ಥಾಣೆಯಲ್ಲಿ 4,507 ಅಪಾಯಕಾರಿ ಕಟ್ಟಡಗಳು


Team Udayavani, May 10, 2019, 2:18 PM IST

1-eee

ಥಾಣೆ : ನಗರದಲ್ಲಿ ಸುಮಾರು 4,507 ಕಟ್ಟಡಗಳು ಅಪಾಯದ ಸ್ಥಿತಿಯಲ್ಲಿವೆ ಎಂದು ಥಾಣೆ ಮಹಾನಗರ ಪಾಲಿಕೆಯು ನಡೆಸಿದ ಸಮೀಕ್ಷೆ ತಿಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 198 ಕಟ್ಟಡಗಳು ಇಳಿಕೆಯಾಗಿದ್ದು, ಕಳೆದ ಬಾರಿ 4,705 ಕಟ್ಟಡಗಳು ಅಪಾ ಯಕಾರಿ ಎಂದು ಗುರುತಿಸಲ್ಪಟ್ಟಿತ್ತು.

ಮಾನ್ಸೂನ್‌ ಮೊದಲು ಪ್ರತಿವರ್ಷ ನಗರದಲ್ಲಿ ಅಪಾಯಕಾರಿ ಕಟ್ಟಡಗಳ ಸಮೀಕ್ಷೆಯನ್ನು ಥಾಣೆ ಪುರಸಭೆಯು ನಡೆಸುತ್ತಿದ್ದು, ನಾವು ಎಲ್ಲಾ ವಾರ್ಡ್‌ಗಳಿಂದ ಅಪಾಯಕಾರಿ ಕಟ್ಟಡಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮೀಕ್ಷೆಯ ಪ್ರಕಾರ ನಗರದಲ್ಲಿ 4,507 ಅಪಾಯಕಾರಿ ಕಟ್ಟಡಗಳಿವೆ. ಅದರಲ್ಲಿ ಸಿ-1 ವರ್ಗದಲ್ಲಿ 103 ಕಟ್ಟಡಗಳು ಅತ್ಯಂತ ಅಪಾಯದ ಸ್ಥಿತಿಯಲ್ಲಿವೆ. ಸಿ-2ಎ ವರ್ಗದಲ್ಲಿರುವ 98 ಕಟ್ಟಡಗಳು ಅಪಾಯಕಾರಿ, ಸಿ-2ಬಿ ಯಲ್ಲಿರುವ 2,297 ಕಟ್ಟಡಗಳು ರಿಪೇರಿಬಲ… ಮತ್ತು ಸಿ-3 ಯಲ್ಲಿರುವ 2,009 ಕಟ್ಟಡಗಳು ಸಣ್ಣ ದುರಸ್ತಿಯ ಹಂತದಲ್ಲಿದೆ ಎಂದು ವರ್ಗಿಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ಅತ್ಯಂತ ಅಪಾಯಕಾರಿ ವಿಭಾಗಗಳಲ್ಲಿನ ಕಟ್ಟಡಗಳ ಸಂಖ್ಯೆ ಹಿಂದಿನ ವರ್ಷಕ್ಕಿಂತ ಅಧಿಕವಾಗಿದ್ದು, ವಿಶೇಷವಾಗಿ ನಾವಾ³ಡಾ ಮತ್ತು ಕೋಪ್ರಿ ಪ್ರದೇಶಗಳಲ್ಲಿದೆ. ಮುಂಬ್ರಾ ಕೂಡ ಅತ್ಯಂತ ಹೆಚ್ಚಿನ ಅಪಾಯಕಾರಿ ಕಟ್ಟಡಗಳನ್ನು ಹೊಂದಿದೆ, ಆದರೂ ಅವುಗಳಲ್ಲಿ ಹೆಚ್ಚಿನವು ದುರಸ್ತಿ ಹಂತದಲ್ಲಿವೆ. ಮುಂಬ್ರಾದಲ್ಲಿ ಅತಿಹೆಚ್ಚು 1,441 ಸಂಖ್ಯೆಯ ಅಪಾಯಕಾರಿ ಕಟ್ಟಡಗಳನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ. ವಾಗ್ಲೆà ಎಸ್ಟೇಟ್‌ನಲ್ಲಿ 1,086 ಅಪಾಯಕಾರಿ ಕಟ್ಟಡಗಳನ್ನು ಹೊಂದಿದೆ. ಸಿ1 ಮತ್ತು ಸಿ2ಎ ವರ್ಗದಲ್ಲಿರುವ ಎಲ್ಲಾ ಕಟ್ಟಡಗಳ ನಿವಾಸಿಗಳನ್ನು ಮೇ 31 ರೊಳಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕೃತ ಮೂಲಗಳು ಹೇಳಿವೆ.

