ಸ್ಥಳೀಯ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ


Team Udayavani, May 9, 2019, 2:15 PM IST

hav-5

ಬ್ಯಾಡಗಿ: ಮೇ 29 ರಂದು ನಡೆಯಲಿರುವ ಸ್ಥಳೀಯ ಪುರಸಭೆಯ ಚುನಾವಣೆಗೆ ಮೇ 9 ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಹಶೀಲ್ದಾರ್‌ ಕೆ.ಗುರುಬಸವರಾಜ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾ ಭವನದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 9 ರಿಂದ 16ರ ವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದ್ದು ಮೇ 17 ನಾಮಪತ್ರ ಪರಿಶೀಲನೆ, ಮೇ 20 ನಾಮಪತ್ರ ಪಡೆಯಲು ಅಂತಿಮ ದಿನ, ಮೇ 29 ರಂದು ಮತದಾನ ಹಾಗೂ ಅವಶ್ಯಕತೆ ಇದ್ದಲ್ಲಿ ಮೇ 30 ರಂದು ಮರು ಮತದಾನಕ್ಕೆ ದಿನ ನಿಗದಿ ಪಡಿಸಲಾಗಿದ್ದು, ಮೇ 31 ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.

ಒಟ್ಟು 23182 ಮತದಾರರು: ಇಪ್ಪತ್ಮೂರು ವಾರ್ಡ್‌ಗಳಿಂದ 11288 ಪುರುಷರು ಹಾಗೂ 11880 ಮಹಿಳೆಯರು ಇತರೆ 4 ಸೇರಿದಂತೆ ಒಟ್ಟು 23182 ಮತದಾರರಿದ್ದಾರೆ ಎಂದರು. ಪ್ರಸಕ್ತ ಚುನಾವಣೆಯಲ್ಲಿ ಮತದಾನಕ್ಕೆ ಬ್ಯಾಲೆಟ್ ಪೇಪರ್‌ ಬದಲಾಗಿ ಇವಿಎಂ ಮಿಷನ್‌ಗಳನ್ನು ಬಳಕೆ ಮಾಡಲಾಗುತ್ತಿದೆಯಾದರೂ, ಹಾಕಿದ ಮತವನ್ನು ದೃಢೀಕರಿಸಿಕೊಳ್ಳಲು ಬಳಕೆ ಮಾಡಲಾಗುತ್ತಿದ್ದ ವಿವಿ ಪ್ಯಾಟ್ ಮಾತ್ರ ಈ ಚುನಾವಣೆಯಲ್ಲಿ ಬಳಕೆಯಾಗುತ್ತಿಲ್ಲ ಎಂದರು.

ಮೕವರು ಚುನಾವಣಾಧಿಕಾರಿಗಳು: ವಾರ್ಡ್‌ಗಳಿಗನುಸಾರ ಮೂವರು ಆರ್‌ಒ (ರಿಟರ್ನಿಂಗ್‌ ಆಫಿಸರ್‌) ಹಾಗೂ ಮೂವರು ಏಪಿ ಆರ್‌ಒಗಳನ್ನು ಆಯೋಜನೆ ಮಾಡಲಾಗಿದೆ. ಅದರಲ್ಲಿ ವಾರ್ಡ್‌ ಸಂಖ್ಯೆ 1 ರಿಂದ 8ರ ವರೆಗೆ ಅಕ್ಷರದಾಸೋಹ ಸಹಾಯಕ ನಿರ್ದೇಶಕ ಎನ್‌.ತಿಮ್ಮಾರೆಡ್ಡಿ, (ಮೊ.9480835636) ಅವರನ್ನು ಸಹಾಯಕ ಅಧಿಕಾರಿಯಾಗಿ ಕೃಷಿ ಅಧಿಕಾರಿ ಆರ್‌.ಮಂಜುನಾಥ (ಮೊ.8277931830) ಅವರನ್ನು, ವಾರ್ಡ್‌ ಸಂಖ್ಯೆ 9 ರಿಂದ 16ರ ವರೆಗೆ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಎಫ್‌ ಬಾರ್ಕಿ (ಮೊ.9480695253) ಸಹಾಯಕ ಅಧಿಕಾರಿಯಾಗಿ ಟ.ಎಸ್‌.ಲಮಾಣಿ (ಮೊ.9448927085), ವಾರ್ಡ್‌ ಸಂಖ್ಯೆ 17 ರಿಂದ 23ರ ವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರುದ್ರಮುನಿ (ಮೊ.9480695246) ಸಹಾಯಕ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಪುಂಡಲಿಕ ಮಾನನವರ ಅವರನ್ನು ನಿಯೋಜನೆ ಮಾಡಲಾಗಿದೆ ಎಂದರು.

