ಪ್ರತಿ ಗ್ರಾಮದಲ್ಲೂ ಸಹಪಂಕ್ತಿ ಭೋಜನ ನಡೆಯಲಿ


Team Udayavani, May 9, 2019, 3:00 AM IST

prati

ಹುಣಸೂರು: ಸಾಮಾಜಿಕ ಕ್ರಾಂತಿ ಹರಿಕಾರ ಬಸವಣ್ಣನ ಜಯಂತಿ ಅಂಗವಾಗಿ ತಾಲೂಕಿನ ಕಟ್ಟೆಮಳಲವಾಡಿಯಲ್ಲಿ ಸಹ ಪಂಕ್ತಿ ಭೋಜನ ನಡೆಯಿತು.

ಗ್ರಾಮದ ಆದಿಜಾಂಬವ ಸಮುದಾಯದ ಆಂಜನೇಯರ ಮನೆಯಲ್ಲಿ ದಸಂಸ ವತಿಯಿಂದ ಅಯೋಜಿಸಿದ್ದ ಬಸವಜಯಂತಿ ಹಾಗೂ ಸಹಪಂಕ್ತಿ ಭೋಜನದಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಮಾತನಾಡಿ, ದೇಶದಲ್ಲಿ ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ ತೊಲಗದ ಹೊರತು ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ.

ಈ ನಿಟ್ಟಿನಲ್ಲಿ ಕಟ್ಟೆಮಳಲವಾಡಿಯಲ್ಲಿ ಇಂತಹದ್ದೊಂದು ಅರ್ಥಪೂರ್ಣ ಕಾರ್ಯಕ್ರಮ ನಡೆದಿರುವುದು ಸ್ವಾಗತಾರ್ಹ. ಈ ರೀತಿಯ ಕಾರ್ಯಕ್ರಮ ಪ್ರತಿ ಗ್ರಾಮದಲ್ಲೂ ನಡೆದರೆ ಜಾತೀಯತೆ, ಅಸ್ಪೃಶ್ಯತೆ ತೊಲಗಲು ಸಾಧ್ಯ. ಇಂತಹ ಅನಿಷ್ಟ ಪದ್ಧಗಳ ವಿರುದ್ದ ಧ್ವನಿ ಎತ್ತ ಬೇಕಾದ್ದೂ ನಮ್ಮೆಲ್ಲರ ಆದ್ಯತೆಯಾಗಬೇಕು ಎಂದರು.

ಅಸ್ಪೃಶ್ಯತೆ ವಿರುದ್ಧ ಧ್ವನಿ: ಬ್ರಾಹ್ಮಣ ಸಮಾಜದಲ್ಲಿ ಹುಟ್ಟಿದ ಬಸವಣ್ಣ ಅಂದೇ ಅಸ್ಪೃಶ್ಯತೆ ವಿರುದ್ಧ ತನ್ನದೇ ಆದ ರೀತಿಯಲ್ಲಿ ದೊಡ್ಡ ಸಾಮಾಜಿಕ ಕ್ರಾಂತಿ ನಡೆಸುವ ಮೂಲಕ ಶೋಷಿತರ ಹಾಗೂ ದಲಿತರ ಸಮುದಾಯಗಳ ಜನರ ಬಾಳಿನಲ್ಲಿ ಬೆಳಕು ಚೆಲ್ಲಿದರು ಎಂದು ಸ್ಮರಿಸಿದರು.

ಕಟ್ಟೆಮಳಲವಾಡಿಯ ಬ್ರಾಹ್ಮಣ ಸಮಾಜದ ಯಜಮಾನರಾದ ಕೇಶವಮೂರ್ತಿ, ರಾಮಮೂರ್ತಿ ಮಾತನಾಡಿ, ಅಸ್ಪೃಶ್ಯತೆ ನಿರ್ಮೂಲನೆ ಆಗಬೇಕು. ಎಲ್ಲರೂ ಸಮಾನತೆಯಿಂದ, ಸೋದರತೆಯಿಂದ ಗ್ರಾಮಗಳಲ್ಲಿ ಬದುಕುವ ವಾತಾವರಣ ನಿರ್ಮಾಣವಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಕಟ್ಟೆಮಳಲವಾಡಿ ಯಜಮಾನರಾದ ಕೃಷ್ಣಶೆಟ್ಟಿ, ಅಂಕಯ್ಯ, ಶಂಕ್ರಯ್ಯ, ಪರಸಯ್ಯ, ಗ್ರಾಪಂ ಸದಸ್ಯರಾದ ಆಂಜನೇಯ, ದೇವರಾಜು, ಶಿವು, ಗಾಯತ್ರಿ, ಮುಖಂಡರಾದ ಬಸವಲಿಂಗಯ್ಯ, ಪಿ.ಪುಟ್ಟರಾಜು, ಮುಸ್ಲಿಂ ಸಮಾಜದ ನಸ್ರುಲ್ಲಾಖಾನ್‌, ಅನ್ಸರ್‌, ಅಗ್ರಹಾರದ ಸಾಕಯ್ಯ, ಮುಖಂಡರಾದ ಸಂತೋಷ,

