ಅನಾಥವಾಗಿದೆ ಬಾಲಕರ ವಸತಿ ನಿಲಯ

ಅನೈತಿಕ ಚಟುವಟಿಕೆಗಳ ತಾಣ•ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಿ

Team Udayavani, May 9, 2019, 10:48 AM IST

9-May-6

ದೇವರಹಿಪ್ಪರಗಿ: ಮುಳಸಾವಳಗಿ ಗ್ರಾಮದ ಸರಕಾರಿ ಮ್ಯಾಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯ ಸಿಬ್ಬಂದಿ, ಬಾಲಕರಿಲ್ಲದೇ ಅನಾಥ ಸ್ಥಿತಿಯಲ್ಲಿರುವುದು.

ದೇವರಹಿಪ್ಪರಗಿ: ಬಾಲಕರ ಶೈಕ್ಷಣಿಕ ಚಟುವಟಿಕೆಗಳಿಂದ ಕಂಗೊಳಿಸುತ್ತಿದ್ದ ವಸತಿ ನಿಲಯವಿಂದು ಬಾಲಕರು ಸೇರಿದಂತೆ ಸಿಬ್ಬಂದಿಯೂ ಇರದೇ ಸರಕಾರದಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾಗಿ ಅನಾಥವಾಗಿದೆ.

ತಾಲೂಕಿನ ಮುಳಸಾವಳಗಿ ಗ್ರಾಮದ ಸರಕಾರಿ ಮ್ಯಾಟ್ರಿಕ್‌ ಪೂರ್ವ ಬಾಲಕರ ವಸತಿ ನಿಲಯವೇ ಈ ದುಸ್ಥಿತಿಗೆ ಒಳಗಾದ ಸುಸಜ್ಜಿತ ಕಟ್ಟಡ. ಈ ಕಟ್ಟಡದಲ್ಲಿ ವಿಶಾಲವಾದ ಆರು ಕೋಣೆಗಳು, ಐದು ಸ್ನಾನ ಗೃಹಗಳು, ಐದು ಶೌಚಾಲಯಗಳು, ಅಡುಗೆ ಮನೆ, ಕೈ ತೊಳೆದುಕೊಳ್ಳಲು ನೀರಿನ ತೊಟ್ಟಿ, ನಡುವೆ ವಿಶಾಲವಾದ ಒಳಾಂಗಣವಿದೆ.

ನಿಲಯ ಪಾಲಕರು ಇರುವ ಕೋಣೆಯಲ್ಲಿ ನಿಲಯ ಹಾಗೂ ಇಲಾಖೆ ಕುರಿತಾಗಿ ಕೊನೆಯದಾಗಿ ನಮೂದಿಸಿದ ಮಾಹಿತಿ ಸ್ಪಷ್ಟವಾಗಿ ಗೋಚರಿಸುತ್ತದೆ. ಹೊರಗಡೆ ಬಟ್ಟೆ ತೊಳೆಯಲು ಅಗತ್ಯವಾದ ನೀರಿನ ತೊಟ್ಟಿಗಳಿದ್ದು, ಇವುಗಳೆಲ್ಲ ಬಳಕೆಯಿಲ್ಲದ ಕಾರಣ ದುಸ್ಥಿತಿಯತ್ತ ಸಾಗುತ್ತಿವೆ. ನಿಲಯದ ಮೇಲಿದ್ದ ನೀರು ಸಂಗ್ರಹಣೆಯ ಸಿಂಟೆಕ್ಸ್‌ ಒಡೆದು ಹಾಳಾಗಿ ಬಳಕೆಗೆ ಬಾರದಂತಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ವಸತಿ ನಿಲಯ ಬಂದಾಗಿದೆ.

