ರಜನಿಕಾಂತ್ ಪತ್ನಿಗೆ ನೋಟಿಸ್
Team Udayavani, May 12, 2019, 3:05 AM IST
ಬೆಂಗಳೂರು: ಜಾಹೀರಾತು ಕಂಪನಿಗೆ ವಂಚನೆ ಮಾಡಿದ ಆರೋಪದಡಿ ನಟ ರಜನಿಕಾಂತ್ ಪತ್ನಿ, ಲತಾ ರಜನಿಕಾಂತ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲಸೂರು ಗೇಟ್ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಈ ಸಮನ್ಸ್ಗೆ ಪ್ರತಿಕ್ರಿಯೆ ನೀಡಿರುವ ಲತಾ ರಜನಿಕಾಂತ್ ಅವರು, “ನಾನು ಪ್ರವಾಸದಲ್ಲಿರುವುದರಿಂದ ತಾವು ಸೂಚಿಸಿದ ದಿನಾಂಕದಂದು ವಿಚಾರಣೆಗೆ ಬರಲು ಸಾಧ್ಯವಿಲ್ಲ. ಹೀಗಾಗಿ, ಮೇ 20ರ ಬಳಿಕ ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಉತ್ತರ ನೀಡಿದ್ದಾರೆ.
ರಜನಿಕಾಂತ್ ಅಭಿನಯದ ಕೊಚಾಡಿಯನ್ ಚಿತ್ರದ ಜಾಹೀರಾತು ಪ್ರಕಟಿಸಲು ಚೆನ್ನೈ ಮೂಲದ ಅಭಿಚಂದ್ ನಾಹರ್ ಅವರ ಆ್ಯಡ್ ಬ್ಯೂರೋ ಅಡ್ವಟೈಸಿಂಗ್ ಪ್ರೈವೇಟ್ ಲಿ.ಕಂಪನಿಗೆ ವಹಿಸಲಾಗಿದ್ದು, ಒಪ್ಪಂದ ಕೂಡ ಮಾಡಿಕೊಡಲಾಗಿತ್ತು. ಆದರೆ, ಅಂತಿಮವಾಗಿ ಕಂಪನಿಗೆ ನೀಡುವ ಸಂಭಾವನೆಯಲ್ಲಿ ಲತಾ ರಜನಿಕಾಂತ್ ಒಪ್ಪಂದಕ್ಕಿಂತ ಕಡಿಮೆ ಹಣ ಸಂದಾಯ ಮಾಡಿದ್ದರು ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಕಂಪನಿ ಮಾಲೀಕರು 2015ರಲ್ಲಿ ಕೋರ್ಟ್ನಲ್ಲಿ ಮೊಕದ್ದಮೆ ದಾಖಲಿಸಿದ್ದರು. ಕೋರ್ಟ್ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಹಲಸೂರು ಗೇಟ್ ಪೊಲೀಸರು ಮೇ 6ರಂದು ವಿಚಾರಣೆಗೆ ಹಾಜರಾಗುವಂತೆ ಮೇ 2ರಂದೇ ಸಮನ್ಸ್ ಜಾರಿ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ
OTT: ಮಾಲಿವುಡ್ನಲ್ಲಿ ಸದ್ದು ಮಾಡಿದ ಫಹಾದ್ ಫಾಸಿಲ್ ʼಆವೇಶಮ್ʼ ಈ ದಿನ ಓಟಿಟಿಗೆ ಎಂಟ್ರಿ?
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ
The Safest Online Gaming Sites: Shielding Your Gaming Experience