ಗದ್ದೆಗಳಲ್ಲಿ ಕೃಷಿ ಕ್ರಾಂತಿ

ಸಾವಯವ ಗೊಬ್ಬರದ ಪ್ರೀತಿ

Team Udayavani, May 12, 2019, 6:00 AM IST

29

ಸಂಪೂರ್ಣ ಹಟ್ಟಿ ಗೊಬ್ಬರವನ್ನು ಬಳಸಿ ಸಾವಯವ ಕೃಷಿ ಕಾರ್ಯ ನಡೆಸಿ ಉತ್ತಮ ಫ‌ಸಲನ್ನು ಪಡೆಯುತ್ತಿದ್ದಾರೆ ಇಲ್ಲೊಬ್ಬರು ಯಶಸ್ವಿ ಕೃಷಿಕರು. ಉಡುಪಿ ಜಿಲ್ಲೆಯ ಬೆಳ್ಳೆ ಗ್ರಾಮದ ದಿಂಡಿಬೆಟ್ಟು ಗಂಗಾಧರ ಆಚಾರ್ಯ ಅವರೇ ಸಾವಯವ ಗೊಬ್ಬರ ಬಳಸಿ ಭತ್ತದ ಬೆಳೆ ಬೆಳೆಸಿ ಯಶಸ್ಸು ಕಂಡವರು.

ಸುಮಾರು 2 ಎಕ್ರೆಯಲ್ಲಿ ಭತ್ತದ ಕೃಷಿ ನಡೆಸುವ ಮೂಲಕ ಅವರು ಕೃಷಿ ಪ್ರೀತಿಯನ್ನು ಮೆರೆದಿದ್ದಾರೆ. ಒಟ್ಟು ಸುಮಾರು 10 ಎಕ್ರೆ ಭೂಮಿಯನ್ನು ಹೊಂದಿರುವ ಅವರು 6 ಎಕ್ರೆಯಲ್ಲಿ ಅಡಿಕೆ, ತೆಂಗು ತೋಟವನ್ನು ಮಾಡಿದ್ದು, 2 ಎಕ್ರೆ ಸ್ಥಳವನ್ನು ಹಟ್ಟಿ ಗೊಬ್ಬರದ ಸೊಪ್ಪಿಗಾಗಿ ಉಳಿಸಿಕೊಂಡು ಬಂದಿದ್ದಾರೆ. ಉಳಿದಂತೆ 2 ಎಕ್ರೆ ಪ್ರದೇಶದಲ್ಲಿ ಒಂದು ಬೆಳೆಯಾಗಿ ಭತ್ತದ ಕೃಷಿಯನ್ನು ಪತ್ನಿ ಸಂಧ್ಯಾ, ಮಕ್ಕಳಾದ ಶ್ರವಣ್‌, ಶ್ರೇಯಸ್‌ ಜತೆಗೂಡಿ ಮುನ್ನಡೆಸುತ್ತಾ ಬಂದಿದ್ದಾರೆ. ರಾಸಾಯನಿಕ ಗೊಬ್ಬರವನ್ನು ಇವರು ಬಳಸುವುದಿಲ್ಲ.

ಗದ್ದೆಯನ್ನು ನಾಟಿಗಿಂತ 15 ದಿನಗಳ ಮೊದಲು ಹಟ್ಟಿ ಗೊಬ್ಬರವನ್ನು ಹಾಕಿ ಉಳುಮೆ ನಡೆಸುವ ಅವರು ನಾಟಿಗಿಂತ 5 ದಿನದ ಮುನ್ನ ಸುಣ್ಣವನ್ನು ಬಳಸಿ ಉಳುಮೆ ನಡೆಸುತ್ತಾರೆ. ನಾಟಿಯ ದಿನ ಉಳುಮೆ ನಡೆಸಿ ಮತ್ತೆ ನಾಟಿ ಕಾರ್ಯ ಮುಂದುವರೆಸುತ್ತಾರೆ.

