ಬೋಟ್‌ ಅವಶೇಷ ಪತ್ತೆ; ಮೃತದೇಹಗಳ ಮಾಹಿತಿ ಇಲ್ಲ

ನೌಕಾಪಡೆಯಿಂದ ಉಡುಪಿ ಎಸ್‌ಪಿಗೆ ಅಧಿಕೃತ ಮಾಹಿತಿ

Team Udayavani, May 9, 2019, 6:00 AM IST

BOAT-MISSING

ಉಡುಪಿ: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟು 7 ಮಂದಿ ಮೀನುಗಾರರ ಸಹಿತ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟ್‌ನ ಅವಶೇಷ ಪತ್ತೆಯಾಗಿರುವ ಕುರಿತು ನೌಕಾಪಡೆ ಉಡುಪಿ ಎಸ್‌ಪಿಯವರಿಗೆ ಮೇ 7ರಂದು ಅಧಿಕೃತ ಮಾಹಿತಿ ನೀಡಿದೆ.

ಮೇ 1ರಂದು ಅವಶೇಷ ಪತ್ತೆಯಾಗಿರುವ ಬಗ್ಗೆ ನೌಕಾಪಡೆ ತನ್ನ ಟ್ವಿಟರ್‌ನಲ್ಲಿ ಪ್ರಕಟಿಸಿತ್ತು. ಶಾಸಕ ರಘುಪತಿ ಭಟ್‌ ಕೂಡ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಈ ಬಗ್ಗೆ ವರದಿ ನೀಡುವಂತೆ ಎಸ್‌ಪಿ ನಿಶಾ ಜೇಮ್ಸ್‌ ಮೇ 3ರಂದು ಕಾರವಾರ ನೌಕಾ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

ಮೃತದೇಹ ಮಾಹಿತಿ ಇಲ್ಲ
ಎ. 30ರಿಂದ ಮೇ 2ರ ವರೆಗೆ ನಡೆದ ಕಾರ್ಯಾಚರಣೆಯಲ್ಲಿ ಮಹಾರಾಷ್ಟ್ರದ ಮಾಲ್ವಾಣ್‌ ಪ್ರದೇಶದ ಸಮುದ್ರ ದಡದಿಂದ 30 ಕಿ.ಮೀ. ದೂರದಲ್ಲಿ, 60 ಮೀ. ಆಳದಲ್ಲಿ ಬೋಟ್‌ನ ಅವಶೇಷ ಪತ್ತೆಯಾಗಿದೆ. ಆದರೆ ಮೃತದೇಹಗಳ ಕುರಿತು ಮಾಹಿತಿ ಸಿಕ್ಕಿಲ್ಲ.

ನಿರಂತರ ಸಂಪರ್ಕ
ಮೀನುಗಾರರ ನಾಪತ್ತೆ ಬಗ್ಗೆ ದೂರು ದಾಖಲಾಗಿದೆ. ಹಾಗಾಗಿ ಪೊಲೀಸ್‌ ಇಲಾಖೆ ಸೂಕ್ತ ಭೌತಿಕ ಸಾಕ್ಷ್ಯಾಧಾರವಿಲ್ಲದೆ 7 ವರ್ಷಗಳ ವರೆಗೆ ಈ ಪ್ರಕರಣವನ್ನು ಅಂತ್ಯಗೊಳಿಸುವಂತಿಲ್ಲ. ಆದರೆ ಪೊಲೀಸ್‌ ಇಲಾಖೆ ನೇರವಾಗಿ ಸಾಕ್ಷ್ಯಾಧಾರ ಸಂಗ್ರಹ ನಡೆಸುವುದು ಅಸಾಧ್ಯ. ನೌಕಾಪಡೆ, ಕರಾವಳಿ ಕಾವಲು ಪಡೆ ಮೊದಲಾದವುಗಳ ನೆರವು ಪಡೆಯಲಾಗುವುದು. ಮಹಾರಾಷ್ಟ್ರ ಸಿಂಧುದುರ್ಗಾ ಎಸ್‌ಪಿ ಅವರ ಜತೆಗೂ ಸಂವಹನ ನಡೆಸಲಾಗಿದೆ. ನೌಕಾಪಡೆಯಿಂದ ಅಗತ್ಯ ಮಾಹಿತಿ ಪಡೆದುಕೊಳ್ಳುತ್ತೇವೆ. ಇದೊಂದು ಅಪರೂಪದ ಪ್ರಕರಣ. ಆದಾಗ್ಯೂ ಅವಶೇಷ ದೊರಕಿರುವುದು ಮಹತ್ವದ ಬೆಳವಣಿಗೆ ಎಂದು ಎಸ್‌ಪಿ ಹೇಳಿದ್ದಾರೆ.

ಚಿತ್ರವೂ ನೌಕಾಪಡೆಯದ್ದು
ಐಎನ್‌ಎಸ್‌ ಕೊಚ್ಚಿ ಹಡಗಿನ ತಳಭಾಗಕ್ಕೆ ಹಾನಿಯಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಚಿತ್ರವನ್ನು ಕೂಡ ನೌಕಾಪಡೆಯೇ ಬಿಡುಗಡೆ ಮಾಡಿತ್ತು. ಹಡಗಿಗೆ ಹಾನಿಯಾಗಿರುವ ಕುರಿತು ಕೂಡ ಹೆಚ್ಚಿನ ಮಾಹಿತಿ ಕೋರಲಾಗಿದೆ ಎಂದು ಎಸ್‌ಪಿ ಪ್ರತಿಕ್ರಿಯಿಸಿದ್ದಾರೆ.

ಶಿಪ್ಪಿಂಗ್‌ ನಿರ್ದೇಶನಾಲಯಕ್ಕೂ ಪತ್ರ
ಐಎನ್‌ಎಸ್‌ ಕೊಚ್ಚಿ ಸಾಗಿರುವ ಮಾರ್ಗದಲ್ಲೇ ಮುಂಬಯಿಯಿಂದ ಪ.ಬಂಗಾಲದ ಹಾಲ್ಡಿಯಾಕ್ಕೆ ಸರಕು ಸಾಗಾಟ ನೌಕೆ ಸಂಚರಿಸಿರುವ ಮಾಹಿತಿಗಳ ಹಿನ್ನೆಲೆಯಲ್ಲಿ ಶಿಪ್ಪಿಂಗ್‌ ಸಚಿವಾಲಯದ ನಿರ್ದೇಶನಾಲಯಕ್ಕೂ ಪತ್ರ ಬರೆಯಲಾಗಿದೆ ಎಂದು ಎಸ್‌ಪಿ ಪ್ರತಿಕ್ರಿಯಿಸಿದ್ದಾರೆ.

“ಪರಿಹಾರ ಬೇಡ; ಮೊದಲು
ನಮ್ಮವರನ್ನು ಹುಡುಕಿಕೊಡಿ’
ಮಲ್ಪೆ: ಸುವರ್ಣ ತ್ರಿಭುಜ ಮುಳುಗಿರುವುದನ್ನು ಐಎನ್‌ಎಸ್‌ ನಿರೀಕ್ಷಕ ಪತ್ತೆಹಚ್ಚಿದೆಯಾದರೂ ಅದನ್ನು ಮೇಲೆತ್ತುವುದು ಯಾವಾಗ ಮತ್ತು ಯಾರು ಎನ್ನುವುದು ಪ್ರಶ್ನೆಯಾಗಿದೆ. ಈ ಮಧ್ಯೆ ರಾಜ್ಯ ಸರಕಾರ ನಾಪತ್ತೆಯಾದ ಮೀನುಗಾರರ ಕುಟುಂಬಕ್ಕೆ ಪರಿಹಾರ ನೀಡಲು ಮುಂದಾಗಿದೆಯಾದರೂ ಮೀನುಗಾರರ ಕುಟುಂಬ ನಮ್ಮವರನ್ನು ಹುಡುಕಿಕೊಡಿ ಎಂದು ಆಗ್ರಹಿಸುತ್ತಿದೆ.

ನಾಪತ್ತೆಯಾಗಿರುವ ಭಟ್ಕಳ ಅಳ್ವೆಕೋಡಿಯ ಹರೀಶ್‌ (23) ಅವರ ಮಾವ ಪಾಂಡು ಅವರು ಹೇಳುವಂತೆ ಜೀವನ ನಿರ್ವಹಣೆಗಾಗಿ ಪರಿಹಾರವಾದರೆ ಸರಿ. ಮೃತರಾಗಿದ್ದಾರೆ ಎಂಬ ನಿಟ್ಟಿನಲ್ಲಿ ಪರಿಹಾರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದಿದ್ದಾರೆ.

ಮೇ 16ರಂದು ಮಲ್ಪೆ ಮೀನುಗಾರ ಸಂಘದವರು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಲ್ಲಿಗೆ ನಮ್ಮನ್ನು ಕರೆದುಕೊಂಡು ಹೋಗಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಿದೇªವೆ ಎಂದರು.

ಸ್ವಂತ ಮನೆಯೇ ಇಲ್ಲ
ಹರೀಶ್‌ ಕುಟುಂಬಕ್ಕೆ ಸ್ವಂತ ಮನೆಯೇ ಇಲ್ಲ. ಮಾವ ಪಾಂಡುರಂಗ ಅವರ ಮನೆಯಲ್ಲೇ ಇಡೀ ಕುಟುಂಬ ವಾಸವಾಗಿದೆ. ತಂದೆ ಶನಿಯಾರ್‌ ಮೊಗೇರ್‌ ಮತ್ತು ತಾಯಿ ಧನವಂತಿ ಮೀನು ಮಾರಿ ಜೀವನ ಸಾಗಿಸುತ್ತಿದ್ದಾರೆ.

ಟಾಪ್ ನ್ಯೂಸ್

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.