ಇಂಡಿಯಲ್ಲಿ ಜನರ ದಾಹ ತಣಿಸುತ್ತಿರುವ ಸಂಜು

ಸ್ವಂತ ಹಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ

Team Udayavani, May 12, 2019, 10:53 AM IST

11-March-7

ಇಂಡಿ: ಪಟ್ಟಣದ ಬಸ್‌ ನಿಲ್ದಾಣದ ಮುಂಭಾಗದಲ್ಲಿ ಮಡಿಕೆಗಳನ್ನಿಟ್ಟು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ ಯುವಕ ಸಂಜು ಪವಾರ

ಇಂಡಿ: ಭೀಕರ ಬರಗಾಲಕ್ಕೆ ತುತ್ತಾದ ತಾಲೂಕು. ಕೆಂಡದಂತಹ ಬಿಸಿಲು ಸುಡು ಗಾಳಿಯಿಂದ ಬಸವಳಿದು ನೀರಿಗಾಗಿ ಹುಡುಕಾಡುವ ಜನಕ್ಕೆ ಹೋಟೆಲ್ಗಳಿಗೆ ಹೋದರೆ ಕನಿಷ್ಠ ಐದು ರೂ. ಖರ್ಚು ಮಾಡಿ ಚಹಾ ಕುಡಿದರೆ ಒಂದು ಲೋಟ ನೀರು ನೀಡುವ ಸಮಯದಲ್ಲಿ ಉಚಿತವಾಗಿ ತಣ್ಣನೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಯುವಕನೊಬ್ಬ ಇತರರಿಗೆ ಮಾದರಿಯಾಗಿದ್ದಾನೆ.

ಬಸ್‌ ನಿಲ್ದಾಣದ ಮುಂಭಾಗ, ಸಿಂದಗಿ ರಸ್ತೆಯ ಮಿನಿ ವಿಧಾನಸೌಧ ಮುಂಭಾಗ, ಪೊಲೀಸ್‌ ಠಾಣೆ ಹತ್ತಿರ, ಅಂಬೇಡ್ಕರ್‌ ಹಾಗೂ ಮಹಾವೀರ ವೃತ್ತದಲ್ಲಿ ಮಡಿಕೆಗಳಲ್ಲಿ ತಣ್ಣನೆ ನೀರು ತುಂಬಿಸಿ ಬಿಸಿಲಿನಿಂದ ಬಾಯಾರಿದ ಜನರ ದಾಹ ತಣಿಸುತ್ತಿರುವ ಪಟ್ಟಣದ ಬೀರಪ್ಪ ನಗರದ ನಿವಾಸಿ ಸಂಜು ಪವಾರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಮಾ. 15ರಿಂದಲೇ ಪಟ್ಟಣದ ವಿವಿಧೆಡೆ ತನ್ನ ಸ್ವಂತ ಖರ್ಚಿನಿಂದ 30 ಮಡಿಕೆ ಖರೀದಿಸಿ ಪ್ರತಿ ದಿನ ಕನಿಷ್ಠ ಎರಡು ಬಾರಿಯಾದರೂ ಅವುಗಳಿಗೆ ನೀರು ತುಂಬಿಸುತ್ತಾನೆ. ಗ್ರಾಮೀಣ ಭಾಗದಿಂದ ಬಂದ ಜನರಿಗೆ ಹಾಗೂ ಬಿಸಿಲಿನಲ್ಲಿ ತಿರುಗಾಡಿ ಬಾಯಾರಿದ ಸ್ಥಳೀಯರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು ಕಳೆದ ನಾಲ್ಕು ವರ್ಷಗಳಿಂದ ನೀರಿನ ಸೇವೆ ಮಾಡುತ್ತಿದ್ದಾನೆ. ಪಟ್ಟಣಕ್ಕೆ ಬರುವ ಪ್ರವಾಸಿಗರು, ವಿವಿಧ ಗ್ರಾಮಗಳ ಜನರು ಬಾಯ್ತುಂಬ ಹರಸಿ ಹಾರೈಸುತ್ತ ಹೋಗುತ್ತಿದ್ದಾರೆ.