ಒಟ್ಟು 23 ಮತಗಟ್ಟೆಗಳು: ಪ್ರತಿ ವಾರ್ಡಗೆ ಒಂದರಂತೆ ಒಟ್ಟು 23 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರದಲ್ಲದೇ ಮಸ್ಟ ರಿಂಗ್‌ ಡಿಮಸ್ಟರಿಂಗನ್ನು ತಹಶೀಲ್ದಾರ ಕಚೇರಿಯಲ್ಲಿಯೇ ನಡೆಸಲಾಗುವುದು ಎಂದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿನ ಸೂಚನೆ ಮೇರೆಗೆ ವಿಶೇಷಚೇತನರ ಮತದಾನಕ್ಕೆ ವಿಶೇಷವಾದ ಸೌಲಭ್ಯ ಕಲ್ಪಿಸಲಾಗುವುದು ಎಂದರು.

3 ಸ್ಥಳದಲ್ಲಿ ನಾಮ ಪತ್ರ ಸಲ್ಲಿಕೆ: ಮೇ 9ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೂರು ಸ್ಥಳಗಳಲ್ಲಿ ನಾಮಪತ್ರ ಸಲ್ಲಿಕೆಗೆ ವ್ಯವಸ್ಥೆ ಮಾಡಲಾಗಿದೆ. ತಾಲೂಕು ಪಂಚಾಯತ್‌ ಸಭಾಂಗಣ, ಪುರಸಭೆ ಬ್ಯಾಡಗಿ ಮತ್ತು ಸಾಮರ್ಥ್ಯಸೌಧದಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ ಎಂದರು.

ಶೈಕ್ಷಣಿಕ ಹಿನ್ನಡೆಗೆ ಅವಕಾಶ ಮಾಡಬೇಡಿ: ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ವತಿಯಿಂದ ಇಬ್ಬಿಬ್ಬರು ಅಧಿಕಾರಿಗಳನ್ನು ಆರ್‌ಒ, ಎಆರ್‌ಒಗಳನ್ನಾಗಿ ನೇಮಕ ಮಾಡಿದ್ದರ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಟಿ.ಎಸ್‌.ಲಮಾಣಿ ಹಾಗೂ ಸಮನ್ವಯಾಧಿಕಾರಿ ಎಂ.ಎಫ್‌.ಬಾರ್ಕಿ ಮಾತನಾಡಿ, ಇನ್ನೇನು ಕೇವಲೆ ದಿನಗಳಲ್ಲಿ ಶಾಲೆಗಳು ಆರಂಭವಾಗಲಿವೆ. ಮೇ 20ರಿಂದ ಪುಸ್ತಕ ವಿತರಣೆ ಸೇರಿದಂತೆ ಮೇ 28ಕ್ಕೆ ಶಾಲಾ ಪ್ರಾರಂಭೋತ್ಸವ ಹಾಗೂ ಜೂನ್‌ನಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಇಬ್ಬರಲ್ಲಿ ಯಾರಾದರು ಒಬ್ಬರನ್ನು ಚುನಾವಣೆ ಕಾರ್ಯದಿಂದ ಕೈ ಬಿಟ್ಟಲ್ಲಿ ಅನೂಕೂಲವಾಗಲಿದೆ. ಇಲ್ಲದೇ ಹೋದಲ್ಲಿ ಶೈಕ್ಷಣಿಕ ಕಾರ್ಯಗಳಿಗೆ ಹಿನ್ನಡೆಯಾಲಿದ್ದು. ಈ ಕುರಿತಂತೆ ಮತ್ತೂಮ್ಮೆ ಪರಿಶೀಲನೆ ನಡೆಸುವಂತೆ ಮನವಿ ಮಾಡಿದರು. ಇದೇ ರೀತಿಯ ಸಮಸ್ಯೆ ನಮ್ಮ ಇಲಾಖೆಯದ್ದು ಆಗಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಈ-ಮೇಲ್ ಮೂಲಕ ಮನವಿ ಸಲ್ಲಿಸಿರುವುದಾಗಿ ಲಮಾಣಿ ತಿಳಿಸಿದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.