾಜಕ್ಕೆ ತೀರಾ ನಿಕಟವಾಗಿ ತಲುಪಿಸಿದವರಲ್ಲಿ ಬಸವಣ್ಣನವರು ಓರ್ವರು. ಕಲ್ಮಶ ರಹಿತ ಮನಸ್ಸಿನಿಂದ ಶಾಂತಿ ಪ್ರಾಪ್ತಿ.

ಪ್ರಜಾಸತ್ತಾತ್ಮಕ ದೇಗುಲ ಬಾಗಿಲು ತೆರೆಸುವ ಮೂಲಕ ಅಸಂಖ್ಯಾತ ದೀನ, ದಲಿತ, ದುರ್ಬಲ ಜನಾಂಗದವರ ಮನಗೆಲ್ಲುವಂತೆ ಮಾಡಿದ್ದರೆಂದರು. ಈ ವೇಳೆ ರೇಷ್ಮೆ ಇಲಾಖೆಯ ಮ.ಗ.ಹೆಗಡೆ, ಸಮಾಜ ಕಲ್ಯಾಣ ಇಲಾಖೆಯ ದಾಸಪ್ಪ, ತೋಟಗಾರಿಕೆ ಇಲಾಖೆ ರವಿಕುಮಾರ್‌, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.