ದೇವೇಂದ್ರ, ಗಜೇಂದ್ರ, ವೆಂಕಟೇಶ, ನಟರಾಜು, ಕಿರಣ, ರಜನಿ, ಗಾರೆ ಕೆಲಸ ಸಂಘದ ಸೋಮಶೇಖರಮೂರ್ತಿ, ಮಹಿಳೆಯರು ಸೇರಿದಂತೆ ಹಲವರು ಸಹಪಂಕ್ತಿ ಭೋಜನ ಮಾಡಿದರು. ಹೊನ್ನೇನಹಳ್ಳಿ ವಸಂತ ಕಲಾ ತಂಡದವರು ಜಾಗೃತಿ ಹಾಡುಹಾಡಿದರು. ಇದೇ ವೇಳೆ 30 ನಿರ್ಗತಿಕ ಮಹಿಳೆಯರಿಗೆ ಬಟ್ಟೆ ವಿತರಿಸಲಾಯಿತು.

ದಲಿತರ ಮನೆಯಲ್ಲಿ ಬಸವ ಜಯಂತಿ: ಕಾರ್ಯಕ್ರಮದ ಆಯೋಜಕ ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ನಿಂಗರಾಜ್‌ ಮಲ್ಲಾಡಿ ಮಾತನಾಡಿ, ಬಸವಣ್ಣನ ಜಯಂತಿಯನ್ನು ದಲಿತರ ಮನೆಯಲ್ಲಿ ಆಚರಣೆ ಮಾಡುತ್ತಿರುವುದು ದಲಿತ ಸಮಾಜಕ್ಕೆ ಉತ್ತಮ ಸಂದೇಶ ನೀಡಿದಂತಾಗಿದೆ.

ಈ ನಿಟ್ಟಿನಲ್ಲಿ ಕಳೆದ ನಾಲ್ಕು ವರ್ಷಗಳಿಂದ ದಲಿತ ಸಂಘರ್ಷ ಸಮಿತಿಯು ತಾಲೂಕಿನ ಬಿಳಿಗೆರೆ, ಹುಣಸೂರು ನಗರ ಮತ್ತಿತರೆಡೆಗಳಲ್ಲಿ ಸಹ ಪಂಕ್ತಿ ಭೋಜನ ಆಯೋಜಿಸುತ್ತಿದೆ. ಅಸ್ಪೃಶ್ಯತೆಯನ್ನು ಕೇವಲ ಕಾನೂನಿಂದ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ.

ಸಮಾಜದ ಎಲ್ಲಾ ಜಾತಿಯ ಜನರಿಂದ ಈ ಅನಿಷ್ಟ ಪದ್ಧತಿ ತೊಲಗಿಸಲು ಸಾಧ್ಯವಿದೆ. ದಲಿತರು ಇಂದಿಗೂ ಕೆಲ ಗ್ರಾಮಗಳಲ್ಲಿ ದೇವಸ್ಥಾನಗಳಿಗೆ, ಹೋಟೆಲ್‌ಗ‌ಳಿಗೆ, ಕ್ಷೌರದ ಅಂಗಡಿಗಳಲ್ಲಿ ನಿರ್ಬಂಧ ಹೇರಲಾಗಿದೆ. ಇದರ ವಿರುದ್ಧ ಇತರೆ ಸಮಾಜದ ಜನರು ಧ್ವನಿ ಎತ್ತಿ ಸಾಮಾಜಿಕ ನ್ಯಾಯ ಕೊಡಿಸಬೇಕಿದೆ ಎಂದು ಕೋರಿದರು.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.