ಗ್ರಾಮೀಣ ಕ್ರೀಡಾಪಟುಗಳಿಗೆ ಬೇಕಿದೆ ನೆರವು: ವಾಲೀಕಾರ

ಉತ್ತಮ ಕ್ರೀಡಾಪಟುಗಳನ್ನು ದತ್ತು ಪಡೆಯಲು ಸಲಹೆ

Team Udayavani, May 12, 2019, 1:45 PM IST

11-March-21

ವಿಜಯಪುರ: ಹಿಟ್ಟಿನಹಳ್ಳಿ ಗ್ರಾಮದ ಜಾತ್ರಾ ಮಹೋತ್ಸವದಲ್ಲಿ ಗ್ರಾಮೀಣ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

ವಿಜಯಪುರ: ಗ್ರಾಮೀಣ ಪ್ರದೇಶದ ಆರ್ಥಿಕ ದುರ್ಬಲರಾಗಿರುವ ಕ್ರೀಡಾಪಟುಗಳು ದೈಹಿಕ ಸದೃಢತೆ ಕಾಯ್ದುಕೊಳ್ಳಲು ಹಾಗೂ ಸೂಕ್ತ ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಇಂಥ ಕ್ರೀಡಾಪಟುಗಳ ನೆರವಿಗೆ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಹಾಸಿಂಪೀರ ವಾಲೀಕಾರ ಹೇಳಿದರು.

ಹಿಟ್ಟಿನಹಳ್ಳಿ ಗ್ರಾಮದ ಮಾರುತೇಶ್ವರ ಮತ್ತು ದ್ಯಾಮಗಂಗಾ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಗ್ರಾಮೀಣ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮೀಣ ವಲಯದ ಕ್ರೀಡಾಪಟುