ಪೂರ್ಣ ಡಾಂಬರು ಕಾಣದ ಮಳ್ಳಿ ರಸ್ತೆ

ರಸ್ತೆಗೆ ಹಿಡಿದ ಗ್ರಹಣ ಯಾವಾಗ ತಪ್ಪುವುದೋ

Team Udayavani, May 9, 2019, 10:03 AM IST

9-May-2

ಯಡ್ರಾಮಿ: ಮಳ್ಳಿ-ನಾಗರಹಳ್ಳಿ ರಸ್ತೆ ಪೂರ್ಣ ಡಾಂಬರೀಕರಣ ಇಲ್ಲದೇ ತಗ್ಗುಗಳಿಂದ ಕೂಡಿದೆ.

ಯಡ್ರಾಮಿ: ತಾಲೂಕಿನಿಂದ ಕೇವಲ 12 ಕಿ.ಮೀ. ದೂರದ ಮಳ್ಳಿ-ನಾಗರಹಳ್ಳಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಪೂರ್ಣವಾಗಿ ಡಾಂಬರ್‌ ಕಾಣದ ನತದೃಷ್ಟ ರಸ್ತೆಯಾಗಿದೆ.

ರಸ್ತೆ ಆರಂಭದಿಂದಲೂ ಇಲ್ಲಿಯವರೆಗೂ ಸಂಪೂರ್ಣ ಡಾಂಬರ ಭಾಗ್ಯದಿಂದ ವಂಚಿತವಾಗಿದೆ. ಪಟ್ಟಣದ ಅಂಬೇಡ್ಕರ್‌ ವೃತ್ತದಿಂದ ಸುಂಬಡದ ವರೆಗೆ 3.8 ಕಿ.ಮೀ ಡಾಂಬರು ಹಾಕಿದ್ದು, ನಾಗರಹಳ್ಳಿ ಅಂಬೇಡ್ಕರ್‌ ವೃತ್ತದಿಂದ 2.6 ಕಿ.ಮೀ ಡಾಂಬರೀಕರಣ ಆಗಿದೆ. ನಡುವೆ ಐದಾರು ಕಿ.ಮೀ ರಸ್ತೆ ತಗ್ಗು ದಿನ್ನೆಗಳಿಂದ ಕೂಡಿದೆ. ಇದರಿಂದ ನಿತ್ಯ ಸಂಚಾರಕ್ಕೆ ಆಗುತ್ತಿರುವ ತೊಂದರೆ ತಪ್ಪದಂತಾಗಿದೆ.

ಒಮ್ಮೆಲೆ ಎದುರು-ಬದುರು ದೊಡ್ಡ ವಾಹನಗಳು ಬಂದಾಗ ಚಾಲಕರ ಮಧ್ಯೆ ಘರ್ಷಣೆಗಳಾದ ಅನೇಕ ಘಟನೆಗಳು ನಡೆದಿವೆ. ತಾಲೂಕಿನ ಗ್ರಾಮಗಳಾದ ಅಲ್ಲಾಪುರ, ಕಣಮೇಶ್ವರ, ಕೊಂಡಗೂಳಿ, ಬಿರಾಳ, ಐನಾಪುರ, ಮಾಗಣಗೇರಾ, ಕುರುಳಗೇರಾ, ನಾಗರಹಳ್ಳಿ, ಮಳ್ಳಿ, ಕಾಚಾಪುರ, ದುಮ್ಮದ್ರಿ ಹಳ್ಳಿಗಳಿಂದ ನಿತ್ಯ ಕೆಲಸದ ನಿಮಿತ್ತ ತಿರುಗುವ ಜನರು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಚುನಾವಣೆ ಕರ್ತವ್ಯದಲ್ಲಿ ನಿರತರಾಗಿದ್ದ ಅಧಿಕಾರಿಗಳಾಗಲಿ, ಸೋಲು, ಗೆಲುವಿನ ಬಿಗುವು ಮತ್ತು ಆತಂಕದಲ್ಲಿರುವ ಜನಪ್ರತಿನಿಧಿಗಳಾಗಲಿ ಇನ್ನಾದರೂ ರಸ್ತೆಯ ಕಡೆ ಗಮನಹರಿಸುವರೇ ಎನ್ನುವ ದೊಡ್ಡ ಪ್ರಶ್ನೆಯಾಗಿದೆ. ಪೂರ್ಣ ಪ್ರಮಾಣದ ಡಾಂಬರೀಕರಣ ಆದದ್ದಾದರೆ ಈ ಭಾಗದ ಜನತೆ ತಾಲೂಕಿಗೆ ಕೇವಲ 15 ನಿಮಿಷಗಳಲ್ಲಿ ಪ್ರಯಾಣಿಸಬಹುದಾಗಿದೆ. ಈ ರಸ್ತೆಗೆ ಹಿಡಿದ ಗ್ರಹಣ ಎಂದು ತಪ್ಪವುದೋ ಕಾಯ್ದು ನೋಡಬೇಕಾಗಿದೆ.

ಮುಖ್ಯಮಂತ್ರಿಗಳಾಗಿದ್ದ ಧರ್ಮಸಿಂಗ್‌ ಅವರು ಇದ್ದಾಗಲೇ ಈ ರಸ್ತೆ ಡಾಂಬರೂ ಕಂಡಿಲ್ಲ. ಈಗ ದುರಸ್ತಿ ಆಗುವ ಭರವಸೆ ನಮಗಿಲ್ಲ. ಅರಳಗುಂಡಗಿಯಿಂದ ಯಾಳಗಿತನಕ ಟೆಂಡರ್‌ ಆಗಿದೆ ಎಂದು ಹೇಳುವುದೇ ನಡೆದಿದೆ ಹೊರತು ಡಾಂಬರನ್ನು ರಸ್ತೆ ಕಾಣುತ್ತಿಲ್ಲ. 30 ವರ್ಷದಿಂದ ನಾನು ನೋಡಿದ್ದೇನೆ.
• ಜಗದೀಶ ತಳವಾರ,
ತಾಲೂಕಾ ಆಧ್ಯಕ್ಷ, ಬಿಜೆಪಿ ಹಿಂದುಳಿದ ವರ್ಗಗಳ ಘಟಕ ಜೇವರ್ಗಿ

ಸಂತೋಷ ನವಲಗುಂದ

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.