ವಾಲ್ಮಾರ್ಕ್ ಕಂಪನಿ ಮೇಲೆ ಮತ್ತೊಮ್ಮೆ ಎಸಿಬಿ ದಾಳಿ
Team Udayavani, May 9, 2019, 3:03 AM IST
ಬೆಂಗಳೂರು: ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ವಾಲ್ಮಾರ್ಕ್ ಕಂಪನಿ ನಿರ್ದೇಶಕ ರತನ್ ಬಾಬುಲಾಲ್ ಲಾಥ್ ಅವರ ಸಂಸ್ಥೆ ಮತ್ತು ನಿವಾಸಗಳ ಮೇಲೆ ಬುಧವಾರ ಮತ್ತೊಮ್ಮೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬುಧವಾರ ಬೆಳಗ್ಗೆ ವಿಚಾರಣೆಗೆ ಹಾಜರಾಗಿದ್ದ ರತನ್ ಬಾಬುಲಾಲ್ ಲಾಥ್ ಅವರನ್ನು ಸಂಜೆವರೆಗೂ ವಿಚಾರಣೆ ನಡೆಸಿದ ಎಸಿಬಿ ಅಧಿಕಾರಿಗಳು, ಅನಂತರ ರೆಸಿಡೆನ್ಸಿ ರಸ್ತೆಯಲ್ಲಿನ ವಾಲ್ಮಾರ್ಕ್ ಕಂಪನಿ ಮತ್ತು ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿನ ನಿವಾಸದ ಮೇಲೆ ದಾಳಿ ನಡೆಸಿ ಮತ್ತಷ್ಟು ದಾಖಲೆಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಜತೆಗೆ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗೌತಮ್ ನಿವಾಸದ ಮೇಲೂ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ. ಶೋಧ ಕಾರ್ಯ ವೇಳೆ ಸರ್ಕಾರಿ ದಾಖಲೆಗಳು ಪತ್ತೆಯಾಗಿವೆ. ಅವುಗಳು ಬಿಬಿಎಂಪಿ ಮತ್ತು ಬಿಡಿಎ ಕಚೇರಿಯಲ್ಲಿರಬೇಕಾದ ದಾಖಲೆಗಳು ಖಾಸಗಿ ವ್ಯಕ್ತಿಗಳ ಸ್ಥಳಗಳಿಗೆ ಹೇಗೆ ಬಂದಿವೆ ಎಂಬುದರ ಬಗ್ಗೆ ಎಸಿಬಿ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಮೇ 4ರಂದು ವಾಲ್ಮಾರ್ಕ್ ಕಂಪನಿ, ರತನ್ ಬಾಬುಲಾಲ್ ಲಾಥ್, ಗೌತಮ್, ಅಮೀತ್ ಜೆ. ಬೋಳಾರ್, ಮುನಿರಾಜಪ್ಪ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