ಜನಜಾಗೃತಿ ಮೂಡಿಸುವಲ್ಲಿ ‘ಚಾವಡಿ ಕೂಟ’


Team Udayavani, May 10, 2019, 10:04 AM IST

kasargod-tdy-3..

ಚೆರುವತ್ತೂರಿನಲ್ಲಿ ನಡೆಯುತ್ತಿರುವ ಕೋಲಾಯ ಕೂಟ (ಚಾವಡಿ ಕೂಟ)

ಕಾಸರಗೋಡು, ಮೇ 9: ಜನಜಾಗೃತಿ ಮೂಡಿಸುವಲ್ಲಿ ವಿಭಿನ್ನ ಹಾದಿಯನ್ನು ಸ್ವೀಕರಿಸಿದ ಚೆರುವತ್ತೂರು ಗ್ರಾಮದ ಜನತೆಯದ್ದು ವಿಭಿನ್ನ ಶೈಲಿ. ಸ್ಥಳೀಯ ಗ್ರಾ. ಪಂ. ಮತ್ತು ಆರೋಗ್ಯ ಇಲಾಖೆಗಳು ಈ ಯತ್ನಕ್ಕೆ ಹೆಗಲು ನೀಡಿವೆ.

ಮಣ್ಣು, ಜಲ, ವಾಯು ಮತ್ತು ಮನುಷ್ಯನನ್ನು ರೋಗ ಮುಕ್ತವಾಗಿಸುವಲ್ಲಿ ಗಂಭೀರ ಚಿಂತನೆ ನಡೆಸುವ ನಿಟ್ಟಿನಲ್ಲಿ ವಾರಕ್ಕೊಮ್ಮೆ ಈ ಗ್ರಾಮ ಪಂಚಾಯತ್‌ನ ಯಾವುದಾದರೂ ಒಂದು ಮನೆಯಲ್ಲಿ ಸಾರ್ವಜನಿಕರೊಂದಿಗೆ ಮುಕ್ತ ಸಂವಾದ ನಡೆಸಲಾಗುತ್ತಿದೆ. ಇದನ್ನು ‘ಕೋಲಾಯ ಕೂಟ್ಟಂ’ (ಚಾವಡಿ ಕೂಟ) ಎಂದು ಕರೆಯಲಾಗುತ್ತಿದೆ.

ಮನೆಯಂಗಳವೊಂದನ್ನು ಆರೋಗ್ಯ ಸಂರಕ್ಷಣೆಗಿರುವ ವೇದಿಕೆಯಾಗಿಸುವುದೇ ಕೋಲಾಯ ಕೂಟ್ಟದ ಉದ್ದೇಶ. ಪುರಾತನ ಕಾಲಗಳಲ್ಲಿ ಯಾವುದಾದರೂ ಒಂದು ಮನೆಯ ಅಂಗಳದಲ್ಲಿ ಜನ ಸೇರಿ ವಿಚಾರವೊಂದರ ಚರ್ಚೆ ನಡೆಸುತ್ತಿದ್ದ ಸಕಾರಾತ್ಮಕ ಕ್ರಮವನ್ನು ಇಲ್ಲಿ ಪುನರಾವರ್ತಿಸಲಾಗುತ್ತಿದೆ.

ಕುಡಿಯುವ ನೀರಿನ ಬರ, ತ್ಯಾಜ್ಯ ಸಮಸ್ಯೆ, ಆರೋಗ್ಯ ಸಮಸ್ಯೆ ಇತ್ಯಾದಿಗಳ ಕುರಿತು ವೈದ್ಯಾಧಿಕಾರಿಗಳು, ಆರೋಗ್ಯ ಇನ್‌ಸ್ಪೆಕ್ಟರ್‌ಗಳು, ಜನಪ್ರತಿನಿಧಿಗಳು ಮೊದಲಾದವರ ಸಮಕ್ಷದಲ್ಲಿ ಸಂವಾದ ನಡೆಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕೆ ಶುಚಿತ್ವದ ಮಹತ್ವ, ತ್ಯಾಜ್ಯ ವಿಮುಕ್ತಿಯಿಂದ ರೋಗ ನಿಯಂತ್ರಣ, ಸೊಳ್ಳೆ ನಿಯಂತ್ರಣ ಮಾರ್ಗಗಳು ಇತ್ಯಾದಿ ವಿಚಾರಗಳಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ.

ಈ ಚರ್ಚೆಗಳಲ್ಲಿ ಭಾಗಿಗಳಾಗುತ್ತಿರು ವವರಿಗೆ ಪ್ರಾಚೀನ ತಿನಿಸಾದ ಬೇಯಿಸಿದ ಗೆಣಸು, ಹಾಲು ಬೆರೆಸದ ಚಹಾ ಇತ್ಯಾದಿ ವಿತರಿಸಲಾಗುತ್ತಿರುವುದೂ ಪ್ರಾಚೀನ ಸಂಸ್ಕೃತಿಗೆ ನೀಡುವ ಮಹತ್ವಿಕೆಯನ್ನು ತೋರುತ್ತದೆ. ರಾತ್ರಿಕಾಲದಲ್ಲಿ ನಡೆಯುವ ಸಭೆಗೆ ದೊಂದಿ ಬೆಳಕಿನ ಹಿಮ್ಮೇಳವೂ ಇದೆ. ಉತ್ತಮ ನಾಳೆಗಾಗಿ ಜನ ಒಗ್ಗೂಡಿ ತೀರ್ಮಾನ ಕೈಗೊಳ್ಳುವ ಈ ಪರಿಸರ ಪೂರಕ ವಿಧಾನ ನೂತನ ನಿರೀಕ್ಷೆಗಳಿಗೆ ಕಾರಣವಾಗಿದೆ.

ಟಾಪ್ ನ್ಯೂಸ್

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.