ಅಧಿಕಾರಿಗಳ ಬೇಜವಾಬ್ದಾರಿ; ಸರಕಾರಿ ಸೌಲಭ್ಯ ವಂಚಿತ ಗ್ರಾಮಸ್ಥರು

ಮೂಡುಕೋಡಿ: 94ಸಿ ಹಕ್ಕುಪತ್ರದಲ್ಲಿ ಇನ್ಯಾರಧ್ದೋ ಸರ್ವೇ ನಂಬರ್‌

Team Udayavani, May 10, 2019, 10:44 AM IST

belthangadi-tdy-1..

ಕೊಪ್ಪದಬಾಕಿಮಾರು ಸರಕಾರಿ ಜಾಗದಲ್ಲಿ ವಾಸವಾಗಿರುವ ಅತಂತ್ರ ಕುಟುಂಬಗಳ ಮನೆಗಳು.

ವೇಣೂರು ಮೇ 9: ಮೂಡುಕೋಡಿ ಗ್ರಾಮದ ಕೊಪ್ಪದಬಾಕಿಮಾರುವಿನಲ್ಲಿ ಹತ್ತಾರು ವರ್ಷಗಳಿಂದ ಸರಕಾರಿ ಜಾಗದಲ್ಲಿ ನೆಲೆ ಕಂಡವರಿಗೆ ಕೊನೆಗೂ 2017ರಲ್ಲಿ ಹಕ್ಕುಪತ್ರ ನೀಡಲಾಗಿತ್ತು. ಆದರೆ ಅಧಿಕಾರಿ ಗಳ ಬೇಜವಾಬ್ದಾರಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಇಲ್ಲದಂತಾಗಿದೆ.

94ಸಿ ಯೋಜನೆಯಡಿ ಸುಮಾರು 20ಕ್ಕೂ ಅಧಿಕ ಕುಟುಂಬಗಳು ಪಡೆದಿರುವ ಹಕ್ಕುಪತ್ರದಲ್ಲಿ ಸರ್ವೇ ನಂ. ವ್ಯತ್ಯಾಸ ಕಂಡು ಬಂದಿದೆ. ಅಧಿಕಾರಿಗಳ ಬೇಜವಾಬ್ದಾರಿ ಯಿಂದಾಗಿ ಕಳೆದೆರಡು ವರ್ಷಗಳಿಂದ ಆರ್‌ಟಿಸಿ ಲಭಿಸದೆ ಪರದಾಡುತ್ತಿದ್ದಾರೆ.

ವೇಣೂರು ಹೋಬಳಿಯ ಮೂಡು ಕೋಡಿಯ ಕೊಪ್ಪದಬಾಕಿಮಾರುವಿನ ಸುಮಾರು 30ಕ್ಕೂ ಅಧಿಕ ಕುಟುಂಬಗಳು ಸರಕಾರದ ಸೌಲಭ್ಯಗಳಿಂದ ವಂಚಿತವಾಗಿ ನರಕಯಾತನೆ ಅನುಭವಿಸುತ್ತಿವೆ. ಇಲ್ಲಿನ ಗೋಮಾಳ ಜಾಗದಲ್ಲಿ 20-25 ವರ್ಷ ಗಳಿಂದ ಮನೆಕಟ್ಟಿ, ಕೃಷಿ ಮಾಡಿಕೊಂಡು ವಾಸವಾಗಿದ್ದರೂ ಹಕ್ಕುಪತ್ರ ಲಭಿಸಿರಲಿಲ್ಲ. ಸರಕಾರದ ನಿಯಮದ ಬದಲಾವಣೆಯಿಂದ 94ಸಿ ಯೋಜನೆ ಯಡಿ ಅರ್ಜಿ ಸಲ್ಲಿಸಿ 2017ರ ಅಕ್ಟೋಬರ್‌ನಲ್ಲಿ 94ಸಿ ಯೋಜನೆಯಲ್ಲಿ ಜಾಗದ ಹಕ್ಕುಪತ್ರ ಪಡೆದುಕೊಂಡಿದ್ದರು. ಕಂದಾಯ ಅಧಿಕಾರಿ ಗಳ ಉಪಸ್ಥಿತಿಯಲ್ಲಿ ಅಂದಿನ ಬೆಳ್ತಂಗಡಿ ಪ್ರಭಾರ ತಹಶೀಲ್ದಾರ್‌ ಆಗಿದ್ದ ಮಹಮ್ಮದ್‌ ಇಸಾಕ್‌ ಸಹಿ ಮಾಡಿದ ಹಕ್ಕುಪತ್ರವನ್ನು ಅಂದಿನ ಶಾಸಕರಾಗಿದ್ದ ಕೆ. ವಸಂತ ಬಂಗೇರ ಅವರು ಮೂಡುಕೋಡಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ವಿತರಿಸಿದ್ದರು.

