ಲಕ್ಷ ಮತಗಳ ಅಂತರದಲ್ಲಿ ಸುಮಲತಾ ಗೆಲುವು
ಮಂಡ್ಯ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಸುಮಲತಾಗೆ ಹೆಚ್ಚು ಮತ
Team Udayavani, May 12, 2019, 12:17 PM IST
ಮದ್ದೂರು ಪಟ್ಟಣದಲ್ಲಿ ಬಿಜೆಪಿ ತಾಲೂಕುಮಟ್ಟದ ಆತ್ಮಾವಲೋಕನ ಸಭೆಯಲ್ಲಿ ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ಜಯಕೃಷ್ಣ ಮಾತನಾಡಿದರು.
ಮದ್ದೂರು: ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 1 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಯಕೃಷ್ಣ ತಿಳಿಸಿದರು.
ಪಟ್ಟಣದ ಶಂಕರಪಾರ್ಟಿ ಹಾಲ್ನಲ್ಲಿ ತಾಲೂಕು ಬಿಜೆಪಿ ಸಂಘಟನೆ ಆಯೋಜಿಸಿದ್ದ ಲೋಕಸಭಾ ಚುನಾವಣೆಯ ತಾಲೂಕು ಮಟ್ಟದ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 8 ಕ್ಷೇತ್ರಗಳಲ್ಲಿ ಸುಮಲತಾ ಅಂಬರೀಶ್ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಮತದಾರರು ಪಕ್ಷೇತರ ಅಭ್ಯರ್ಥಿಯನ್ನು ಬೆಂಬಲಿಸಿದ್ದು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ಭವಿಷ್ಯ ನುಡಿದರು.
ಸುಮಲತಾಗೆ ಬೆಂಬಲ: ಜಿಲ್ಲೆಯ ಸ್ವಾಭಿಮಾನ, ಅನುಕಂಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಡಳಿತ ಮೆಚ್ಚಿ ಜಿಲ್ಲೆಯ ಯುವ ಮತದಾರರು, ಮಹಿಳೆಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸುಮಲತಾ ಅಂಬರೀಶ್ ಅವರನ್ನು ಬೆಂಬಲಿ ಮತ ಚಲಾಯಿಸಿದ್ದಾರೆ. ಮೇ 23ರಂದು ಹೊರಬೀಳುವ ಫಲಿತಾಂಶದ ವೇಳೆ ಸ್ವಾಭಿಮಾನಕ್ಕೆ ಜಯವಾಗಲಿದೆ. ಜೆಡಿಎಸ್ ಮುಖಂಡರು ಮೈತ್ರಿಕೂಟ ಅಭ್ಯರ್ಥಿ ನಿಖೀಲ್ 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸುವ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವೆಂದರು.
ಪಕ್ಷ ಬಲಪಡಿಸಿ: ಬಿಜೆಪಿ ಪಕ್ಷದ ತಾಲೂಕು ಘಟಕದ ಅಧ್ಯಕ್ಷ ಪಣ್ಣೇದೊಡ್ಡಿ ರಘು ಮಾತನಾಡಿ, ವಿಧಾನಸಭೆ, ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಸ್ಥಳೀಯ ಸಂಸ್ಥೆ, ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ಈಗಾಗಲೇ ಪಕ್ಷದ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಸಮಿತಿಗಳನ್ನು ರಚಿಸಿ ಪಕ್ಷ ಬಲವರ್ಧನೆಗೆ ಮುಂದಾಗಬೇಕೆಂದರು.
ಸಭೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಉಪಾಧ್ಯಕ್ಷ ದೇವರಾಜು, ಪದಾಧಿಕಾರಿಗಳಾದ ಕೆ.ಎಂ.ರಮೇಶ್, ತ್ರಿವೇಣಿ, ಎಂ.ಸಿ.ಸಿದ್ದು, ಯೋಗೇಶ್, ಜಗನ್ನಾಥ್, ಮ.ನ. ಪ್ರಸನ್ನಕುಮಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
NDA ಕೂಟದಿಂದ ಜೆಡಿಎಸ್ ಹೊರ ಹಾಕಿ: ಶಿವರಾಮೇ ಗೌಡ
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್