ಸಂಚಾರಿ ಮೇವು ಬ್ಯಾಂಕ್‌ಗೆ ಜಿಲ್ಲಾಡಳಿತ ಚಾಲನೆ


Team Udayavani, May 10, 2019, 1:03 PM IST

10-May-18

ಚಿತ್ರದುರ್ಗ: ಜಿಲ್ಲಾಡಳಿತದ ವತಿಯಿಂದ ಆರಂಭಿಸಲಾಗಿರುವ ಸಂಚಾರಿ ಮೇವು ಬ್ಯಾಂಕ್‌ಗೆ ಚಳ್ಳಕೆರೆ ತಾಲೂಕಿನ ಗ್ರಾಮವೊಂದರಲ್ಲಿ ಚಾಲನೆ ನೀಡಲಾಯಿತು.

ಚಿತ್ರದುರ್ಗ: ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದು, ಜಾನುವಾರುಗಳ ರಕ್ಷಣೆ ಮಾಡಲು ಜಿಲ್ಲಾಡಳಿತ ಸಂಚಾರಿ ಮೇವು ಬ್ಯಾಂಕ್‌ ಆರಂಭಿಸಿದೆ.

ಚಳ್ಳಕೆರೆ ತಾಲೂಕಿನಲ್ಲಿ ಸಂಚಾರಿ ಮೇವು ಬ್ಯಾಂಕ್‌ಗೆ ಚಾಲನೆ ನೀಡಲಾಯಿತು. ಮೊದಲ ದಿನವೇ ರೈತರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಸುಮಾರು 2 ಟನ್‌ ಮೇವು ವಿತರಣೆ ಮಾಡಲಾಗಿದೆ.

ಸಂಚಾರಿ ಮೇವು ಬ್ಯಾಂಕ್‌ ಪ್ರಾರಂಭಿಸಿದ ಕುರಿತು ಮಾಹಿತಿ ನೀಡಿದ ಚಳ್ಳಕೆರೆ ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರು, ಜಿಲ್ಲಾಧಿಕಾರಿಗಳ ಸೂಚನೆಯಂತೆ ಗ್ರಾಮಗಳಿಗೆ ತೆರಳಿ ರೈತರ ಮನೆಬಾಗಿಲಿಗೆ ರಿಯಾಯತಿ ದರದಲ್ಲಿ ಮೇವು ನೀಡುವಂತಹ ಸಂಚಾರಿ ಮೇವು ಬ್ಯಾಂಕ್‌ಗೆ ಚಳ್ಳಕೆರೆ ತಾಲೂಕಿನಲ್ಲಿ ಚಾಲನೆ ನೀಡಲಾಗಿದೆ. 2 ರೂ. ಗೆ ಒಂದು ಕೆಜಿ ಯಂತೆ ರಿಯಾಯತಿ ದರದಲ್ಲಿ ಪ್ರತಿ ಜಾನುವಾರಿಗೆ ದಿನಕ್ಕೆ 8 ಕೆಜಿ ಯಂತೆ ಮೇವು ನೀಡಲು ಹಾಗೂ ಮೇವನ್ನು ತಾಲೂಕು ಆಡಳಿತದಿಂದಲೇ ರೈತರ ಮನೆಬಾಗಿಲಿಗೆ ತಲುಪಿಸಲು ಜಿಲ್ಲಾಡಳಿತ ನಿರ್ಧರಿಸಿತ್ತು. ಜಿಲ್ಲಾಧಿಕಾರಿಗಳು ಅಗತ್ಯಕ್ಕೆ ಅನುಗುಣವಾಗಿ ಕೂಡಲೆ ಸಂಚಾರಿ ಮೇವು ಬ್ಯಾಂಕ್‌ ಪ್ರಾರಂಭಿಸಲು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚಳ್ಳಕೆರೆ ತಾಲೂಕಿನಲ್ಲಿ ಸಂಚಾರಿ ಮೇವು ಬ್ಯಾಂಕ್‌ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕರು, ಎಲ್ಲೆಲ್ಲಿ ಮೇವಿನ ಅಗತ್ಯವಿದೆ ಎಂಬುದಾಗಿ ಕೈಗೊಂಡ ಸಮೀಕ್ಷೆ ಆಧಾರದಲ್ಲಿ ಮೇವು ಪೂರೈಸಲು ನಿರ್ಧರಿಸಲಾಗಿದೆ. ಅಲ್ಲದೆ 5-6 ರೈತರು ಸೇರಿ ಮೇವಿಗೆ ಬೇಡಿಕೆ ಸಲ್ಲಿಸಿದಲ್ಲಿ ಗ್ರಾಮಕ್ಕೆ ತೆರಳಿ ಮೇವು ಪೂರೈಕೆ ಮಾಡಲಾಗುವುದು. ಸದ್ಯ ಚಳ್ಳಕೆರೆ ತಾಲೂಕಿನ ಬೆಳೆಗೆರೆ, ಟಿ.ಎನ್‌. ಕೋಟೆ, ದೊಡ್ಡ ಚೇಲೂರು ಸೇರಿದಂತೆ ವಿವಿಧ ಗ್ರಾಮಗಳ ರೈತರಿಂದ ಮೇವಿಗೆ ಬೇಡಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ವಾಹನದಲ್ಲಿ ಮೇವು ತುಂಬಿಸಿಕೊಂಡು, ಗ್ರಾಮಗಳಿಗೆ ತೆರಳಿ ಮೇವುನ್ನು ರೈತರ ಸಮ್ಮುಖದಲ್ಲಿಯೇ ತೂಕ ಹಾಕಿ ವಿತರಿಸಲಾಗಿದೆ. ಮೊದಲ ದಿನವೇ ರೈತರಿಂದ ಉತ್ತಮ ಸ್ಪಂದನೆ ದೊರೆತಿದೆ ಎಂದರು.

