ಕುರುಬ ಸಮುದಾಯದ ನಡವಳಿಕೆ ಬದಲಾಗಲಿ

ವಾಸ್ತವಿಕ ಧರ್ಮದ ತಳಹದಿ ಮೇಲೆ ನುಡಿಯುವ ಕಾರ್ಣಿಕ ಪರಮಸತ್ಯ: ವಿಶ್ವನಾಥ್‌

Team Udayavani, May 10, 2019, 3:14 PM IST

10-May-25

ಹೂವಿನಹಡಗಲಿ: ಮೈಲಾರ ಸುಕ್ಷೇತ್ರದ ಕಾಗಿನೆಲೆ ಶಾಖಾಮಠದಲ್ಲಿ ನಡೆದ ಸಾಮೂಹಿಕ ವಿವಾಹ ಹಾಗೂ ಸ್ಥಿರಬಿಂಬ ಸ್ಫಟಿಕಲಿಂಗು ಸ್ಥಾಪನೆ ಕಾರ್ಯಕ್ರಮವನ್ನು ವಿವಿಧ ಸ್ವಾಮೀಜಿಗಳು ಉದ್ಘಾಟಿಸಿದರು. ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ, ಶಾಸಕ ಆರ್‌. ಶಂಕರ ಇದ್ದರು.

ಹೂವಿನಹಡಗಲಿ: ಕುರುಬ ಸಮುದಾಯದವರು ನಾಡಿನ ಎಲ್ಲಾ ಜಾತಿ ಸಮುದಾಯದವರನ್ನು ಪ್ರೀತಿಸುವ ಮೂಲಕ ತಮ್ಮ ನಡುವಳಿಕೆ ಬದಲಾಯಿಸಿಕೊಳ್ಳಬೇಕು. ಇಲ್ಲವಾದರೆ ಮುಂದೊಂದು ದಿನ ಸಮುದಾಯ ಏಕಾಂಗಿಯಾಗಿ ಇರಬೇಕಾಗುತ್ತದೆ ಎಂದು ಮಾಜಿ ಸಚಿವ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ ಎಚ್ಚರಿಸಿದರು.

ತಾಲೂಕಿನ ಮೈಲಾರದಲ್ಲಿ ಕಾಗಿನೆಲೆ ಶಾಖಾ ಮಠದಲ್ಲಿ ಸ್ಥಿರಬಿಂಬ ಸ್ಫಟಿಕಲಿಂಗು ಪ್ರತಿಷ್ಠಾಪನೆ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾಗಿನೆಲೆ ಕನಕ ಗುರುಪೀಠ ಎಲ್ಲ ಜಾತಿ ಸಮುದಾಯದವರನ್ನು ಒಳಗೊಂಡಿರುವಂತಹ ಪೀಠವಾಗಿದೆ. ಕಳೆದ 25 ವರ್ಷಗಳಲ್ಲಿ ಪೀಠ ಮುಂದಿಟ್ಟುಕೊಂಡು ಧರ್ಮ, ಸಂಸ್ಕೃತಿ, ಶಿಕ್ಷಣ, ಪ್ರಗತಿ ಕುರಿತು ನಮ್ಮ ಮಠಗಳು ಶ್ರಮಿಸುತ್ತಿವೆ. ಇಡೀ ಸಮಾಜದ ಧಾರ್ಮಿಕ ಬಲವನ್ನಿಟ್ಟುಕೊಂಡು ರಾಜ್ಯದ ಮುಖ್ಯಮಂತ್ರಿಯಂತಹ ಉನ್ನತ ಹುದ್ದೆ ಪಡೆದುಕೊಳ್ಳಲು ಸಮುದಾಯಕ್ಕೆ ಸಾಧ್ಯವಾಯಿತು ಎಂದರು.

ಮೈಲಾರದಲ್ಲಿ ನುಡಿಯುವ ಕಾರ್ಣಿಕ ನುಡಿ ಸತ್ಯವಾದದ್ದು, ಅದು ವಾಸ್ತವಿಕ ಧರ್ಮದ ತಳಹದಿಯಲ್ಲಿ ನಡೆಯುವಂತಹದ್ದು, ಅದನ್ನು ಎಲ್ಲರೂ ನಂಬಲೇಬೇಕಾಗಿದೆ. ಜೀವನದಲ್ಲಿ ದಾಂಪತ್ಯದ ಬದುಕು ಅತಿ ಮುಖ್ಯವಾದದ್ದು. ದಾಂಪತ್ಯಕ್ಕೆ ಕಾಲಿಡಲು ಇಂತಹ ಸರಳ ಸಾಮೂಹಿಕ ವಿವಾಹಗಳು ಅಗತ್ಯ. ನಾನು ಸಹ ನನ್ನ ಮಕ್ಕಳ ಮದುವೆಯನ್ನು ಸಾಮೂಹಿಕ ವಿವಾಹದಲ್ಲಿ ಮಾಡಿದ್ದು, ರಾಜಕಾರಣಿಗಳು ಸಹ ಇದನ್ನು ಅಳವಡಿಸಿಕೊಳ್ಳಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಮಾನಾಡಿದ ತರಳಬಾಳು ಸಿರಿಗೆರೆ ಬೃಹನ್ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಮಾಜಕ್ಕೆ ರಾಜಕೀಯ ಪ್ರಜ್ಞೆ ಎಷ್ಟು ಮುಖ್ಯವೋ, ಧಾರ್ಮಿಕ ಪ್ರಜ್ಞೆಯೂ ಅಷ್ಟೇ ಪ್ರಮುಖ. ಯಾವ ಸಮಾಜವು ಸಹ ಕೀಳಲ್ಲ. ಶರೀರ ಸುಸ್ಥಿರವಾಗಿರಬೇಕಾದರೆ, ತಲೆ ಎಷ್ಟು ಮುಖ್ಯವೋ, ಕಾಲು ಸಹ ಅಷ್ಟೇ ಮುಖ್ಯ. ಭೂಮಿಗೆ ಕಸು ನೀಡುವ ಸಮುದಾಯದವರಾಗಿ, ಚಳಿ ಆದಾಗ ಕಂಬಳಿ ಕೊಡುವ ಸಮುದಾಯದವರಾದ ನಿಮಗೆ ಹೆಮ್ಮೆ ಇರಲಿ ಎಂದರು.