ಸರ್ವೇ ನಂ. 99/2ಎಪಿ8 ಮೂಡುಕೋಡಿ ಗ್ರಾಮದ ಕೊಪ್ಪದಬಾಕಿಮಾರುವಿನಲ್ಲಿರುವ ಸರಕಾರಿ ಜಾಗ. ಇದರಲ್ಲಿ ಫಲಾನುಭವಿಗಳು ವಾಸವಾಗಿದ್ದಾರೆ. ಆದರೆ ಇವರಿಗೆ ನೀಡಲಾದ ಹಕ್ಕುಪತ್ರದಲ್ಲಿ 99/2ಎಪಿ1 ಎಂದು ನಮೂದಿಸಲಾಗಿದ್ದು, ಇದು ಬೇರೆಯವರ ವರ್ಗ ಜಾಗ ಎಂದು ಕಾಣಿಸುತ್ತಿದೆ. ಹೀಗಾಗಿ ಆರ್‌ಟಿಸಿ ಲಭಿಸುತ್ತಿಲ್ಲ. 35ಕ್ಕೂ ಅಧಿಕ ಕುಟುಂಬಗಳು ಈ ಸಮಸ್ಯೆಯಡಿ ಸಿಲುಕಿವೆ. ಇದರಲ್ಲಿ ಕೆಲವು ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಸರಿಮಾಡಿ ನೀಡಿರುವ ಅಧಿಕಾರಿಗಳು, ಉಳಿದ ಫಲಾನುಭವಿಗಳಿಗೆ ಸತಾಯಿಸುತ್ತಿರುವುದು ಯಾಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ದಿಕ್ಕೇ ತೋಚುತ್ತಿಲ್ಲ:

22 ವರ್ಷಗಳಿಂದ ಇಲ್ಲಿ ವಾಸವಾಗಿದ್ದೇವೆ. 2017ರಲ್ಲಿ ನಮಗೆ 94ಸಿ ಯೋಜನೆಯಡಿ ಹಕ್ಕುಪತ್ರ ನೀಡಿದ್ದು, ಈಗ ಆರ್‌ಟಿಸಿ ತೆಗೆ ಯಲು ಹೋದಾಗ ನಮ್ಮ ಸರ್ವೇ ನಂ.ನಲ್ಲಿ ಬೇರೆಯವರ ವರ್ಗ ಜಾಗ ಕಾಣಿಸುತ್ತಿದೆ ಎಂದು ಹೇಳುತ್ತಾರೆ. ಅಂದಿನಿಂದ ಇಂದಿನವರೆಗೆ ಸರಕಾರಿ ಸೌಲಭ್ಯ ದೊರೆಯದೆ ದಿಕ್ಕೇ ತೋಚು ತ್ತಿಲ್ಲ. ಹಕ್ಕುಪತ್ರಕ್ಕಾಗಿ ಅಧಿಕಾರಿಗಳಲ್ಲಿ ಬಿಕ್ಷೆ ಬೇಡುವ ಸ್ಥಿತಿ ಬಂದಿದೆ. – ಜಯಂತಿ ಪೂಜಾರಿ ಕೊಪ್ಪದಬಾಕಿಮಾರು
ಆತುರದಲ್ಲಿ ಹಕ್ಕು ಪತ್ರ ತಯಾರಿ:

ವೇಣೂರು ಹೋಬಳಿ ಮೂಡು ಕೋಡಿ ಗ್ರಾಮದ ಕೊಪ್ಪದಬಾಕಿಮಾರು ಗ್ರಾಮಸ್ಥರಿಗೆ 2017ರಲ್ಲಿ 94ಸಿ ಯೋಜನೆಯಡಿ ಹಕ್ಕುಪತ್ರ ನೀಡಲಾಗಿದೆ. ಅಂದು ಆತುರದಲ್ಲಿ ಹಕ್ಕುಪತ್ರ ತಯಾರಿಸಿದ್ದು, ಮೇ 29ರ ಬಳಿಕ ಎಲ್ಲ ಫಲಾನುಭವಿಗಳ ಹಕ್ಕುಪತ್ರ ಸಂಗ್ರಹಿಸಿ ಸರ್ವೇ ನಂ. ಸರಿಮಾಡಿ ನೀಡುತ್ತೇವೆ. ಬಳಿಕ ಒಂದು ವಾರ ಸಮಯ ಬೇಕಾಗುತ್ತದೆ. – ಹರೀಶ್‌ ಕೆ. ಗ್ರಾಮಲೆಕ್ಕಿಗ (ಕೇಸ್‌ ವರ್ಕರ್‌)
ವ್ಯತ್ಯಾಸ ಏನು?:

ಸರ್ವೇ ನಂ. 99/2ಎಪಿ8 ಮೂಡುಕೋಡಿ ಗ್ರಾಮದ ಕೊಪ್ಪದಬಾಕಿಮಾರುವಿನಲ್ಲಿರುವ ಸರಕಾರಿ ಜಾಗ. ಇದರಲ್ಲಿ ಫಲಾನುಭವಿಗಳು ವಾಸವಾಗಿದ್ದಾರೆ. ಆದರೆ ಇವರಿಗೆ ನೀಡಲಾದ ಹಕ್ಕುಪತ್ರದಲ್ಲಿ 99/2ಎಪಿ1 ಎಂದು ನಮೂದಿಸಲಾಗಿದ್ದು, ಇದು ಬೇರೆಯವರ ವರ್ಗ ಜಾಗ ಎಂದು ಕಾಣಿಸುತ್ತಿದೆ. ಹೀಗಾಗಿ ಆರ್‌ಟಿಸಿ ಲಭಿಸುತ್ತಿಲ್ಲ. 35ಕ್ಕೂ ಅಧಿಕ ಕುಟುಂಬಗಳು ಈ ಸಮಸ್ಯೆಯಡಿ ಸಿಲುಕಿವೆ. ಇದರಲ್ಲಿ ಕೆಲವು ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಸರಿಮಾಡಿ ನೀಡಿರುವ ಅಧಿಕಾರಿಗಳು, ಉಳಿದ ಫಲಾನುಭವಿಗಳಿಗೆ ಸತಾಯಿಸುತ್ತಿರುವುದು ಯಾಕೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

•ಪದ್ಮನಾಭ ವೇಣೂರು

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.