ಕಾಂಗ್ರೆಸ್‌ನಿಂದ ಆಪರೇಷನ್‌ ತಿರುಗೇಟು?

ಬಿಜೆಪಿ 10 ಶಾಸಕರಿಗೆ ಕೈ ಹಾಕಿದರೆ, ನಾವು 20 ಶಾಸಕರ ಸೆಳೆಯುತ್ತೇವೆ: ದಿನೇಶ್‌ ಗುಂಡೂರಾವ್‌

Team Udayavani, May 11, 2019, 6:00 AM IST

Dinesh-Gundurao-545-A

ಹುಬ್ಬಳ್ಳಿ/ಬೆಳಗಾವಿ: ಲೋಕಸಭೆ ಚುನಾವಣೆ ಫ‌ಲಿತಾಂಶ ಹತ್ತಿರವಾಗುತ್ತಿದ್ದಂತೆ ‘ಆಪರೇಷನ್‌ ಪೈಪೋಟಿ’ಯೂ ಜೋರಾಗಿದೆ.

ಆಡಳಿತ ಪಕ್ಷಗಳಲ್ಲಿ 20ಕ್ಕೂ ಹೆಚ್ಚು ಅತೃಪ್ತ ಶಾಸಕರಿದ್ದು, ಮೇ 23ರ ಬಳಿಕ ರಾಜ್ಯದ ಸಮ್ಮಿಶ್ರ ಸರಕಾರ ಉಳಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆಪರೇಷನ್‌ ಹಸ್ತ ಮಾಡುವುದಾಗಿ ತಿರುಗೇಟು ನೀಡಿದ್ದಾರೆ.

ಕುಂದಗೋಳ ಚುನಾವಣೆ ನಿಮಿತ್ತ ಪ್ರವಾಸದಲ್ಲಿರುವ ಬಿಎಸ್‌ವೈ, ಮೈತ್ರಿಪಕ್ಷಗಳಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಸಚಿವ ಸಂಪುಟ ಸಭೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಹಿತ ಅನೇಕ ನಾಯಕರು ರೆಸಾರ್ಟ್‌ ಸೇರಿದ್ದಾರೆ. ಇದರಿಂದಾಗಿ ಮೈತ್ರಿ ಸರಕಾರದಲ್ಲಿ ಅಸಮಾಧಾನ ಭುಗಿಲೆದ್ದಿದೆ ಎಂಬುದು ಗೋಚರಿಸುತ್ತಿದೆ. ಎರಡು ಉಪ ಚುನಾವಣೆಗಳ ಅನಂತರ ಬಿಜೆಪಿ ಶಾಸಕರ ಸಂಖ್ಯೆ 104ರಿಂದ 106ಕ್ಕೆ ಹೆಚ್ಚಲಿದೆ. ಮೈತ್ರಿಪಕ್ಷಗಳ 20ಕ್ಕೂ ಹೆಚ್ಚು ಶಾಸಕರ ಅತೃಪ್ತಿ ಸರಕಾರದ ಪತನಕ್ಕೆ ಕಾರಣವಾಗಲಿದೆ ಎಂದರು.

10 ಸೆಳೆದರೆ ನಾವು 20ಕ್ಕೆ ಕೈಹಾಕ್ತೇವೆ
ಬಿಜೆಪಿಯೇನಾದರೂ ನಮ್ಮ ಹತ್ತು ಶಾಸಕರಿಗೆ ಕೈ ಹಾಕಿದರೆ, ನಾವು ಅವರ ಇಪ್ಪತ್ತು ಶಾಸಕರನ್ನು ಸೆಳೆಯುತ್ತೇವೆ. ಆ ಮಟ್ಟದ ಸಂಪರ್ಕ, ಸಾಮರ್ಥ್ಯ ನಮಗೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ‘ಉದಯವಾಣಿ’ ಜತೆ ಮಾತನಾಡಿದ ಅವರು, ಕಳೆದೊಂದು ವರ್ಷದಿಂದ ಬಿಜೆಪಿಯವರು ಆಡುತ್ತಿರುವ ಎಲ್ಲ ಆಟಗಳನ್ನು ನೋಡಿದ್ದೇವೆ. ಅವರ ಆಟಕ್ಕೆ ಪ್ರತಿ ಆಟದ ಎದುರೇಟು ನೀಡಬಲ್ಲ ಕಲೆ ನಮಗೂ ಗೊತ್ತಿದೆ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ರಮೇಶ್‌ ಜತೆ ನಾಲ್ವರ ರಾಜೀನಾಮೆ?
ಮೇ 23ರ ಬಳಿಕ ರಮೇಶ್‌ ಜಾರಕಿಹೊಳಿ ಜತೆ ನಾಲ್ಕು ಶಾಸಕರು ರಾಜೀನಾಮೆ ನೀಡಲಿದ್ದಾರೆಯೇ? ಈ ಬಗ್ಗೆ ಸ್ವತಃ ರಮೇಶ್‌ ಅವರೇ, ತಮ್ಮ ಆಪ್ತರಿಗೆ ಸುಳಿವು ನೀಡಿದ್ದಾರೆ ಎಂದು ತಿಳಿದುಬಂದಿದೆ. ಮೈತ್ರಿ ಸರಕಾರದ ಚಟುವಟಿಕೆಗಳಿಂದ ದೂರ ಉಳಿದಿರುವ ರಮೇಶ ಜಾರಕಿಹೊಳಿ, ಶುಕ್ರವಾರ ನಗರದ ಖಾಸಗಿ ಹೊಟೇಲ್ನಲ್ಲಿ ಯಮಕನಮರಡಿಯ ಬಿಜೆಪಿ ಹಿರಿಯ ಮುಖಂಡ ಬಿ.ಬಿ.ಹಂಜಿ ಹಾಗೂ ಅವರ ಪುತ್ರ ರವಿ ಹಂಜಿ ಜತೆ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ ಅವರು, ಕ್ಷೇತ್ರದ ಮಾಹಿತಿ ಹಾಗೂ ಅಲ್ಲಿನ ಬಿಜೆಪಿ ಸಂಘಟನೆ ಕುರಿತು ಚರ್ಚಿಸಿದ್ದಾರೆ. ಮೈತ್ರಿ ಸರಕಾರ ಪತನದ ಅನಂತರ ಬಿಜೆಪಿ ಸರಕಾರ ರಚನೆಯಾಗುವುದು ಖಚಿತ ಎಂದು ಹೇಳಿದ್ದಾರೆ.

ರಮೇಶ ಜಾರಕಿಹೊಳಿ ಅವರಿಗೆ ಕಾಂಗ್ರೆಸ್‌ ಏನೂ ಅನ್ಯಾಯ ಮಾಡಿಲ್ಲ. ಹಲವು ಅವಕಾಶಗಳನ್ನು ನೀಡಿದೆ. ಸಚಿವ ಸ್ಥಾನ ನೀಡಿದ್ದರೂ ಅವರು ಸಂಪುಟ ಸಭೆಗೆ ಬರಲಿಲ್ಲ. ಕೆಲವು ವೈಯಕ್ತಿಕ ಕಾರಣಕ್ಕೆ ಅವರು ಅಸಮಾಧಾನಗೊಂಡಿರಬೇಕು.
– ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.