ರಂಗಸಿರಿ ಭಾಗವತಿಕೆ ರಂಗಪ್ರವೇಶ


Team Udayavani, May 12, 2019, 6:00 AM IST

11KSDE4

ಬದಿಯಡ್ಕ: ಬದಿಯಡ್ಕ ಕೇಂದ್ರೀಕರಿಸಿ ನಾಡಿನಾದ್ಯಂತ ಸದಾ ತನ್ನ ಉತ್ತಮ ಚಟುವಟಿ ಕೆಗಳಿಂದಾಗಿ ರಂಗಸಿರಿ ಸಾಂಸ್ಕೃತಿಕ ವೇದಿಕೆಯು ಗುರುತಿಸಲ್ಪಟ್ಟಿದೆ. ಈಗಾಗಲೇ ಯಕ್ಷಗಾನ ಕ್ಷೇತ್ರಕ್ಕೆ ಹಲವು ರತ್ನಗಳನ್ನು ಕೊಡುಗೆ ನೀಡಿದ ಸಂಸ್ಥೆಯು ಇದೀಗ ತನ್ನ ಮೊದಲ ಹಿಮ್ಮೇಳ ತರಗತಿಯ ವಿದ್ಯಾರ್ಥಿಗಳನ್ನು ರಂಗಪ್ರವೇಶ ಮಾಡಿಸುತ್ತಿರುವುದು ಸಂತಸದ ವಿಚಾರ ಎಂಬುದಾಗಿ ನಿವೃತ್ತ ಪ್ರಾಂಶುಪಾಲ, ಅರ್ಥದಾರಿ, ರಂಗಸಿರಿಯ ಗೌರವ ಸಲಹೆಗಾರ ಡಾ|ಬೇಸಿ ಗೋಪಾಲಕೃಷ್ಣ ಭಟ್‌ ನುಡಿದರು.

ಅವರು ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರದಲ್ಲಿ ರಂಗಸಿರಿ ಸಂಸ್ಥೆಯ ವಿದ್ಯಾರ್ಥಿ ಶ್ರೀಶ ಕುಮಾರ ಪಂಜಿತ್ತಡ್ಕ ಅವರ ಭಾಗವತಿಕೆ ರಂಗಪ್ರವೇಶ ಹಾಗೂ ತಾಳಮದ್ದಳೆ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತಾಡಿದರು.

ಸೂರ್ಯನಾರಾಯಣ ಪದಕಣ್ಣಾಯ ಅವರ ಶಿಷ್ಯನಾಗಿ ಈಗಾಗಲೇ ಹವ್ಯಾಸಿ ಯಕ್ಷರಂಗದಲ್ಲಿ ಕಟ್ಟು, ರಾಜ, ಪಕಡಿ, ಸ್ತ್ರೀ, ಬಣ್ಣದ ವೇಷ ಹೀಗೆ ಎಲ್ಲಾ ವೇಷಗಳಲ್ಲೂ ಒಟ್ಟು ಸುಮಾರು 500ರಷ್ಟು ವೇದಿಕೆಗಳನ್ನೇರಿ ತನ್ನದೇ ಗುರುತನ್ನು ಮೂಡಿ ಸುತ್ತಿರುವ ಅಧ್ಯಾಪಕ ಶ್ರೀಶ ಕುಮಾರ ಪಂಜಿತ್ತಡ್ಕ ಅವರು ಭಾಗವತಿಕೆ ಕ್ಷೇತ್ರಕ್ಕೂ ಪ್ರವೇಶಿಸಿದರು.
ಪ್ರಸ್ತುತ ರಂಗಸಿರಿ ಸಾಂಸ್ಕೃತಿಕ ವೇದಿಕೆಯ ಕಾರ್ಯದರ್ಶಿಯಾಗಿರುವ ಅವರು ಸಂಸ್ಥೆಯನ್ನು ಸ್ಥಾಪಿಸಲು ಯಕ್ಷಗಾನ ಗುರುಗಳ ಹಾಗೂ ಹಿರಿಯರನೇಕರ ಪ್ರೇರಣೆ, ಸಹಕಾರ ಕಾರಣವೆಂದು ಸ್ಮರಿಸಿಕೊಳ್ಳುತ್ತಾರೆ.