ಬಾಲಕರ ನಿಲಯವಿಂದು ಅನೈತಿಕ, ಅಕ್ರಮ ಚಟುವಟಿಕೆಗಳ ತಾಣವಾಗಿದೆ. ನಿಲಯದ ಮುಂಬಾಗಿಲಿಗೆ ಕೀಲಿ ಜಡಿದು ಮುಚ್ಚಿದ್ದರೂ ಸಹ ಕೆಲವು ಕಿಡಿಗೇಡಿಗಳು ಹಿಂದಿನ ಬಾಗಿಲನ್ನು ಒಡೆದು ತಮ್ಮ ಕಾರ್ಯಗಳಿಗೆ ಬಳಕೆ ಮಾಡಿಕೊಂಡಿದ್ದಾರೆ. ಇಂದು ವಿದ್ಯಾರ್ಥಿಗಳಿಲ್ಲದೆ ಅನಾಥವಾಗಿದೆ.

ಲಕ್ಷಾಂತರ ವೆಚ್ಚದಲ್ಲಿ ನಿರ್ಮಿಸಿದ ಕಟ್ಟಡ ಹಾಳಾಗಬಾರದು. ವಸತಿ ನಿಲಯವನ್ನು ಈವರೆಗೆ ನಿರ್ಲಕ್ಷ್ಯ ಮಾಡಿದ ಪರಿಣಾಮವೇ ಇಂದಿನ ಸ್ಥಿತಿಗೆ ಕಾರಣ. ಆದ್ದರಿಂದ ಸರಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ಇನ್ನಾದರೂ ಎಚ್ಚೆತ್ತು ಈ ಕಟ್ಟಡದಲ್ಲಿ ಪುನಃ ವಿದ್ಯಾರ್ಥಿ ನಿಲಯ ಅಥವಾ ಇನ್ನಾವುದೇ ಸರಕಾರಿ ಕಚೇರಿಗಳನ್ನು ಪ್ರಾರಂಭಿಸುವ ಕ್ರಮಕ್ಕೆ ಮುಂದಾಗಬೇಕು. ಇಲ್ಲವೇ ನಿಲಯದ ಹತ್ತಿರವೇ ಇರುವ ಪ್ರೌಢಶಾಲೆ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿ ಕಟ್ಟಡವನ್ನು ಉಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಬಾಲಕರ ಪ್ರವೇಶಾತಿ ಕೊರತೆಯಿಂದ ವಸತಿ ನಿಲಯ ಬಂದಾಗಿದೆ. ಕಟ್ಟಡದ ಕುರಿತು ಯಾವುದೇ ಇಲಾಖೆಯಿಂದ ಬೇಡಿಕೆ ಬಂದಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹಸ್ತಾಂತರಿಸಲಾಗುವುದು.
ಮಹೇಶ ಪೋದ್ದಾರ,
ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ

ಕಳೆದ ನಾಲ್ಕು ವರ್ಷಗಳಿಂದ ವಸತಿ ನಿಲಯ ಪಾಳು ಬಿದ್ದಿದೆ. ವಿದ್ಯಾರ್ಥಿಗಳ ಕೊರತೆ ನೆಪದಿಂದ ಸ್ಥಗಿತಗೊಳಿಸಲಾದ ವಸತಿ ನಿಲಯವೀಗ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಶೀಘ್ರವೇ ವಸತಿ ನಿಲಯ ಪ್ರಾರಂಭಿಸಬೇಕು. ಇಲ್ಲದಿದ್ದರೆ ಕಟ್ಟಡ ಬೇರೆ ಕಾರ್ಯಕ್ಕೆ ಸದುಪಯೋಗವಾಗುವಂತೆ ನೋಡಿಕೊಳ್ಳಬೇಕು.
•ಉಮೇಶ ಬಿರಾದಾರ,
ಕರವೇ ರೈತ ಘಟಕದ ತಾಲೂಕಾಧ್ಯಕ್ಷ, ಮುಳಸಾವಳಗಿ

ಪ್ರವೀಣ ಕುಲಕರ್ಣಿ

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.