ಸತ್ಪುರುಷ ಆಗುವುದು ಹೇಗೆ?


Team Udayavani, May 11, 2019, 6:00 AM IST

bb

ಕೇವಲ ಗುರಿ ಮುಟ್ಟುವುದಷ್ಟೇ ಬದುಕಿನ ಉದ್ದೇಶವಲ್ಲ. ಗುರಿ ಮುಟ್ಟುವ ಹಾದಿಯೂ ಮುಖ್ಯವೇ.ಹಿತವಾದದ್ದನ್ನು ಪಡೆಯಲು ಪರರ ಅಹಿತಕ್ಕೆ ಕಾರಣವಾಗುವ ನಡೆ ಗುರಿ ತಪ್ಪಿಸುತ್ತದೆ. ನಿಜವಾದ ಸಂತೋಷ ದಕ್ಕುವುದಿಲ್ಲ.ಆನಂದದ ಭ್ರಮೆಯನ್ನೇ ಅಪ್ಪಿಕೊಂಡು ಸಂಭ್ರಮಿಸುತ್ತೇವೆ ಅಷ್ಟೆ…

ಹುಟ್ಟನ್ನು ನಾವು ಸಂಭ್ರಮಿಸುವುದಿಲ್ಲ. ಹುಟ್ಟಿದ ತಕ್ಷಣ ಅಳಬೇಕಂತೆ.ಇದು ಆರೋಗ್ಯದ ಲಕ್ಷಣ. ಹಾಗಾಗಿ, ಈ ಹುಟ್ಟು ಎಂಬುದು ಸಂತಸದೊಳಗಿನ ಭಯ. ಸಾವು ನಮ್ಮದಲ್ಲವೇ ಅಲ್ಲ. ಬದುಕು ಮಾತ್ರ ನಮ್ಮದು ಎಂದು ಕೊಂಡಿದ್ದೇವೆ. ಆಳಕ್ಕಿಳಿದು ನೋಡಿದರೆ ಅದೂ ಕೂಡ ಒಂದಿಷ್ಟು ಸಂದಿಗ್ಧಗಳಲ್ಲಿ ಸಿಲುಕಿ, ಪರಾವಲಂಬನೆಯ ದಾರಿಯಲ್ಲಿ ನಡೆದುಕೊಂಡು ಏನನ್ನೋ ಹುಡುಕುತ್ತ, ಪಡೆಯುತ್ತ, ಕಳೆದುಕೊಳ್ಳುತ್ತ ಸಾಗುವ, ಸಂಪೂರ್ಣವಾಗಿ ನಮ್ಮದಾಗದ ಬದುಕು ನಮ್ಮದು. ನಾವು ಪೂರ್ಣವಲ್ಲದಿದ್ದರೂ ಆದಷ್ಟು ನಮ್ಮದೇ ಆದ ಗುರಿ, ಆ ಗುರಿಗೊಂದು ಸತ್ಪತವನ್ನು ಹುಡುಕಿಕೊಂಡು, ಆ ಮೂಲಕ ಬದುಕಿನ ಪಯಣವನ್ನು ಸುಂದರವಾಗಿಸಿಕೊಳ್ಳುವ ಯತ್ನ ಮಾಡಲೇಬೇಕು. ಈ ಯತ್ನ ಸಾರ್ಥಕತೆಯ ಆಕಾಂಕ್ಷೆಯನ್ನು ಹೊತ್ತುಕೊಂಡು, ಹಿತವಾದ ಮಾರ್ಗವನ್ನು ಅನುಸರಿಸಿಕೊಂಡು ಹೋಗಬೇಕಾದದ್ದೂ ಅಗತ್ಯ. ಕೇವಲ ಗುರಿ ಮುಟ್ಟುವುದಷ್ಟೇ ಬದುಕಿನ ಉದ್ದೇಶವಲ್ಲ. ಗುರಿ ಮುಟ್ಟುವ ಹಾದಿಯೂ ಮುಖ್ಯವೇ. ಹಿತವಾದದ್ದನ್ನು ಪಡೆಯಲು ಪರರ ಅಹಿತಕ್ಕೆ ಕಾರಣವಾಗುವ ನಡೆ ಗುರಿ ತಪ್ಪಿಸುತ್ತದೆ. ನಿಜವಾದ ಸಂತೋಷ ದಕ್ಕುವುದಿಲ್ಲ. ಆನಂದದ ಭ್ರಮೆಯನ್ನೇ ಅಪ್ಪಿಕೊಂಡು ಸಂಭ್ರಮಿಸುತ್ತೇವೆ ಅಷ್ಟೆ.