ಇಂದು ಯಕ್ಷಗಾನ ನಾಟ್ಯ, ಹಿಮ್ಮೇಳ, ಶಾಸ್ತ್ರೀಯ ಹಾಗೂ ಸುಗಮ ಸಂಗೀತ ತರಗತಿಗಳನ್ನು ನಡೆಸುತ್ತಿರುವ ರಂಗಸಿರಿಯು ವಿಶಾಲವಾಗಿ ಬೆಳೆದು ದಶಮಾನೋತ್ಸವದ ಹೊಸ್ತಿಲಲ್ಲಿ, ತನ್ನ ಹಿಮ್ಮೇಳ ತರಗತಿಯ ಮೊದಲ ವಿದ್ಯಾರ್ಥಿಗಳ ಭಾಗವತಿಕೆಯ ರಂಗಪ್ರವೇಶವನ್ನು ಕಾಣುತ್ತಿರುವುದು ಸಂಸ್ಥೆಯ ಸಾಧೆಗಳಲ್ಲೊಂದು. ಶ್ರೀ ಸೂರ್ಯನಾರಾಯಣ ಪದಕಣ್ಣಾಯರು ಸಂಸ್ಥೆಯ ಯಕ್ಷಗಾನ ಗುರುಗಳಾಗಿ ನಾಟ್ಯ, ಹಿಮ್ಮೇಳ ತರಗತಿಗಳನ್ನು ಸಮರ್ಥವಾಗಿ ನಡೆಸುತ್ತಿದ್ದಾರೆ.

ಭಾಗವತಿಕೆ ರಂಗಪ್ರವೇಶದಂಗವಾಗಿ ಭಕ್ತ ಸುಧನ್ವ ತಾಳಮದ್ದಳೆ ಸೇವೆಯನ್ನು ಆಯೋಜಿಸಲಾಗಿತ್ತು. ಭಾಗವತಿಕೆಯಲ್ಲಿ ವಿದ್ಯಾರ್ಥಿಗಳಾದ ಶ್ರೀಶ ಕುಮಾರ ಪಂಜಿತ್ತಡ್ಕ, ವಿದ್ಯಾ ಕುಂಟಿಕಾನಮಠ ಹಾಗೂ ಶಶಿಧರ ಮುಳ್ಳೇರಿಯ ಸಹಕರಿಸಿದರು.

ಚೆಂಡೆಯಲ್ಲಿ ಶಿವಶಂಕರ ಭಟ್‌ ಅಂಬೆಮೂಲೆ ಹಾಗೂ ಮದ್ದಳೆಯಲ್ಲಿ ಸವ್ಯಸಾಚಿ ಯಕ್ಷಗುರು ಶ್ರೀ ಸೂರ್ಯನಾರಾಯಣ ಪದಕಣ್ಣಾಯ ತಮ್ಮ ಕೈಚಳಕ ಮೆರೆದರು.ಶ್ರುತಿಯಲ್ಲಿ ಸುಧೀರ್‌ ಕುಮಾರ್‌ ರೈ ಮುಳ್ಳೇರಿಯ ಸಹಕಾರ ನೀಡಿದರು. ಅರ್ಥಗಾರಿಕೆಯಲ್ಲಿ ಕೃಷ್ಣನಾಗಿ ಡಾ.ಬೇಸಿ ಗೋಪಾಲಕೃಷ್ಣ ಭಟ್‌, ಅರ್ಜುನನಾಗಿ ಶ್ರೀಶ ಕುಮಾರ ಪಂಜಿತ್ತಡ್ಕ, ಸುಧನ್ವನಾಗಿ ವಿದ್ಯಾ ಕುಂಟಿಕಾನಮಠ, ಪ್ರಭಾವತಿಯಾಗಿ ಸುಪ್ರೀತಾ ಸುಧೀರ್‌ ಮುಳ್ಳೇರಿಯ ರಂಜಿಸಿದರು.

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.