ಸಮುದಾಯದಲ್ಲಿ ಎರಡು ಜಾತಿಗಳಿವೆ. ಒಂದು ಉಣ್ಣುವಾಗ ಬೆವರು ಸುರಿಸೋ ಜಾತಿ. ಇನ್ನೊಂದು ಕೆಲಸ ಮಾಡುವಾಗ ಬೆವರು ಸುರಿಸೋ ಜಾತಿ. ನೀವುಗಳು ಕೆಲಸ ಮಾಡುವಾಗ ಬೆವರು ಸುರಿಸೋ ಜಾತಿಯವರು. ನಿಮ್ಮ ಸಮುದಾಯಕ್ಕೆ ನಿರಂಜನಾನಂದಪುರಿ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ ಜೋಡೆತ್ತಿದ್ದಂಗೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಮೈಲಾರದಲ್ಲಿ ಕನಕ ಗುರುಪೀಠದ ಶಾಖಾ ಮಠ ನಿರ್ಮಾಣವಾಗಿರುವುದು ಕೆಲವರಿಗೆ ತಳಮಳವಾಗಿದೆ. ಇನ್ನು ಕೆಲವರು ಗೊಂದಲಕ್ಕೀಡಾಗಿದ್ದಾರೆ. ಆದರೆ, ಕನಕ ಗುರುಪೀಠ ಇಲ್ಲಿ ಯಾರ ಹಠಕ್ಕೂ ಮಠ ನಿರ್ಮಿಸಿಲ್ಲ. ಬದಲಾಗಿ ಭಕ್ತರ ಉದ್ಧಾರಕ್ಕಾಗಿ ಮಠ ನಿರ್ಮಿಸಲಾಗಿದೆ. ಯಾರಿಗೆ ಸಮಾಜದಲ್ಲಿ ಧಾರ್ಮಿಕ ಸ್ವತಂತ್ರತೆ ಇಲ್ಲವೋ, ಯಾರು ತುಳಿತಕ್ಕೆ ಒಳಗಾಗಿದ್ದಾರೆಯೋ ಅಂಥವರ ಉದ್ಧಾರಕ್ಕಾಗಿ ಮಠ ನಿರ್ಮಾಣ ಮಾಡಲಾಗಿದೆ. ಕನಕ ಗುರುಪೀಠದ ಸ್ವಾಮೀಜಿ ಯಾರ ಆಸ್ತಿಗಾಗಿ ಸ್ವಾಮಿಗಳಾದವರಲ್ಲ. ಮಠದ ಭಕ್ತರು ಯಾರ ಗೊಂದಲಕ್ಕೆ ಕಿವಿಗೊಡಬಾರದು ಎಂದರು.

ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹೊಸದುರ್ಗ ಮಠದ ಡಾ| ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಭೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಚಿತ್ರದುರ್ಗದ ಮಡಿವಾಳ ಮಾಚಿದೇವಯ್ಯ ಗುರುಪೀಠದ ಮಾಚಿದೇವಾನಂದ ಸ್ವಾಮೀಜಿ, ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಹೂವಿನಹಡಗಲಿ ಗವಿಮಠದ ಡಾ| ಹಿರಿಶಾಂತವೀರ ಸ್ವಾಮೀಜಿ, ಹಿರೇಮಲ್ಲನಕೇರಿ ಮಠದ ಚನ್ನಬಸವ ಸ್ವಾಮೀಜಿ, ನಂದಿಪುರ ಶ್ರೀಗಳು ಸೇರಿದಂತೆ ಹರಗುರು ಚರಮೂರ್ತಿಗಳು ಸಮ್ಮುಖ ವಹಿಸಿದ್ದರು. ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಆರ್‌. ಶಂಕರ್‌, ಸಮಾಜದ ಮುಖಂಡರಾದ ಎಂ. ಪರಮೇಶ್ವರಪ್ಪ, ಬಿ.ಹನುಮಂತಪ್ಪ, ಈಟಿ ಲಿಂಗರಾಜು ಇನ್ನಿತರರಿದ್ದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.