“ಬರಗಾಲ ನಿಭಾಯಿಸಲು ಸರಕಾರ ವಿಫ‌ಲ’


Team Udayavani, May 10, 2019, 6:08 AM IST

kota

ಉಡುಪಿ: ರಾಜ್ಯ ದಲ್ಲಿ ಸೃಷ್ಟಿಯಾಗಿರುವ ಭೀಕರ ಬರಗಾಲವನ್ನು ನಿಭಾಯಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫ‌ಲವಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ
ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳು ವಂತೆ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. ಆದರೂ ಸರಕಾರ ನಿರ್ಲಕ್ಷ್ಯ ತೋರುತ್ತಿದೆ. ಇಂತಹ ಕೆಟ್ಟ ಸರಕಾರವನ್ನು ಈ ಹಿಂದೆ ನೋಡಿರ ಲಿಲ್ಲ. ರಾಜ್ಯದ ಜನತೆ ಕಂಗೆಟ್ಟಿದ್ದಾರೆ. ಉಡುಪಿ ಸೇರಿದಂತೆ ರಾಜ್ಯದಲ್ಲಿ ಜಿಲ್ಲಾ ಡಳಿತಗಳು ಸ್ಥಗಿತವಾಗಿವೆ ಎಂದರು.

ಆಯೋಗ ಅಡ್ಡಿಯಲ್ಲ
ಬರನಿರ್ವಹಣೆ, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚುನಾ ವಣ ಆಯೋಗ ಅನುಮತಿ ನೀಡಿದೆ. ವಿವಿಧ ನಿಗಮ, ಮಂಡಳಿ, ಸಮಿತಿ ಹಾಗೂ ಸ್ಥಳೀಯ ಸಂಸ್ಥೆಗಳು ಸಭೆಗಳನ್ನು ನಡೆಸುವುದಕ್ಕೂ ಒಪ್ಪಿಗೆ ನೀಡಿದೆ. ಆದರೆ ಕುಡಿಯುವ ನೀರು, ಮಳೆಗಾಲ ಮುನ್ನೆಚ್ಚರಿಕೆ ಕ್ರಮ ಮೊದಲಾದ ಉದ್ದೇಶಗಳಿಗೂ ಗ್ರಾ.ಪಂ.ಗಳಲ್ಲಿ ಸಭೆ ನಡೆಸಲು ಸರಕಾರ ಕ್ರಮ ಕೈಗೊಂಡಿಲ್ಲ ಎಂದು ಪೂಜಾರಿ ಆರೋಪಿಸಿದರು.

ಅಧಿಕಾರವಿಲ್ಲದ 8 ತಿಂಗಳುಗಳು
ಅಧ್ಯಕ್ಷ ಸ್ಥಾನ ಜೆಡಿಎಸ್‌/ಕಾಂಗ್ರೆಸ್‌ಗೆ ಸಿಗಬೇಕೆಂಬ ಉದ್ದೇಶದಿಂದ ಮೀಸಲಾತಿ ಪಟ್ಟಿಯನ್ನು ಬದಲಾಯಿಸಿ ನ್ಯಾಯಾಲಯಕ್ಕೆ ಅಫಿದವಿತ್‌ ಸಲ್ಲಿಸಿದ ಪರಿಣಾಮ ಉಡುಪಿ ನಗರಸಭೆ ಸೇರಿದಂತೆ ರಾಜ್ಯದ ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದು 8 ತಿಂಗಳಾದರೂ ಜನರಿಂದ ಆಯ್ಕೆಯಾದ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಿಲ್ಲ. ಇದರಿಂದಾಗಿ ಆಡಳಿತ ಸಮರ್ಪಕವಾಗಿ ನಡೆಯದೆ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ ಎಂದು ಶ್ರೀನಿವಾಸ ಪೂಜಾರಿ ದೂರಿದರು.

ಪಂಚಕರ್ಮ, ಪಂಚತಂತ್ರದ ಜತೆಗೆ…
“ನೀವು ಆರೋಗ್ಯ ಸುಧಾರಣೆಗೆ ಪಂಚಕರ್ಮ ಚಿಕಿತ್ಸೆ ಮಾಡಿ. ಸರಕಾರ ಉಳಿಸಲು ಪಂಚತಂತ್ರಗಳನ್ನು ಮಾಡಿ. ಆದರೆ ಅದರೊಂದಿಗೆ ಬರ ನಿರ್ವಹಣೆಗೆ ಸಮರೋಪಾದಿ ಕೆಲಸ ಕೂಡ ಮಾಡಿ’ ಎಂದು ಮುಖ್ಯಮಂತ್ರಿಯವರಿಗೆ ಶ್ರೀನಿವಾಸ ಪೂಜಾರಿ ಅವರು ಸಲಹೆ ನೀಡಿದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.