“ಬರಗಾಲ ನಿಭಾಯಿಸಲು ಸರಕಾರ ವಿಫಲ’
Team Udayavani, May 10, 2019, 6:08 AM IST
ಉಡುಪಿ: ರಾಜ್ಯ ದಲ್ಲಿ ಸೃಷ್ಟಿಯಾಗಿರುವ ಭೀಕರ ಬರಗಾಲವನ್ನು ನಿಭಾಯಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ
ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಬರ ಪರಿಹಾರಕ್ಕೆ ಕ್ರಮ ಕೈಗೊಳ್ಳು ವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. ಆದರೂ ಸರಕಾರ ನಿರ್ಲಕ್ಷ್ಯ ತೋರುತ್ತಿದೆ. ಇಂತಹ ಕೆಟ್ಟ ಸರಕಾರವನ್ನು ಈ ಹಿಂದೆ ನೋಡಿರ ಲಿಲ್ಲ. ರಾಜ್ಯದ ಜನತೆ ಕಂಗೆಟ್ಟಿದ್ದಾರೆ. ಉಡುಪಿ ಸೇರಿದಂತೆ ರಾಜ್ಯದಲ್ಲಿ ಜಿಲ್ಲಾ ಡಳಿತಗಳು ಸ್ಥಗಿತವಾಗಿವೆ ಎಂದರು.
ಆಯೋಗ ಅಡ್ಡಿಯಲ್ಲ
ಬರನಿರ್ವಹಣೆ, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚುನಾ ವಣ ಆಯೋಗ ಅನುಮತಿ ನೀಡಿದೆ. ವಿವಿಧ ನಿಗಮ, ಮಂಡಳಿ, ಸಮಿತಿ ಹಾಗೂ ಸ್ಥಳೀಯ ಸಂಸ್ಥೆಗಳು ಸಭೆಗಳನ್ನು ನಡೆಸುವುದಕ್ಕೂ ಒಪ್ಪಿಗೆ ನೀಡಿದೆ. ಆದರೆ ಕುಡಿಯುವ ನೀರು, ಮಳೆಗಾಲ ಮುನ್ನೆಚ್ಚರಿಕೆ ಕ್ರಮ ಮೊದಲಾದ ಉದ್ದೇಶಗಳಿಗೂ ಗ್ರಾ.ಪಂ.ಗಳಲ್ಲಿ ಸಭೆ ನಡೆಸಲು ಸರಕಾರ ಕ್ರಮ ಕೈಗೊಂಡಿಲ್ಲ ಎಂದು ಪೂಜಾರಿ ಆರೋಪಿಸಿದರು.
ಅಧಿಕಾರವಿಲ್ಲದ 8 ತಿಂಗಳುಗಳು
ಅಧ್ಯಕ್ಷ ಸ್ಥಾನ ಜೆಡಿಎಸ್/ಕಾಂಗ್ರೆಸ್ಗೆ ಸಿಗಬೇಕೆಂಬ ಉದ್ದೇಶದಿಂದ ಮೀಸಲಾತಿ ಪಟ್ಟಿಯನ್ನು ಬದಲಾಯಿಸಿ ನ್ಯಾಯಾಲಯಕ್ಕೆ ಅಫಿದವಿತ್ ಸಲ್ಲಿಸಿದ ಪರಿಣಾಮ ಉಡುಪಿ ನಗರಸಭೆ ಸೇರಿದಂತೆ ರಾಜ್ಯದ ನಗರ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದು 8 ತಿಂಗಳಾದರೂ ಜನರಿಂದ ಆಯ್ಕೆಯಾದ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಿಲ್ಲ. ಇದರಿಂದಾಗಿ ಆಡಳಿತ ಸಮರ್ಪಕವಾಗಿ ನಡೆಯದೆ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ ಎಂದು ಶ್ರೀನಿವಾಸ ಪೂಜಾರಿ ದೂರಿದರು.
ಪಂಚಕರ್ಮ, ಪಂಚತಂತ್ರದ ಜತೆಗೆ…
“ನೀವು ಆರೋಗ್ಯ ಸುಧಾರಣೆಗೆ ಪಂಚಕರ್ಮ ಚಿಕಿತ್ಸೆ ಮಾಡಿ. ಸರಕಾರ ಉಳಿಸಲು ಪಂಚತಂತ್ರಗಳನ್ನು ಮಾಡಿ. ಆದರೆ ಅದರೊಂದಿಗೆ ಬರ ನಿರ್ವಹಣೆಗೆ ಸಮರೋಪಾದಿ ಕೆಲಸ ಕೂಡ ಮಾಡಿ’ ಎಂದು ಮುಖ್ಯಮಂತ್ರಿಯವರಿಗೆ ಶ್ರೀನಿವಾಸ ಪೂಜಾರಿ ಅವರು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