ಔಷಧ ವನ ಬೆಳೆಸಿದ್ರೆ ಆಸ್ಪತ್ರೆ ನಿರ್ಮಿಸಿದಂತೆ: ಡಾ| ಪತಂಜಲಿ

ಜನರಿಗೆ ಔಷಧೀಯ ಸಸ್ಯಗಳ ಪರಿಚಯ ಅಗತ್ಯ

Team Udayavani, May 8, 2019, 5:45 PM IST

8-May-39

ಸಾಗರ: ನೀಚಡಿ ಕೆರೆ ಮೇಲ್ಭಾಗದ ಅರಣ್ಯ ಪ್ರದೇಶದಲ್ಲಿ ಔಷಧ ವನ ನಿರ್ಮಿಸಲು ಗ್ರಾಮಸ್ಥರೊಂದಿಗೆ ಆಯುರ್ವೇದ ತಜ್ಞ ಡಾ| ಪತಂಜಲಿ ಸಮೀಕ್ಷೆ ನಡೆಸಿದರು.

ಸಾಗರ: ಸಾರ್ವಜನಿಕರಿಗೆ ಔಷಧ ಸಸ್ಯಗಳ ಬಳಕೆಯ ಕುರಿತು ಜಾಗೃತಿ ಮೂಡಿಸಿ ಗ್ರಾಮಗಳಲ್ಲಿ ಔಷಧ ವನಗಳನ್ನು ನಿರ್ಮಾಣ ಮಾಡಿದರೆ ಊರಿನಲ್ಲಿ ಒಂದು ಆಸ್ಪತ್ರೆ ನಿರ್ಮಾಣ ಮಾಡಿದಂತೆ ಎಂದು ಆಯುರ್ವೇದಿಕ್‌ ತಜ್ಞ ಡಾ| ಪತಂಜಲಿ ಹೇಳಿದರು.

ತಾಲೂಕಿನ ನೀಚಡಿ ಗ್ರಾಮದಲ್ಲಿ ಕೆರೆ ಬಳಕೆದಾರರ ಸಂಘ ಹಾಗೂ ನೀಚಡಿ ಟ್ರಸ್ಟ್‌ ವತಿಯಿಂದ ಏರ್ಪಡಿಸಿದ್ದ ಜಲಮೂಲಗಳ ಸಂರಕ್ಷಣೆ ಹಾಗೂ ಆಯುರ್ವೇದ ಔಷಧ ಪದ್ಧತಿಯಲ್ಲಿ ಬಳಸುವ ಗಿಡಮೂಲಿಕೆ ಸಸ್ಯಗಳನ್ನು ಬೆಳೆಸುವ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ಪರಿಸರದಲ್ಲಿ ನೈಸರ್ಗಿಕವಾಗಿ ಬೆಳೆದ ಗಿಡಮರಗಳನ್ನು ಸಂರಕ್ಷಿಸಿಕೊಂಡು ನಮ್ಮ ನಿತ್ಯದ ಆಹಾರದ ಬಳಕೆಗೆ ಹಾಗೂ ಔಷಧಿಯಾಗಿ ಬಳಸುವ ಸಸ್ಯಗಳನ್ನು ಬೆಳೆಸಲು ಮುಂದಾಗಿರುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ. ಏಕಜಾತಿಯ ಸಸ್ಯಗಳನ್ನು ಬೆಳೆಸುವುದಕ್ಕಿಂತಲೂ ವಿವಿಧ ಜಾತಿಯ ಹಣ್ಣಿನ ಗಿಡಮರಗಳನ್ನು ಬೆಳೆಸಿ ಸಂರಕ್ಷಿಸಬೇಕು. ಗ್ರಾಮಗಳಲ್ಲಿ ಔಷಧ ವನ, ನಕ್ಷತ್ರವನ, ನವಗ್ರಹವನಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಜನರಿಗೆ ಮನೆಮದ್ದುಗಳನ್ನು ಬಳಸಿಕೊಳ್ಳುವ ಬಗ್ಗೆ ಹೆಚ್ಚಿನ ತಿಳುವಳಿಕೆ ನೀಡುವುದರಿಂದ ಅನೇಕ ಕಾಯಿಲೆಗಳಿಂದ ದೂರ ಉಳಿಯಬಹುದು. ನಮ್ಮ ನಡುವೆ ಬೆಳೆಯುವ ಅನೇಕ ಸಸ್ಯಗಳಲ್ಲಿ ಔಷಧೀಯ ಗುಣಗಳಿರುತ್ತವೆ. ಅವುಗಳನ್ನು ಬಳಕೆ ಮಾಡುವ ವಿಧಾನವನ್ನು ತಜ್ಞರಿಂದ ತಿಳಿದುಕೊಳ್ಳಬೇಕು. ಅಶ್ವತ್ಥ ಮರ ಇರುವ ಪ್ರದೇಶದಲ್ಲಿ ಯಾವಾಗಲೂ ಆರೋಗ್ಯಕರ ವಾತಾವರಣವಿದ್ದು ವಿವಿಧ ಗಿಡಗಳನ್ನು ಬೆಳೆಸಲು ಬೀಜೋತ್ಪಾದನಾ ಸಾಮರ್ಥ್ಯ ಸಹ ಹೆಚ್ಚಾಗಿ ಇರುತ್ತದೆ. ಇಂತಹ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು ಮೂಲಿಕಾವನವನ್ನು ನಿರ್ಮಾಣ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ನೀಚಡಿಯಲ್ಲಿ ಪುನರ್‌ ನಿರ್ಮಾಣಗೊಂಡ ಕೆರೆ ಮೇಲ್ಭಾಗದ ಅರಣ್ಯ ಪ್ರದೇಶದಲ್ಲಿ ಔಷಧ ಸಸ್ಯಗಳನ್ನು ಬೆಳೆಸುವ ಕುರಿತು ಆಯುರ್ವೇದ ವೈದ್ಯರೊಂದಿಗೆ ಸಮೀಕ್ಷೆ ನಡೆಸಲಾಯಿತು. ಊರಿನ ಪ್ರಮುಖರಾದ ದತ್ತಮೂರ್ತಿ, ಸುಬ್ಬರಾವ್‌ ಭಾಗವತ್‌, ಬಿ.ಜಿ. ಅನಂತಮೂರ್ತಿ, ಶ್ರೀನಾಥ್‌ ನಾಡಿಗ್‌, ಸುಭಾಷ್‌ ಬಾಪಟ್, ಎನ್‌.ಟಿ. ಯೋಗೀಶ್‌, ಶರ್ವಾಣಿ, ಪ್ರಜ್ಞಾ ಬಾಪಟ್ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.