ಕಾಡು ಪ್ರಾಣಿ ಹಾವಳಿ
ಕೃಷಿ, ತೋಟಗಾರಿಕಾ ಬೆಳೆಯಲ್ಲಿ ನಿಸ್ಸೀಮರಾಗಿರುವ ಗಂಗಾಧರ ಆಚಾರ್ಯರು ತನ್ನೆಲ್ಲ ಕೃಷಿ ಚಟುವಟಿಕೆಗಳಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದೆ. ಮಂಗಗಳ ಮತ್ತು ನವಿಲಿನ ಉಪಟಳ ವಿಪರೀತವಾಗಿದೆ ಎಂದವರು ಹೇಳುತ್ತಾರೆ.

ಕರಾವಳಿಯಲ್ಲಿ ಬಹುತೇಕ ಕೃಷಿಕರು ಕೃಷಿಯಿಂದ ವಿಮುಖರಾಗುತ್ತಿರುವ ಕಾಲಘಟ್ಟದಲ್ಲಿ ಬಲು ಅಪರೂಪವೆನ್ನುವಂತೆ ಕೃಷಿಯನ್ನು ಪ್ರೀತಿಸುವ ಮೂಲಕ ಗಂಗಾಧರ ಆಚಾರ್ಯ ಅವರು ತನ್ನ ಆಹಾರಕ್ಕಾಗಿ ಸ್ವಾವಲಂಬಿ ಕಾರ್ಯದಲ್ಲಿ ಮುನ್ನಡೆಯುತ್ತಿದ್ದಾರೆ. ಕೃಷಿ ಭೂಮಿಯನ್ನು ಬರಡಾಗಿಸಿದ ಕೃಷಿಕರು ಮತ್ತೆ ಕೃಷಿ ಪ್ರೇಮವನ್ನು ತೋರ್ಪಡಿಸಿದರೆ ಕೃಷಿ ಗದ್ದೆಗಳು ಮತ್ತೆ ಹಸುರಾಗಿ ಕಂಗೊಳಿಸ‌ಬಹುದು.

ಹಿರಿಯರ ಶ್ರಮದ ಫ‌ಲ
ಕೃಷಿ ಚಟುವಟಿಕೆಗಳಿಗೆ 18 ಜನ ಸಾಂಪ್ರದಾಯಿಕ ಕೃಷಿ ಕೂಲಿ ಕಾರ್ಮಿಕರನ್ನು ಬಳಸಿ ಬೇಸಾಯ ನಡೆಸುವ ಅವರು ತನ್ನ ತಂದೆ ಶ್ಯಾಮರಾಯ ಆಚಾರ್ಯರ ಅಂದಿನ ಕಾಲದ ಕೃಷಿಯಲ್ಲಿನ ಶ್ರಮವನ್ನು ನೆನಪಿಸುತ್ತಿದ್ದು, ಹಿರಿಯರಿಂದ ನಡೆದು ಬಂದ ಕೃಷಿಯನ್ನು ಮುಂದುವರಿಸಿಕೊಂಡು ಹೋಗಬೇಕೆನ್ನುವ ಸದುದ್ದೇಶದಿಂದ 3 ಬೆಳೆಗಳ ಬದಲಿಗೆ ಕನಿಷ್ಠ 1 ಬೆಳೆಯಾದರೂ ಬೆಳೆಯುತ್ತಿದ್ದಾರೆ.

ಕುಲಕಸುಬನ್ನೂ ಮರೆತಿಲ್ಲ
ಧಾರ್ಮಿಕ ಕಾರ್ಯದಲ್ಲೂ ಮುಂಚೂಣಿ ಯಲ್ಲಿರುವ ಅವರು ಅದರೊಂದಿಗೆ ಕೃಷಿ ಕಾಯಕವನ್ನು ಮರೆತಿಲ್ಲ. ಕುಲಕಸುಬಾದ ಚಿನ್ನದ ಕೆಲಸದಲ್ಲೂ ತೊಡಗಿ ಕೊಂಡಿದ್ದಾರೆ.

-   ವಿಜಯ ಉಡುಪಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.