ನೀರಿನ ಸಮಸ್ಯೆ ಬಗೆಹರಿಸಿ


Team Udayavani, May 9, 2019, 3:40 PM IST

kop-3

ಯಲಬುರ್ಗಾ: ಪಟ್ಟಣದ 3ನೇ ವಾರ್ಡ್‌ನಲ್ಲಿ 15 ದಿನಗಳಿಂದ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದರೂ ಪಪಂ ಅಧಿಕಾರಿಗಳು ಪರಿಹಾರಕ್ಕೆ ಮುಂದಾಗಿಲ್ಲ. ಈ ಕುರಿತು ಗಮನಕ್ಕೆ ಇದ್ದರೂ ಅಧಿಕಾರಿಗಳು ನಿರ್ಲಕ್ಷ ್ಯ ವಹಿಸಿದ್ದಾರೆ ಎಂದು ಆರೋಪಿಸಿ ಬುಧವಾರ ವಾರ್ಡ್‌ ನಿವಾಸಿಗಳು ಪಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿನೆ ನಡೆಸಿದರು.

3ನೇ ವಾರ್ಡಿನ ಸದಸ್ಯ ರಿಯಾಜ್‌ ಖಾಜಿ ಮಾತನಾಡಿ, 3ನೇ ವಾರ್ಡ್‌ನಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತಾಂಡವಾಡುತ್ತಿದೆ. ಕುಡಿಯುವ ನೀರಿಗಾಗಿ ಜನತೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದರೆ ಪಪಂ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸ್ಪಂದನೆಗೆ ಮುಂದಾಗುತ್ತಿಲ್ಲ. ಇನ್ನೂ ಈ ವಾರ್ಡ್‌ನ ಮಾರುತಿ ದೇವಸ್ಥಾನದ ಹಿಂಬಂದಿಯಿಂದ ಈಗಾಗಲೇ ಲಕ್ಷಾಂತರ ರೂ. ವೆಚ್ಚ ಮಾಡಿ ಪೈಪ್‌ಲೈನ್‌ ಮಾಡಲಾಗಿದೆ. ವರ್ಷ ಕಳೆದರೂ ನಲ್ಲಿ ಸಂಪರ್ಕ ಕೊಡುವಲ್ಲಿ ನಿರ್ಲಕ್ಷ ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಕುಷ್ಟಗಿ ರಸ್ತೆ ಪ್ರಶಾಂತ ನಗರದ ರಸ್ತೆಯುದ್ಧಕ್ಕೂ ಚರಂಡಿ ನಿರ್ಮಿಸಿದ್ದಾರೆ. ಆದರೆ ಬಹಳ ಎತ್ತರಕ್ಕೆ ಚರಂಡಿ ನಿರ್ಮಾಣ ಮಾಡಿದ್ದರಿಂದ ವಯೋವೃದ್ಧರು, ಮಕ್ಕಳು, ಮಹಿಳೆಯರಿಗೆ ತೊಂದರೆಯಾಗಿದೆ. ಆಯಾ ರಸ್ತೆಗೆ ಸಮರ್ಪಕವಾಗಿ ಕಾಂಕ್ರೀಟ್ ನಿರ್ಮಿಸಿ ನಿವಾಸಿಗಳಿಗೆ ಅನುಕೂಲ ಮಾಡಿಕೊಡುವಂತೆ ಸಾಕಷ್ಟು ಬಾರಿ ಪಪಂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ವಾರ್ಡ್‌ನ ನಿವಾಸಿ ಶರಣಪ್ಪ ಖಾನಾವಳಿ ಮಾತನಾಡಿ, ಪಪಂ ಮುಖ್ಯಾಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರುವುದಿಲ್ಲ. ನಮ್ಮ ಸಮಸ್ಯೆಗಳನ್ನು ಯಾರ ಮುಂದೆ ಹೇಳಿಕೊಳ್ಳ‌ಬೇಕು. ಕುಡಿಯುವ ನೀರಿನ ಸಮಸ್ಯೆ ಹೇಳತೀರದ್ದಾಗಿದೆ. ಸದಸ್ಯರೇ ಮುಖ್ಯಾಧಿಕಾರಿಗಳಿಗೆ ಫೋನ್‌ ಮಾಡಿದರೂ ಸಮಸ್ಯೆ ಆಲಿಸುತ್ತಿಲ್ಲ. ಇನ್ನೂ ಜನಸಾಮಾನ್ಯರ ಗೋಳು ಕೇಳುವವರಿಲ್ಲದಾಗಿದೆ. ಪಟ್ಟಣದಲ್ಲಿ ಸಾಕಷ್ಟು ಬೀದಿ ದೀಪಗಳು ಕೆಟ್ಟಿದ್ದರೂ ಅವುಗಳನ್ನು ದುರಸ್ತಿ ಮಾಡಲು ಸಿಬ್ಬಂದಿ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಪಂ ಇಂಜನಿಯರ್‌ ಉಮೇಶ ವಾಲಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿ, ಮುಖ್ಯಾಧಿಕಾರಿಗಳು ಜಿಲ್ಲಾಕಾರಿಗಳ ಸಭೆಗೆ ಹೋಗಿದ್ದಾರೆ. ಆವರು ಬಂದ ನಂತರ ಅವರೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗುವುದಾಗಿ ಭರವಸೆ ನೀಡಿದರು.

ಶರಣಯ್ಯ ಸಾಲಿಮಠ, ಮೋದಿನಸಾಬ್‌ ನಾಯಕ, ಶರಣಪ್ಪ ಉಳ್ಳಾಗಡ್ಡಿ, ಮಹಮ್ಮದ ಗೌಸ್‌, ಶರಣಬಸಪ್ಪ ಹೂಗಾರ, ರಾಜಶೇಖರ ಮುಧೋಳ, ದೇವಪ್ಪ ಛಲವಾದಿ, ಹನುಮಗೌಡ ಹೊಸಪೇಟೆ ಇತರರು ಇದ್ದರು.

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.