ನಗರಸಭೆ-ಪುರಸಭೆ ಚುನಾವಣೆಗೆ ಅಧಿಸೂಚನೆ

ನಾಮಪತ್ರ ಸಲ್ಲಿಕೆಗೆ 16 ಕೊನೆ ದಿನ-17ರಂದು ಪರಿಶೀಲನೆ •29ರಂದು ಮತದಾನ- 31ಕ್ಕೆ ಎಣಿಕೆ

Team Udayavani, May 10, 2019, 12:36 PM IST

Udayavani Kannada Newspaper

ಬೀದರ: ರಾಜ್ಯ ಚುನಾವಣಾ ಆಯೋಗವು ಬೀದರ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2019ರ ಅಧಿಸೂಚನೆ ಪ್ರಕಟಿಸಿದ್ದು, ಮೇ 29ರಂದು ಮತದಾನ ನಡೆಯಲಿದೆ.

ಮೇ 9ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರಗಳನ್ನು ಸಲ್ಲಿಸಲು ಮೇ 16 ಕೊನೆಯ ದಿನಾಂಕವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ 20 ಕೊನೆಯ ದಿನವಾಗಿದೆ. ಮೇ 29ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ವರೆಗೆ ಮತದಾನ ನಡೆಯಲಿದೆ. ಮರುಮತದಾನ ಇದ್ದಲ್ಲಿ ಮೇ 30ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆ ವರೆಗೆ ನಡೆಸಲಾಗುತ್ತದೆ. ಮತಗಳ ಎಣಿಕೆಯು ಮೇ 31ರಂದು ಬೆಳಗ್ಗೆ 8 ಗಂಟೆಯಿಂದ ತಾಲೂಕಿನ ಕೇಂದ್ರ ಸ್ಥಳಗಳಲ್ಲಿ ನಡೆಯಲಿದೆ.

ಬಸವಕಲ್ಯಾಣ: ನಗರಸಭೆಯ ಒಟ್ಟು 31 ವಾರ್ಡ್‌ಗಳಲ್ಲಿ ಚುನಾವಣೆ ನಡೆಯಲಿದೆ. ವಾರ್ಡ್‌ ಸಂಖ್ಯೆ 1ರಿಂದ 8ರ ವರೆಗೆ ತಾಲೂಕು ಪಂಚಾಯತ್‌ ಕಾರ್ಯ ನಿರ್ವಹಣಾಧಿಕಾರಿ ಮಡಿವಾಳಪ್ಪಾ ಚುನಾವಣಾಧಿಕಾರಿಯಾಗಿದ್ದು, ಬಸವಕಲ್ಯಾಣ ತಾಲೂಕು ಪಂಚಾಯತ್‌ನಲ್ಲಿ ನಾಮಪತ್ರಗಳನ್ನು ಸಲ್ಲಿಸಬಹುದು. ವಾರ್ಡ್‌ 9ರಿಂದ 16ರ ವರೆಗೆ ಸಹಾಯಕ ಕೃಷಿ ನಿರ್ದೇಶಕ ವೀರಶೆಟ್ಟಿ ಚುನಾವಣಾಧಿಕಾರಿಯಾಗಿದ್ದು, ಬಸವಕಲ್ಯಾಣ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬಹುದು.

ವಾರ್ಡ್‌ 17ರಿಂದ 24ರ ವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಾ ಸಿ. ಹಳ್ಳದ ಚುನಾವಣಾಧಿಕಾರಿಯಾಗಿದ್ದು, ಬಸವಕಲ್ಯಾಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ವಾರ್ಡ್‌ 25ರಿಂದ 31ರ ವರೆಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಗಿರೀಶ ರಂಜೋಳಕರ್‌ ಚುನಾವಣಾಧಿಕಾರಿಯಾಗಿದ್ದು, ಬಸವಕಲ್ಯಾಣ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು.

ಹುಮನಾಬಾದ: ಪುರಸಭೆಯ ಒಟ್ಟು 27 ವಾರ್ಡ್‌ಗಳಲ್ಲಿ ಚುನಾವಣೆ ನಡೆಯಲಿದೆ. ವಾರ್ಡ್‌ ಸಂಖ್ಯೆ 1ರಿಂದ 9ರ ವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜಪ್ಪಾ ವಾಲಿ ಚುನಾವಣಾಧಿಕಾರಿಯಾಗಿದ್ದು, ಹುಮನಾಬಾದ ಪುರಸಭೆ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬಹುದು. ವಾರ್ಡ್‌ 10ರಿಂದ 18ರ ವರೆಗೆ ಸಹಾಯಕ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಚುನಾವಣಾಧಿಕಾರಿಯಾಗಿದ್ದು, ಹುಮನಾಬಾದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ವಾರ್ಡ್‌ 19ರಿಂದ 27ರ ವರೆಗೆ ಅಕ್ಷರ ದಾಸೋಹ ಅಧಿಕಾರಿ ಓಂಕಾರ ರೊಗನ್‌ ಚುನಾವಣಾಅಧಿಕಾರಿಯಾಗಿದ್ದು, ಹುಮನಾಬಾದ ತಾಲೂಕು ಪಂಚಾಯತ್‌ ಸಮಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು.

