ಆರೋಪ ಸಾಬೀತಾದ್ರೆ ನೇಣಿಗೇರುವೆ
Team Udayavani, May 11, 2019, 6:05 AM IST
ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವಿನ ‘ಅವಹೇಳನಕಾರಿ ಕರಪತ್ರ’ ವಿವಾದ ಶುಕ್ರವಾರವೂ ಮುಂದುವರಿದಿದೆ. ಆಪ್ ಅಭ್ಯರ್ಥಿ ಆತಿಷಿ ವಿರುದ್ಧ ಕೀಳುಮಟ್ಟದಲ್ಲಿ ಟೀಕಿಸಿದ್ದ ಕರಪತ್ರದ ಹಿಂದೆ ಪೂರ್ವ ದಿಲ್ಲಿಯ ಬಿಜೆಪಿ ಅಭ್ಯರ್ಥಿ ಗೌತಮ್ ಗಂಭೀರ್ ಅವರ ಕೈವಾಡವಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಮತ್ತೆ ಪ್ರತಿಕ್ರಿಯೆ ನೀಡಿರುವ ಗಂಭೀರ್, ‘ನನ್ನ ಮೇಲಿನ ಆರೋಪ ಸಾಬೀತಾದರೆ, ನಾನು ಸಾರ್ವಜನಿಕವಾಗಿ ನೇಣಿಗೇರಲು ಸಿದ್ಧ’ ಎಂದಿದ್ದಾರೆ. ಜತೆಗೆ, ಆರೋಪ ಸಾಬೀತುಮಾಡಲು ಆಪ್ ವಿಫಲವಾದರೆ, ಕೇಜ್ರಿವಾಲ್ ಅವರು ರಾಜಕೀಯ ತ್ಯಜಿಸಬೇಕು ಎಂಬ ಸವಾಲನ್ನೂ ಹಾಕಿದ್ದಾರೆ. ಇದರ ಜೊತೆಗೆ, ಶುಕ್ರವಾರ ಆಪ್ ನಾಯಕರ ವಿರುದ್ಧ ಮಾನಹಾನಿ ನೋಟಿಸ್ ಜಾರಿ ಮಾಡಿದ್ದಾರೆ. ಇನ್ನೊಂದೆಡೆ, ಆಪ್ ಅಭ್ಯರ್ಥಿ ಆತಿಷಿ ದಿಲ್ಲಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಗಂಭೀರ್ಗೆ ಮಾನಹಾನಿ ನೋಟಿಸ್ ಜಾರಿ ಮಾಡುವುದಾಗಿ ಡಿಸಿಎಂ ಸಿಸೋಡಿಯಾ ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ, ಗಂಭೀರ್ ಪರ ಕ್ರಿಕೆಟಿಗರಾದ ಹರ್ಭಜನ್ ಸಿಂಗ್ ಮತ್ತು ವಿವಿಎಸ್ ಲಕ್ಷ್ಮಣ್ ಬ್ಯಾಟಿಂಗ್ ಮಾಡಿದ್ದಾರೆ. ಗಂಭೀರ್ ನಮಗೆ ಹಲವು ವರ್ಷಗಳಿಂದ ಗೊತ್ತು. ಅವರಿಗೆ ಮಹಿಳೆಯರ ಬಗ್ಗೆ ಗೌರವವಿದೆ. ಅವರು ಇಂಥ ಕೆಲಸ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು