ಮೇ 29: ಎರಡು ಗ್ರಾ.ಪಂ.ಗಳ ಮೂರು ಸ್ಥಾನಕ್ಕೆ ಉಪಚುನಾವಣೆ

ಉಜಿರೆ, ಕೊಯ್ಯೂರು ಗ್ರಾ.ಪಂ. ಕ್ಷೇತ್ರಗಳು

Team Udayavani, May 11, 2019, 9:33 AM IST

panvhayath

ಬೆಳ್ತಂಗಡಿ : ತಾಲೂಕಿನ ಉಜಿರೆ ಹಾಗೂ ಕೊಯ್ಯೂರು ಗ್ರಾ.ಪಂ.ಕ್ಷೇತ್ರಗಳಲ್ಲಿ ಕಾರಣಾಂತರಗಳಿಂದ ತೆರವಾದ ಸ್ಥಾನಕ್ಕೆ ಮೇ 29ರಂದು ಉಪಚುನಾವಣೆ ನಿಗದಿಯಾಗಿದೆ.

ಉಜಿರೆಯ ಎರಡು ಕ್ಷೇತ್ರಗಳಾದ ವಾರ್ಡ್‌ ನಂ. 4ರಲ್ಲಿ ಸದಸ್ಯೆ ಗೀತಾ ವೆಂಕಪ್ಪ ನಾಯ್ಕ ರಾಜೀನಾಮೆ ಹಾಗೂ ವಾರ್ಡ್‌ ನಂ. 11ರಲ್ಲಿ ಸದಸ್ಯ ವೆಂಕಪ್ಪ ನಾಯ್ಕ ನಿಧನದ ಹಿನ್ನೆಲೆ ಸ್ಥಾನ ತೆರವಾಗಿತ್ತು.

ಕೊಯ್ಯೂರು ಗ್ರಾ.ಪಂ.ನ ವಾರ್ಡ್‌ ನಂ. 2ರಲ್ಲಿ ಪರಿಶಿಷ್ಟ ಜಾತಿಯ ವಿಟuಲ ನಿಧನ ಹೊಂದಿದ್ದರಿಂದ ತೆರವಾದ ಸ್ಥಾನಕ್ಕೆ ಮೇ 29ರಂದು ಪೂರ್ವಾಹ್ನ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಮೇ 29 ಮತದಾನ: ಮೇ 31ಎಣಿಕೆ
ಮೇ 13ರಿಂದ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 17ರಂದು ನಾಮ ಪತ್ರಗಳ ಪರಿಶೀಲನೆ ಕೈಗೊಳ್ಳಲಿದ್ದು, ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 29ರಂದು ಮತದಾನ ನಡೆಯಲಿದ್ದು, 31ರಂದು ಬೆಳಗ್ಗೆ 8ರಿಂದ ತಾ| ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ.

ಮೇ 13ರಂದು ಚುನಾವಣಾಧಿಕಾರಿಗಳಿಗೆ ಮತದಾರರ ಪಟ್ಟಿ ನೀಡಬೇಕಾಗಿದ್ದು, ಆದರೆ ಇನ್ನೂ ಮತದಾರರ ಪಟ್ಟಿ ಬಿಡುಗಡೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಮೇ 11 ಎರಡನೇ ಶನಿವಾರ, ಮೇ 12ರಂದು ರವಿವಾರ ರಜೆಯಾದ್ದರಿಂದ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಮತದಾರರ ಪಟ್ಟಿ ಇನ್ನೂ ಬೆಂಗಳೂರು ಚುನಾವಣಾಧಿಕಾರಿ ಕಚೇರಿಯಲ್ಲೇ ಉಳಿದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಮೇ 13ರಿಂದ 31ರ ಮತ ಎಣಿಕೆ ಪ್ರಕ್ರಿಯೆ ಮುಗಿಯುವ ವರೆಗೆ ಗ್ರಾ.ಪಂ. ವ್ಯಾಪ್ತಿಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಹಿಂದೆ ವಾರ್ಡ್‌ಗೆ ಮಾತ್ರ ಸೀಮಿತವಾಗಿದ್ದ ನೀತಿಸಂಹಿತೆ ಈ ಬಾರಿ ಪೂರ್ತಿ ಗ್ರಾ.ಪಂ.ಗೆ ಅನ್ವಯವಾಗಿರುವುದು ವಿಶೇಷ.

ಉಜಿರೆ ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣ ಸಂಯೋಜಕ ಸುಭಾಶ್‌ ಜಾಧವ್‌ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ಉಜಿರೆ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಯಲ್ಲವ್ವ ಹಂಡಿ, ಕೊಯ್ಯೂರು ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಯಾಗಿ ಸುಧಾಕರ (ಪಿಡಿಒ ಪಡಂಗಡಿ) ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ನಾರಾವಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ನಿರ್ಮಲ್ ಕುಮಾರ್‌ ನೇಮಕಗೊಂಡಿದ್ದಾರೆ.

ಬಿಡುಗಡೆಯಾಗದ ಮತದಾರರ ಪಟ್ಟಿ

ಮೇ 13ರಂದು ಚುನಾವಣಾಧಿಕಾರಿಗಳಿಗೆ ಮತದಾರರ ಪಟ್ಟಿ ನೀಡಬೇಕಾಗಿದ್ದು, ಆದರೆ ಇನ್ನೂ ಮತದಾರರ ಪಟ್ಟಿ ಬಿಡುಗಡೆಯಾಗಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ. ಮೇ 11 ಎರಡನೇ ಶನಿವಾರ, ಮೇ 12ರಂದು ರವಿವಾರ ರಜೆಯಾದ್ದರಿಂದ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಮತದಾರರ ಪಟ್ಟಿ ಇನ್ನೂ ಬೆಂಗಳೂರು ಚುನಾವಣಾಧಿಕಾರಿ ಕಚೇರಿಯಲ್ಲೇ ಉಳಿದಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಮೇ 13ರಿಂದ 31ರ ಮತ ಎಣಿಕೆ ಪ್ರಕ್ರಿಯೆ ಮುಗಿಯುವ ವರೆಗೆ ಗ್ರಾ.ಪಂ. ವ್ಯಾಪ್ತಿಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಹಿಂದೆ ವಾರ್ಡ್‌ಗೆ ಮಾತ್ರ ಸೀಮಿತವಾಗಿದ್ದ ನೀತಿಸಂಹಿತೆ ಈ ಬಾರಿ ಪೂರ್ತಿ ಗ್ರಾ.ಪಂ.ಗೆ ಅನ್ವಯವಾಗಿರುವುದು ವಿಶೇಷ.
ಚುನಾವಣಾಧಿಕಾರಿಗಳು

ಉಜಿರೆ ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣ ಸಂಯೋಜಕ ಸುಭಾಶ್‌ ಜಾಧವ್‌ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ಉಜಿರೆ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಯಲ್ಲವ್ವ ಹಂಡಿ, ಕೊಯ್ಯೂರು ಗ್ರಾಮ ಪಂಚಾಯತ್‌ ಚುನಾವಣಾಧಿಕಾರಿಯಾಗಿ ಸುಧಾಕರ (ಪಿಡಿಒ ಪಡಂಗಡಿ) ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ನಾರಾವಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ನಿರ್ಮಲ್ ಕುಮಾರ್‌ ನೇಮಕಗೊಂಡಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.