ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮೈತ್ರಿ
Team Udayavani, May 9, 2019, 3:06 AM IST
ಬೆಂಗಳೂರು: ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಬಲ ಕುಗ್ಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ಗಳು ಆಯ್ದ ಕಡೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಜತೆ ಚರ್ಚಿಸಿದರು.
ಗೃಹ ಕಚೇರಿ ಕೃಷ್ಣಾಗೆ ಬುಧವಾರ ಆಗಮಿಸಿದ್ದ ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಜತೆ ಸಿಎಂ ಈ ಕುರಿತು ಮಾತುಕತೆ ನಡೆಸಿದರು. ಎಲ್ಲೆಲ್ಲಿ ಚುನಾವಣೆ ನಡೆಯಲಿದೆಯೋ ಅಲ್ಲಿನ ಜಿಲ್ಲಾ ಹಾಗೂ ತಾಲೂಕು ಘಟಕಗಳ ಅಧ್ಯಕ್ಷರ ಜತೆ ಮಾತನಾಡಿ, ಸಾಧ್ಯವಿರುವ ಕಡೆ ಹೊಂದಾಣಿಕೆ ಅಭ್ಯರ್ಥಿ ಹಾಕುವ ಬಗ್ಗೆ ಸೂಚನೆ ನೀಡಬೇಕು ಎಂಬ ಬಗ್ಗೆ ಚರ್ಚೆಯಾಯಿತು ಎಂದು ಹೇಳಲಾಗಿದೆ.
63 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಕಡೆ ಕಾಂಗ್ರೆಸ್-ಜೆಡಿಎಸ್ ಸಾಧ್ಯವಾದರೆ ಚುನಾವಣೆ ಪೂರ್ವ ಮೈತ್ರಿ ಮಾಡಿಕೊಳ್ಳಲು ಜಿಲ್ಲಾ ಘಟಕಗಳಿಗೆ ಅಧಿಕಾರ ನೀಡೋಣ ಎಂಬ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ತಿಳಿದು ಬಂದಿದೆ.
ಈ ಸಂಬಂಧ ಜೆಡಿಎಸ್ ಜಿಲ್ಲಾ ಘಟಕಗಳ ಸಭೆ ನಡೆಯಲಿದೆ. ಕಾಂಗ್ರೆಸ್ ಸಹ ಜಿಲ್ಲಾ ಘಟಕಗಳ ಜತೆ ಸಭೆ ನಡೆಸಲಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಚಾರದಲ್ಲಿ ಸ್ಥಳೀಯ ಮಟ್ಟದಲ್ಲಿನ ಪರಿಸ್ಥಿತಿ ಬಗ್ಗೆಯೂ ಜಿಲ್ಲಾ ಘಟಕಗಳಿಂದ ವರದಿ ತರಿಸಿಕೊಳ್ಳಲು ರಡೂ ಪಕ್ಷಗಳು ನಿರ್ಧರಿಸಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