ಲೋಕಮಾನ್ಯ-ಸಾವರ್ಕರ್‌ ನಗರ ವಾರ್ಡ್‌ಗಳು ಹಳೆಯ ಥಾಣೆ ಪ್ರದೇಶವನ್ನು ಹೊಂದಿದ್ದು, ಈ ಪ್ರದೇಶಗಳಲ್ಲಿರುವ ಹೆಚ್ಚಿನ ಕಟ್ಟಡಗಳು ಈಗ 40ರಿಂದ 50 ವರ್ಷಕ್ಕಿಂತಲೂ ಹೆಚ್ಚು ಹಳೆಯದಾಗಿದೆ. ಹಳೆಯ ಕಟ್ಟಡಗಳ ಪುನರಾಭಿವೃದ್ಧಿಗಾಗಿ ಮಹಡಿ ಸ್ಥಳ ಸೂಚ್ಯಂಕ ಬಗ್ಗೆ ಯಾವುದೇ ಸ್ಪಷ್ಟತೆ ಇನ್ನೂ ಇಲ್ಲ, ಇದು ನಾವಾ³ಡಾ, ರಾಮ ಮಾರುತಿ ರಸ್ತೆ, ವಿಷ್ಣು ನಗರ, ಬಿ-ಕ್ಯಾಬಿನ್‌ ಮತ್ತು ಪಂಚಪಕಾಡಿ ಪ್ರದೇಶಗಳಲ್ಲಿನ ಹೆಚ್ಚಿನ ಪುನರಾಭಿವೃದ್ಧಿಗೆ ಕಾರಣವಾಗಿದೆ ಎನ್ನಲಾಗಿದೆ.

ಮಾಲೀಕರು, ಬಾಡಿಗೆದಾರರು ಮತ್ತು ಡೆವಲಪರ್ಗಳ ನಡುವಿನ ಸಂಘರ್ಷದಿಂದಾಗಿ ಹೆಚ್ಚಿನ ಹಳೆಯ ಕಟ್ಟಡಗಳು ಅಪಾಯ ಕಾರಿಯಾಗಿದ್ದು, ಇದಲ್ಲದೆ, ಕಟ್ಟಡಗಳ ನಿವಾಸಿಗಳಿಗೆ ಪರ್ಯಾಯ ವಸತಿ ಕೊರತೆಯಿಂದಾಗಿ ಈ ಪ್ರದೇಶದ ಪುನರಾಭಿವೃದ್ಧಿಗೆ ಸಹ ಸ್ಥಗಿತಗೊಂಡಿದೆ. ನಾವಾ³ಡಾದ ವಾರ್ಡ್‌ ಕಚೇರಿಯ ಪ್ರಕಾರ 46 ಕಟ್ಟಡಗಳ ಸ್ಥಳಾಂತರ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಗೊಂಡಿದ್ದು, 20 ಕಟ್ಟಡಗಳನ್ನು ಈಗಾಗಲೇ ಖಾಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾವಾ³ಡಾ ನಗರವು 46 ಅತ್ಯಂತ ಅಪಾಯಕಾರಿ ಕಟ್ಟಡಗಳನ್ನು ಹೊಂದಿದ್ದು, ಅದರ ಅನಂತರ ವರ್ತಕ್‌ ನಗರದಲ್ಲಿ 20 ಮತ್ತು ಲೋಕಮಾನ್ಯ ಸಾವರ್ಕರ್‌ ನಗರದಲ್ಲಿ 15 ಅಪಾಯಕಾರಿ ಕಟ್ಟಡಗಳಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮಾನ್ಸೂನ್‌ ಮೊದಲು ಸಿ-1 ಮತ್ತು ಸಿ-2ಎ ವಿಭಾಗದಲ್ಲಿ 200ಕ್ಕೂ ಹೆಚ್ಚಿನ ಕಟ್ಟಡಗಳನ್ನು ಸ್ಥಳಾಂತರಿಸಬೇಕಾಗದ ಅಗತ್ಯವಿದ್ದು, ಸ್ಥಳಾಂತರ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ, ಸಿ-1 ವರ್ಗದ ಎÇÉಾ ಕಟ್ಟಡಗಳನ್ನು ಜೂನ್‌ ಮೊದಲ ವಾರದ ಮೊದಲು ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.