ಚಿಟ್ಟಗುಪ್ಪ: ಪುರಸಭೆಯ ಒಟ್ಟು 23 ವಾರ್ಡ್‌ಗಳ ಚುನಾವಣೆ ನಡೆಯಲಿದೆ. ವಾರ್ಡ್‌ 1ರಿಂದ 8ರ ವರೆಗೆ ಎನ್‌ಎಚ್-9 ಹುಮನಾಬಾದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಾಶ ಮಠಪತಿ ಚುನಾವಣಾಧಿಕಾರಿಯಾಗಿದ್ದು, ಚಿಟಗುಪ್ಪಾ ಪುರಸಭೆ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬಹುದು. ವಾರ್ಡ್‌ 9ರಿಂದ 16ರ ವರೆಗೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಾಮನ್‌ರಾವ್‌ ಚುನಾವಣಾಧಿಕಾರಿಯಾಗಿದ್ದು, ಚಿಟಗುಪ್ಪ ಪುರಸಭೆ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬಹುದು. ವಾರ್ಡ್‌ 17ರಿಂದ 23ರ ವರೆಗೆ ಪಿಡಬ್ಲೂಡಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಚೀಂದ್ರ ಚುನಾವಣಾಧಿಕಾರಿಯಾಗಿದ್ದು, ಚಿಟ್ಟಗುಪ್ಪ ವಿಶೇಷ ತಹಶೀಲ್ದಾರ್‌ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು.

ಭಾಲ್ಕಿ: ಪುರಸಭೆಯ ಒಟ್ಟು 27 ವಾರ್ಡ್‌ಗಳ ಚುನಾವಣೆ ನಡೆಯಲಿದೆ. ವಾರ್ಡ್‌ 1ರಿಂದ 9ರ ವರೆಗೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ ಚುನಾವಣಾಧಿಕಾರಿಯಾಗಿದ್ದು, ಭಾಲ್ಕಿ ತಾಲೂಕು ಪಂಚಾಯತ್‌ ಸಮಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ವಾರ್ಡ್‌ 10ರಿಂದ 18ರ ವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ಧವೀರಯ್ನಾ ಸ್ವಾಮಿ ರುದನೂರ್‌ ಚುನಾವಣಾಧಿಕಾರಿಯಾಗಿದ್ದು, ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಬಹುದು.

ವಾರ್ಡ್‌ 19ರಿಂದ 27ರ ವರೆಗೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮುರಗೆಪ್ಪಾ ಸ್ವಾಮಿ ಚುನಾವಣಾಧಿಕಾರಿಯಾಗಿದ್ದು, ಭಾಲ್ಕಿ ಪಿಆರ್‌ಇ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ನಾಮಪತ್ರಗಳನ್ನು ಸಲ್ಲಿಸಬಹುದು.

ಔರಾದ (ಬಿ): ಪಟ್ಟಣ ಪಂಚಾಯತ್‌ನ ಒಟ್ಟು 20 ವಾರ್ಡ್‌ಗಳ ಚುನಾವಣೆ ನಡೆಯಲ್ಲಿದೆ. ವಾರ್ಡ್‌ 1ರಿಂದ 7ರ ವರೆಗೆ ತಾಲೂಕು ಪಂಚಾಯತ್‌ ಸಮಿತಿ ಔರಾದ (ಬಿ) ಕಾರ್ಯನಿರ್ವಾಹಣಾಧಿಕಾರಿ ಪ್ರಭು ಸಿ.ಮಾನೆ ಚುನಾವಣಾಧಿಕಾರಿಯಾಗಿದ್ದು, ಔರಾದ (ಬಿ) ತಾಲೂಕು ಪಂಚಾಯತ್‌ ಸಮಿತಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ವಾರ್ಡ್‌ 8ರಿಂದ 14ರ ವರೆಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಅಬ್ದುಲ್ ಮಾಜೀದ್‌ ಅವರು ಚುನಾವಣಾಧಿಕಾರಿಯಾಗಿದ್ದು, ಔರಾದ (ಬಿ) ತಹಶೀಲ್ದಾರ್‌ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು. ವಾರ್ಡ್‌ 15 ರಿಂದ 20ರ ವರೆಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಸುಭಾಶ ನಾಗೂರೆ ಚುನಾವಣಾಆಧಿಕಾರಿಯಾಗಿದ್ದು, ಔರಾದ (ಬಿ) ತಹಶೀಲ್ದಾರ್‌ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.