ಪುತ್ತೂರು, ನಾರಾವಿ: ಉತ್ತಮ ಮಳೆ
Team Udayavani, May 8, 2019, 6:15 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧೆಡೆ ಮಂಗಳವಾರ ಮಧ್ಯಾಹ್ನದ ಬಳಿಕ ಮಳೆ ಬಂದಿದೆ. ಮಂಗಳೂರು ನಗರದ ಕೆಲವೆಡೆ ಮಳೆಯಾಗಿದ್ದರೆ ಮತ್ತೆ ಕೆಲವೆಡೆ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು.
ಕೋಟೆಕಾರು, ಬೀರಿ, ಕಿನ್ನಿಗೋಳಿ ಪರಿಸರದಲ್ಲಿ ಬೆಳಗ್ಗೆಯೇ ಹನಿಮಳೆ
ಯಾಗಿದೆ. ಮೂಲ್ಕಿಯಲ್ಲಿ ಮೋಡ ಆವರಿಸಿತ್ತು. ಯೆಯ್ನಾಡಿ, ದೇರೆಬೈಲು, ಕೊಂಚಾಡಿ ಸೇರಿದಂತೆ ಮಂಗಳೂರಿನ ಕೆಲವೆಡೆ ಮಳೆಯಾಗಿದೆ. ಸುಬ್ರಹ್ಮಣ್ಯ
ಸುತ್ತಮುತ್ತ ಗುಡುಗು, ಮಿಂಚು ಸಹಿತ ಸಾಧಾರಣ ಮಳೆ ಬಂದಿದೆ. ಸಜಿಪದಲ್ಲಿ ತುಂತುರು ಮಳೆಯಾಗಿದೆ.
ಪುಂಜಾಲಕಟ್ಟೆ, ಮೂಡಬಿದಿರೆ, ವೇಣೂರಿನಲ್ಲಿ ಹನಿ ಮಳೆಯಾದರೆ, ಬೆಳ್ತಂಗಡಿ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ. ನಾರಾವಿ ಕೆಳಗಿನ ಪೇಟೆಯಲ್ಲಿ ಹೊಸ ಸೇತುವೆ ಸಮೀಪ ಚರಂಡಿ ಕಟ್ಟಿದ್ದರಿಂದ ರಸ್ತೆಯಲ್ಲಿ ನೀರು
ಹರಿದು ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಚರಂಡಿಯಲ್ಲಿ ಸಮೀಪ ಕಲ್ಲು ರಾಶಿ ಹಾಕಿದ್ದರಿಂದ ನೀರು ಹರಿದು ಹೋಗದೆ ಸಮಸ್ಯೆಯಾಗಿತ್ತು. ಈದು, ಕುತ್ಲೂರು ಪರಿಸರದಲ್ಲಿ ಅರ್ಧ ತಾಸಿಗೂ ಹೆಚ್ಚು ಕಾಲ ಮಳೆಯಾಗಿದೆ.
ಮರೋಡಿ, ಹೊಸಮಾರು, ತೋಟತ್ತಾಡಿ, ಬೆಳ್ತಂಗಡಿ, ಮುಂಡಾಜೆ, ಗುರಿಪಳ್ಳ ಆಸುಪಾಸು ಸಾಧಾರಣ ಮಳೆಯಾಗಿದೆ. ಪುತ್ತೂರಿನಲ್ಲಿ ಮಧ್ಯಾಹ್ನ ಸುಮಾರು ಒಂದು ಗಂಟೆ ಕಾಲ ಉತ್ತಮ ಮಳೆ ಬಂದಿದೆ.
ಕಾಪು, ಪಡುಬಿದ್ರಿ ಮೊದಲಾದೆಡೆ ತುಂತುರು ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