ಬರದ ನಾಡಿನಲ್ಲಿ ನೀರು ನೀಡುತ್ತಿರುವ ಸಂಜು ಪವಾರ ಅವರ ಕಾರ್ಯವನ್ನು ಜನ ಸಾಮಾನ್ಯರು ಶ್ಲಾಘಿಸುತ್ತಿದ್ದಾರೆ. ಸರ್ಕಾರ ಮಾಡದಿರುವ ಕಾರ್ಯವನ್ನು ಸಂಜು ಪವಾರ ಮಾಡುತ್ತಿದ್ದಾರೆ. ಸ್ವಂತ ಟ್ರ್ಯಾಕ್ಟರ್‌ ಹೊಂದಿರುವ ಅವರು ಬೇರೆಯವರ ಹತ್ತಿರ ಹಣ ಕೊಟ್ಟು ನೀರು ತುಂಬಿಸಿಕೊಂಡು ಬಂದು ಮಡಿಕೆ ತುಂಬಿಸುತ್ತಿದ್ದಾರೆ. ಮಡಿಕೆಯಲ್ಲಿ ನೀರು ಖಾಲಿಯಾದೊಡನೆ ಅವರು ತಡಮಾಡದೆ ಮತ್ತೆ ನೀರು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ.

ಈ ಮಡಿಕೆ ಇಟ್ಟ ದಿನದಿಂದ ಬಾಟಲ್ ನೀರಿಗೆ ಮೊರೆ ಹೋಗಿದ್ದ ಇಂಡಿ ಪಟ್ಟಣದ ಜನ ಮಡಿಕೆ ನೀರಿಗೆ ಮರಳಿರುವುದು ವಿಶೇಷವಾಗಿದೆ. ಸಂಜು ಪವಾರ ಮಾಡಿದ ಈ ಕಾರ್ಯವನ್ನು ಪ್ರತಿ ಗ್ರಾಮ ಹಾಗೂ ಪಟ್ಟಣಗಳಲ್ಲಿ ಗ್ರಾಪಂ, ಪಪಂ, ಪುರಸಭೆಯವರು ಮಾಡಿದರೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದೆಂದು ಜನ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಪ್ರತಿ ಬಾರಿಯೂ ಬೇಸಿಗೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗುತ್ತಿದೆ. ಹಳ್ಳಿಗಳಿಂದ ಬಂದ ಜನ, ಕಾಲೇಜು ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವುದನ್ನು ಕಂಡು ಈ ಕಾರ್ಯ ಮಾಡಿದ್ದೇನೆ. ನನ್ನದೇ ಸ್ವಂತ ಟ್ಯಾಂಕರ್‌ ಇರುವುದರಿಂದ ನೀರು ಕೊಟ್ಟು ಹಣ ತುಂಬಿಕೊಂಡು ಮಡಿಕೆ ತುಂಬಿಸಿ ಕೈಲಾದಷ್ಟು ಸೇವೆ ಮಾಡುತ್ತಿದ್ದೇನೆ.
ಸಂಜು ಪವಾರ, ಬೀರಪ್ಪ ನಗರದ ನಿವಾಸಿ

ಕಳೆದ ನಾಲ್ಕು ವರ್ಷಗಳಿಂದ ಪಟ್ಟಣದ ಯುವಕ ಸಂಜು ಪವಾರ ಜನರ ನೀರಿನ ದಾಹ ತೀರಿಸುವ ಕೆಲಸ ಮಾಡುತ್ತಿದ್ದಾನೆ. ನೀರು ಪೂರೈಸುತ್ತಿರುವವನಿಗೆ ಒಳ್ಳೆಯದಾಗುತ್ತದೆ. ಬೇಸಿಗೆಯಲ್ಲಿ ಇಂತಹ ಕಾರ್ಯ ಮಾಡಿದ ಕಾರ್ಯ ಶ್ಲಾಘನೀಯ. ತಾಲೂಕಿಗೆ ಸಂಜು ಪವಾರ ಒಬ್ಬ ಮಾದರಿ ಯುವಕನಾಗಿದ್ದಾನೆ.
ಅಶೋಕಗೌಡ ಬಿರಾದಾರ,
ಸ್ಥಳೀಯ ನಿವಾಸಿ

ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.