ಗೂಡ್ಸ್‌ ವಾಹನದಲ್ಲಿ ಮಾನವ ಸಾಗಾಟ ಅಪರಾಧ


Team Udayavani, May 10, 2019, 2:58 PM IST

kopala-tdy-3..

ಕೊಪ್ಪಳ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ ಮಾತನಾಡಿದರು.

ಕೊಪ್ಪಳ: ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಂಚಾರ ಅಪರಾಧವಾಗಿದ್ದು, ಯಾವುದೇ ಕಾರಣಕ್ಕೂ ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರು ಸೇರಿದಂತೆ ಶಾಲಾ ಮಕ್ಕಳು, ಕಾರ್ಮಿಕರು ಸಂಚರಿಸುವಂತ್ತಿಲ್ಲ ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್‌ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೊರಿಯಂ ಹಾಲ್ನಲ್ಲಿ ಕಾರ್ಮಿಕ ಇಲಾಖೆಯಿಂದ ಆಯೋಜಿಸಿದ್ದ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಪ್ರಕರಣ ಕುರಿತಂತೆ ಜರುಗಿದ ಕಾರ್ಮಿಕ ವರ್ಗದ ಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ವಾಹನಗಳ ಮಾಲೀಕರು ಸೇರಿದಂತೆ ಪೊಲೀಸ್‌, ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದರು.

ಹೈಕೋರ್ಟ್‌ ಆದೇಶದಂತೆ ಮುಂದಿನ ತಿಂಗಳು ಕಾರ್ಮಿಕರ ಹಿತಾಸಕ್ತಿ ಕಾಪಾಡುವ ಕುರಿತು ಕ್ರಿಯಾಯೋಜನೆ ಸಲ್ಲಿಸಲಾಗುತ್ತಿದೆ. ಕ್ರಿಯಾಯೋಜನೆಯಲ್ಲಿ ಕಾರ್ಮಿಕರಿಗೆ ಉದ್ಯೋಗದಾತ ಕಾರ್ಖಾನೆ, ಕಂಪನಿ ಹಾಗೂ ಶಾಲಾ-ಕಾಲೇಜುಗಳಿಗೆ ಪ್ರತ್ಯೇಕವಾಗಿ ಜನಜಾಗೃತಿ ಮತ್ತು ತಿಳಿವಳಿಕೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ನಿಟ್ಟಿನಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್‌, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಕೆಎಸ್‌ಆರ್‌ಟಿಸಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ನಂತರವೂ ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರು, ಶಾಲಾ ಮಕ್ಕಳು ಮತ್ತು ಕಾರ್ಮಿಕರನ್ನು ಕರೆದುಕೊಂಡು ಹೋದಲ್ಲಿ ಕಾನೂನು ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಎಚ್ಚರಿಸಿದರು.

ಸರಕು ಸಾಗಾಣಿಕೆ ವಾಹನದಲ್ಲಿ ಯಾವುದೇ ಕಾರಣಕ್ಕೂ ಕಾರ್ಮಿಕರನ್ನು, ಶಾಲಾ ಮಕ್ಕಳನ್ನು ಸಾಗಾಣಿಕೆ ಮಾಡುವಂತಿಲ್ಲ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಅವರ ಮನೆಯಿಂದ ಕರೆತಂದು ಶಾಲೆಯಿಂದ ಮರಳಿ ಅವರ ಮನೆಗೆ ತಲುಪಿಸುವಂತೆ ಮಾಡುವುದು ಆಯಾ ಶಾಲಾ ಆಡಳಿತ ಮಂಡಳಿ ಜವಾಬ್ದಾರಿಯಾಗಿದೆ. ನಿಯಮ ಮೀರಿ ಮಕ್ಕಳನ್ನು ಸಾಗಿಸುವ ವಾಹನ ಹಾಗೂ ಸರಕು ಸಾಗಾಣಿಕೆ ವಾಹನದಲ್ಲಿ ಕಾರ್ಮಿಕರನ್ನು ಒಯ್ಯುವುದು ಅಪರಾಧವಾಗಿದೆ. ಆದ್ದರಿಂದ ಎಲ್ಲ ಉದ್ಯೋಗದಾತರು ಕಾರ್ಮಿಕರ, ಶಾಲಾ ಮಕ್ಕಳ ಸುರಕ್ಷತೆ, ಕ್ಷೇಮದ ಬಗ್ಗೆ ಮುಂಜಾಗ್ರತೆ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ನೂರಮಹಮ್ಮದ ಬಾಷಾ ಮಾತನಾಡಿ, ಸರಕು ಸಾಗಾಣಿಕೆ ವಾಹನಗಳಲ್ಲಿ ವಸ್ತುಗಳನ್ನು ಹೊರತುಪಡಿಸಿ ಯಾವುದೇ ತರಹದ ಪ್ರಯಾಣಿಕರನ್ನು ಕೊಂಡೊಯ್ಯಲು ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಆಕಸ್ಮಿಕವಾಗಿ ಅಪಘಾತಗಳು ಸಂಭವಿಸಿದರೆ ಪ್ರಯಾಣಿಕರಿದ್ದಲ್ಲಿ ಕಾನೂನಾತ್ಮಕ ತೊಡಕುಗಳು ಉಂಟಾಗುತ್ತವೆ. ಯಾವುದೇ ತರಹದ ಪರಿಹಾರ ಪಡೆಯಲು ಅವಕಾಶವಿಲ್ಲ. ಅಂತಹ ಸದರ್ಭಗಳಲ್ಲಿ ಬಹುತೇಕ ವಾಹನ ಮಾಲೀಕರೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ.

ಸರಕು ಸಾಗಾಣಿಕೆ ವಾಹನಗಳಲ್ಲಿ ಶಾಲಾ ಮಕ್ಕಳನ್ನು, ಧಾರ್ಮಿಕ ಸ್ಥಳಗಳಿಗೆ ಹಾಗೂ ಕಾರ್ಖಾನೆಗಳಿಗೆ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಅನೇಕ ವಾಹನಗಳನ್ನು ತಪಾಸಣೆ ಮಾಡಿ ಪ್ರಕರಣಗಳನ್ನು ಸಹ ದಾಖಲಿಸಿ ದಂಡವನ್ನು ಹಾಕಲಾಗಿದೆ ಎಂದರು.

ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಾಹನಗಳ ಮೇಲೆ 54 ಪ್ರಕರಣಗಳನ್ನು ದಾಖಲಿಸಿ ಒಂದು ಲಕ್ಷ ದಂಡ ಹಾಕಲಾಗಿದೆ. ಇದಲ್ಲದೇ ವಾಹನಗಳಿಗೆ ನೀಡಿರುವ ಪರವಾನಗಿ ರದ್ದು ಪಡಿಸುವ ಅವಕಾಶವಿದ್ದು ಇದನ್ನು ಮುಂದಿನ ದಿನಗಳಲ್ಲಿ ಜಾರಿ ಮಾಡಲಾಗುತ್ತದೆ ಎಂದರು.

ಜಿಪಂ ಸಿಇಒ ಆರ್‌.ಎಸ್‌. ಪೆದ್ದಯ್ಯ, ಎಡಿಸಿ ಬಾಲಚಂದ್ರ, ಎಸಿ ಸಿ.ಡಿ. ಗೀತಾ, ಡಿಡಿಪಿಐ ಅಮಿತಾ ಯರಗೋಳ್ಕರ್‌, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಫಯಾಜ್‌, ಡಿಟಿಒ ಬಿರಾದಾರ, ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ರಾಘವೇಂದ್ರ ಪಾನಘಂಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.