ಬೇಸಿಗೆಯಲ್ಲಿ ಮೇವಿಲ್ಲದೆ ಜಾನುವಾರುಗಳನ್ನು ರಕ್ಷಿಸಲು ತೊಂದರೆ ಎದುರಿಸುತ್ತಿದ್ದೆವು. ಆದರೆ ಇದೀಗ ಜಿಲ್ಲಾಡಳಿತ ನಮ್ಮ ಗ್ರಾಮಕ್ಕೆ ಬಂದು ಕೇವಲ 2 ರೂ.ಗೆ ಒಂದು ಕೆಜಿ ಯಂತೆ ರಿಯಾಯತಿ ದರದಲ್ಲಿ ಮೇವು ವಿತರಿಸಲು ಕ್ರಮ ಕೈಗೊಂಡಿರುವುದು ಸಂತಸ ತಂದಿದೆ ಎಂದು ರೈತರು ತಿಳಿಸಿದರು.

ಪಶುಸಂಗೋಪನೆ ಇಲಾಖೆಯ ಸಿಬ್ಬಂದಿ, ಪೊಲೀಸ್‌ ಸಿಬ್ಬಂದಿ ಹಾಗೂ ಗ್ರಾಮ ಲೆಕ್ಕಿಗರ ಮೇಲ್ವಿಚಾರಣೆಯಲ್ಲಿ ಮೇವು ವಿತರಿಸಲಾಗುತ್ತಿದೆ. ಮೊದಲ ದಿನ 2 ಟನ್‌ ಗಿಂತಲೂ ಹೆಚ್ಚಿನ ಮೇವನ್ನು ಸುಮಾರು 50ಕ್ಕೂ ಹೆಚ್ಚು ರೈತರು ರಿಯಾಯತಿ ದರದಲ್ಲಿ ಖರೀದಿಸಿದ್ದಾರೆ. ಚಳ್ಳಕೆರೆ ತಾಲೂಕಿನ ತಳಕು, ಪರಶುರಾಂಪುರ, ಕಸಬಾ ಹಾಗೂ ನಾಯಕನಹಟ್ಟಿ ಹೋಬಳಿಯಲ್ಲಿ ಪ್ರತಿ ಹೋಬಳಿಗೆ ಒಂದು ವಾಹನದಂತೆ, ಸಂಚಾರಿ ಮೇವು ಬ್ಯಾಂಕ್‌ ಕಾರ್ಯಾಚರಣೆ ಮೇ 11 ರಿಂದ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ರಿಯಾಯತಿ ದರದಲ್ಲಿ ಮೇವು ಅಗತ್ಯವಿರುವ ರೈತರು ಸಹಾಯ ವಾಣಿಗೆ ಕರೆ ಮಾಡಿ ಬೇಡಿಕೆ ಸಲ್ಲಿಸಬಹು ದಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ 08194- 222538, ಚಿತ್ರದುರ್ಗ ತಾಲೂಕು ಕಚೇರಿ 08194-222416, ಚಳ್ಳಕೆರೆ 08195- 250648, ಹಿರಿಯೂರು 08193-263226, ಹೊಳಲ್ಕೆರೆ 08191-275062, ಹೊಸದುರ್ಗ 08199-230224 ಹಾಗೂ ಮೊಳಕಾಲ್ಮೂರು ತಾಲೂಕು ಕಚೇರಿ 08198-229234 ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

is there any reserve day for ipl qualifiers? what rule says

IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Will Dhoni play IPL next year too..?; What did Rayudu say?

IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.