ಸಾರ್ವಜನಿಕ ಶೌಚಾಲಯಕ್ಕೆ ಟ್ಯಾಂಕರ್ ನೀರು !
Team Udayavani, May 10, 2019, 6:15 AM IST
ಉಡುಪಿ: ನೀರಿನ ಬಿಸಿ ಕೇವಲ ಮನೆ, ಹೊಟೇಲ್, ಧಾರ್ಮಿಕ ಕೇಂದ್ರಗಳಿಗೆ ಮಾತ್ರವಲ್ಲದೆ ಸಾರ್ವಜನಿಕ ಶೌಚಾಲಯಕ್ಕೂ ತಟ್ಟಿದೆ.
ಸರಕಾರಿ ಕಚೇರಿ ಕೆಲಸಗಳಿಗಾಗಿ ನಗರಕ್ಕೆ ಬರುವ ಜನರು ಹಾಗೂ ಪಟ್ಟಣದ ನಿವಾಸಿಗಳು ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಹೋಗುವಂತಹ ಅನಿವಾರ್ಯತೆ ಬಂದಿದೆ. ಇದಲ್ಲದೆ ನೀರಿನ ಕೊರತೆಯಾಗಿರುವುದರಿಂದ ಬಸ್ ನಿಲ್ದಾಣ ಆಸುಪಾಸಿನ ಫ್ಲ್ಯಾಟ್ ನಿವಾಸಿಗಳು “ತುರ್ತು’ ಕರೆ ಬಂದರೆ ಸಾರ್ವಜನಿಕ ಶೌಚಾಲಯವನ್ನು ಹುಡುಕಿ ಹೋಗಬೇಕಾಗಿದೆ. ನಗರಸಭೆ ಸುಪರ್ದಿಯಲ್ಲಿರುವ ಶೌಚಾಲಯ ನಿರ್ವಹಣೆಕಾರರು ಅಧಿಕ ಹಣ ನೀಡಿ ಟ್ಯಾಂಕರ್ ಮೂಲಕ ನೀರು ತರಿಸಿಕೊಂಡು ನಿರ್ವಹಿಸುತ್ತಿ¨ªಾರೆ.
ಸಾರ್ವಜನಿಕ ಶೌಚಾಲಯದವರು ಹಿಂದೆ ಪಡೆಯುತ್ತಿರುವ ದರವನ್ನೇ ಈಗಲೂ ಪಡೆದುಕೊಳ್ಳುತ್ತಿ¨ªಾರೆ. ಮಣಿಪಾಲ, ಅಲೆವೂರು, ಆತ್ರಾಡಿ, ಮಲ್ಪೆ, ಸಂತೆಕಟ್ಟೆ, ಅಂಬಾಗಿಲು, ಅಂಬಲಪಾಡಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ತೆರಳುವ ವಾಹನಗಳು ನಗರದ ಸಿಟಿ ಬಸ್ ನಿಲ್ದಾಣಕ್ಕೆ ಬಂದು ತೆರಳುತ್ತದೆ. ನಿತ್ಯ 500ಕ್ಕೂ ಹೆಚ್ಚಿನ ಮಂದಿ ಸಾರ್ವಜನಿಕ ಶೌಚಾಲಯವನ್ನು ಉಪಯೋಗಿಸುತ್ತಿ¨ªಾರೆ. ಇದೇ ರೀತಿ ಇತರ ಸಾರ್ವಜನಿಕ ಶೌಚಾಲಯದವರ ಸ್ಥಿತಿಯೂ ಹೀಗೆ ಇದೆ.
ಪ್ರತಿನಿತ್ಯ ಶೌಚಾಲಯದಿಂದ 1,500 ರೂ., ಆದಾಯ ಬರುತ್ತದೆ. 2 ಸಾವಿರ ರೂ. ನೀಡಿ ಟ್ಯಾಂಕರ್ ನೀರು ತರಿಸಿಕೊಳ್ಳುತ್ತಿದ್ದೇವೆ. ನಷ್ಟವಾದರೂ ಪರವಾಗಿಲ್ಲ ಜನರ ಸೇವೆ ಮುಖ್ಯ ಎಂದು ಶೌಚಾಲಯದ ಉಸ್ತುವಾರಿ ಅಜಯಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್