ಬದಿಯಡ್ಕ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ನಲ್ಲಿ ದಂತರೋಗ ನಿರ್ಣಯ ಮೊಟಕು: ರೋಗಿಗಳ ಪರದಾಟ


Team Udayavani, May 8, 2019, 7:40 PM IST

health

ಬದಿಯಡ್ಕ: ಸರಕಾರದ ಅನಾಸ್ತೆಗೆ ಹೆಸರಾದ ಪ್ರದೇಶಗಳಲ್ಲಿ ಬದಿಯಡ್ಕವೂ ಒಂದು. ಈ ಪ್ರದೇಶದ ಜನರಿಗಾಗಿ ರೂಪೀಕರಿಸುವ ಯೋಜನೆಗಳು ಕಡತಗಳಲ್ಲೇ ಉಳಿಯುವುದು, ಅರ್ಧದಲ್ಲೇ ಕಟ್ಟಡಗಳ ಕೆಲಸ ಸ್ಥಗಿತಗೊಳ್ಳುವುದು ಇಲ್ಲವೇ ಸುಸಜ್ಜಿತ, ವ್ಯವಸ್ಥಿತ ಕಚೇರಿಗಳು, ಆರೋಗ್ಯ ಕೇಂದ್ರಗಳು ಉಪಯೋಗ ಶೂನ್ಯವಾಗಿ ಅಣಕಿಸುವಂತೆ ಗೋಚರಿಸುವುದು ಇಲ್ಲಿ ಸರ್ವೇ ಸಾಮಾನ್ಯ. ಇಲ್ಲಿನ ಸಾರ್ವಜನಿಕ ಆರೋಗ್ಯ ಕೇಂದ್ರವೂ ಇದಕ್ಕೆ ಹೊರತಾಗಿಲ್ಲ.

ಬದಿಯಡ್ಕ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ನಲ್ಲಿರುವ ದಂತ ರೋಗ ನಿರ್ಣಯ ವಿಭಾಗ ನಾಶದತ್ತ ಸಾಗಿದೆ. ಈ ಕೊಠಡಿಯಲ್ಲಿರುವ ದಂತ ರೋಗ ನಿರ್ಣಯ ಅತ್ಯಾಧುನಿಕ ಯಂತ್ರಗಳು, ರೋಗಿಗಳಿಗೆ ಕುಳಿತುಕೊಳ್ಳುಲು ಸಿದ್ಧಪಡಿಸಿರುವ ಸೀಟು ಎಲ್ಲವೂ ತುಕ್ಕು ಹಿಡಿದು ನಾಶಗೊಳ್ಳುತ್ತಿದೆ. ದಂತರೋಗ ವಿಭಾಗಕ್ಕೆ ವೈದ್ಯರ ನೇಮಕ ನಡೆಯದಿರುವುದೇ ಇದಕ್ಕೆ ಕಾರಣವಾಯಿತು. ಬದಿಯಡ್ಕ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ ಒಂದು ಕೊಠಡಿಯನ್ನು ದಂತ ರೋಗ ವಿಭಾಗಕ್ಕಾಗಿ ಮೂರು ವರ್ಷಗಳ ಹಿಂದೆ ಮೀಸಲಿಡಲಾಗಿತ್ತು. ದಂತ ರೋಗ ತಪಾಸಣೆಗೆ ಬಳಸುವ ಅತ್ಯಾಧುನಿಕ ಉಪಕರಣಗಳು, ರೋಗಿಗಳನ್ನು ತಪಾಸಣೆ ಮಾಡಲು ಸಹಾಯಕವಾಗುವ ಆಧುನಿಕ ಆಸನ, ಇನ್ನಿತರ ವಸ್ತುಗಳನ್ನು ನೀಡಲಾಗಿತ್ತು. ಆದರೆ ಲಕ್ಷಾಂತರ ರೂ. ವ್ಯಯಿಸಿ ಇಷ್ಟೆಲ್ಲ ಸಾಮಾಗ್ರಿಗಳನ್ನು ಒದಗಿಸಿದ ಸರಕಾರ, ಈ ವಿಭಾಗಕ್ಕೆ ವೈದ್ಯರ ಹಾಗೂ ಸಹಾಯಕರ ನೇಮಕ ನಡೆಸಿರಲಿಲ್ಲ. ಹಲವು ರೋಗಿಗಳು ದಂತ ರೋಗ ನಿರ್ಣಯ ತಪಾಸಣೆಗೆ ಬಂದಿದ್ದರೂ ಅವರಿಗೆ ಚಿಕಿತ್ಸೆ ನೀಡದೆ ಮರಳಿ ಕಳುಹಿಸಲಾಗಿದೆ.

ಬದಿಯಡ್ಕ ಕಮ್ಯೂನಿಟಿ ಹೆಲ್ತ್‌ ಸೆಂಟರ್‌ನಲ್ಲಿ 30 ಹಾಸಿಗೆಗಳಿದ್ದು ಒಳರೋಗಿ ಚಿಕಿತ್ಸಾ ವ್ಯವಸ್ಥೆ ಸೌಲಭ್ಯವಿದೆ. ಆದರೆ ಯಾರನ್ನೂ ಅಡ್ಮಿಟ್‌ ಮಾಡಲು ಅಧಿಕೃತರು ಮುಂದಾಗುತ್ತಿಲ್ಲ. ರಾತ್ರಿ ವೇಳೆ ವೈದ್ಯರುಗಳ ಸೇವೆ ಇಲ್ಲದಿರುವುದೇ ಇದಕ್ಕೆ ಕಾರಣವೆನ್ನಲಾಗಿದೆ. ತಿಂಗಳುಗಳ ಹಿಂದೆ ಕಮ್ಯೂನಿಟಿ ಹೆಲ್ತ್‌ ಸೆಂಟರನ್ನು ತಾಲೂಕು ಆಸ್ಪತ್ರೆಯಾಗಿ ಭಡ್ತಿಗೊಳಿಸಲಾಯಿತು. ಆದರೆ ಎರಡೇ ದಿನಗಳಲ್ಲಿ ಅದು ರದ್ದುಗೊಂಡಿತು. ಇದರ ವಿರುದ್ಧ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಸೊಲ್ಲೆತ್ತಲು ಸಿದ್ಧರಿರಲಿಲ್ಲ. ಸರಕಾರ ಹಾಗೂ ಅಧಿಕೃತರು ಬದಿಯಡ್ಕ ಪ್ರದೇಶದ ಬಗ್ಗೆ ಮಲತಾಯಿ ಧೋರಣೆ ತೋರಿಸುತ್ತಿರುವ ಪ್ರತ್ಯಕ್ಷ ಉದಾಹರಣೆಯಾಗಿದೆ ಇಲ್ಲಿನ ಕಮ್ಯೂನಿಟಿ ಹೆಲ್ತ್‌ ಸೆಂಟರ್‌. ಮಳೆಗಾಲದಲ್ಲಿ ನೂರಾರು ರೋಗಿಗಳು ಇಲ್ಲಿಗಾಗಮಿಸುತ್ತಿದ್ದಾರೆ. ಇದೀಗ ಬಾಗಿಲು ಮುಚ್ಚಿರುವ ದಂತ ರೋಗ ವಿಭಾಗವನ್ನು ಮತ್ತೆ ತೆರೆದು ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಆದರೆ ಜನರ ಬೇಡಿಕೆಗಳು ಈಡೇರುವ ಯಾವುದೇ ಸೂಚನೆಗಳು ಇದುವರೆಗೆ ಗೋಚರಿಸಲಿಲ್ಲ.

– ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.