ಸನ್ಮಾರ್ಗದಲ್ಲಿ ನಡೆದು ಸತ್ಪುರುಷನಾಗುವ ಹಂಬಲ ಎಲ್ಲರಿಗೂ ಇದ್ದದ್ದೇ. ಸತ್ಪುರುಷನಾಗುದೆಂದರೆ ಒಳ್ಳೆಯ ಮನಸ್ಥಿತಿಯನ್ನು ಹೊಂದುವುದೇ ಆಗಿದೆ. ದೇಹವನ್ನು ಆಳುವ ಮನಸ್ಸು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆ ವ್ಯಕ್ತಿತ್ವ ಬೆಳೆದು ಬಂದ ರೀತಿಯಲ್ಲಿ ತನ್ನ ಬಯಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗುತ್ತದೆ. ಒಳ್ಳೆಯ ವ್ಯಕ್ತಿತ್ವ ಉತ್ತಮ ಮಾರ್ಗವನ್ನೂ ಸಂಸ್ಕಾರರಹಿತವಾದ ವ್ಯಕ್ತಿತ್ವ ದುರ್ಮಾರ್ಗವನ್ನೂ ಅನುಸರಿಸುವುದು ಸಹಜ. ಇಂಥ ನಡೆಗಳೇ ನಾವು ಸತ್ಪುರುಷರಾಗುವ ಲಕ್ಷಣವನ್ನು ಹೇಳುತ್ತವೆ. ಯಾರು ಸತ್ಪುರುಷರು ಎಂಬುದಕ್ಕೆ ನೀತಿಶತಕ ಹೀಗೊಂದು ಶ್ಲೋಕದಲ್ಲಿ ಅವರ ಲಕ್ಷಣವನ್ನು ವಿವರಿಸಿದೆ.

ಏತೇ ಸತ್ಪುರುಷಾಃ ಪರಾರ್ಥಘಟಕಾಃ
ಸ್ವರ್ಥಂ ಪರಿತ್ಯಜ್ಯಯೇ
ಸಾಮಾನ್ಯಾಸ್ತು ಪರಾರ್ಥಮುದ್ಯಮಭ್ಯತಃ
ಸ್ವಾರ್ಥಾವಿರೋಧೇನ ಯೇ |
ತೇಮೀ ಮಾನುಷರಾಕ್ಷಸಾಃ ಪರಹಿತಂ
ಸ್ವಾರ್ಥಾಯ ನಿಘ್ನಂತಿಯೇ
ಯೇ ನಿಘ್ನಂತಿ ನಿರರ್ಥಕಂ ಪರಹಿತಂತೇ ಕೇನ
ಜಾನೀಮಹೇ ||

ಯಾರು ಸ್ವಾರ್ಥವನ್ನು ಬಿಟ್ಟು ಪರರ ಪ್ರಯೋಜನವನ್ನು ಸಾಧಿಸುತ್ತಾರೋ ಅವರು ಸತ್ಪುರುಷರು. ಯಾರು ಸ್ವಾರ್ಥಕ್ಕೆ ತೊಂದರೆ ಬರದಂತೆ ಪರಾರ್ಥವನ್ನು ಸಾಧಿಸುತ್ತಾರೋ ಅವರು ಸಾಮಾನ್ಯರು. ಯಾರು ಸ್ವಾರ್ಥಕೋಸ್ಕರ ಪರರ ಹಿತವನ್ನು ಹಾಳು ಮಾಡುತ್ತಾರೋ ಅವರು ಮನುಷ್ಯ ರೂಪದ ರಾಕ್ಷಸರು. ಯಾರು ನಿರರ್ಥಕವಾಗಿ ಪರರ ಹಿತವನ್ನು ಹಾಳು ಮಾಡುವರೋ ಅವರನ್ನು ಏನೆಂದು ಕರೆಯಬೇಕೋ ಗೊತ್ತಿಲ್ಲ ಎನ್ನುತ್ತದೆ ನೀತಿಶತಕ.

ಅರ್ಥವಿಷ್ಟೆ, ಸ್ವಾರ್ಥವನ್ನು ಮೊದಲು ಬಿಡಬೇಕು ಮತ್ತು ಪರಹಿತವೇ ತಮ್ಮ ಹಿತವೆಂದು ತಮ್ಮನ್ನು ತೊಡಗಿಸಿಕೊಳ್ಳಬೇಕು. ಆಗ ಸತ್ಪುರುಷನಾಗಲು ಸಾಧ್ಯ. ಇದು ಕಷ್ಟಸಾಧ್ಯ. ಒಬ್ಬ ವ್ಯಕ್ತಿ ಸ್ವಾರ್ಥವನ್ನು ಬಿಡುತ್ತಾನೆ ಎಂದರೆ ಆತ ಯೋಗಿಯಾಗಬೇಕು. ತ್ಯಾಗವನ್ನು ಪ್ರೀತಿಸಬೇಕು. ಈ ತ್ಯಾಗವೇ ಪರರ ಹಿತದ ಮೊದಲ ಹೆಜ್ಜೆ. ಪರರ ಹಿತವೇ ಆತನ ಪರಮ ಸುಖವಾಗಬೇಕು. ಸ್ವಾರ್ಥದ ಬೇರು ಮನದೊಳಗೆ ಹರಡಿ, ಹೆಮ್ಮರವಾಗಿ, ಇಡೀ ಬದುಕನ್ನು ಆವರಿಸಿಕೊಂಡರೆ ಆತ ಮನುಷ್ಯ ರೂಪದ ರಕ್ಕಸನಾಗುತ್ತಾನೆ. ಮನೋ ನಿಯಂತ್ರಣ ಇದಕ್ಕೆ ಸುಲಭದಾರಿ. ಒಂದು ಸತ್ಯವಾದ, ಸಂಸ್ಕಾರಯುತವಾದ, ಪರಹಿತವಾದ ಬದುಕನ್ನು ನಡೆಸುವ ರೀತಿಯೇ ನಮ್ಮನ್ನು ಸತ್ಪುರುಷರನ್ನಾಗಿಸುತ್ತದೆ.

– ವಿಷ್ಣು ಭಟ್‌ ಹೊಸ್ಮನೆ

ಟಾಪ್ ನ್ಯೂಸ್

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.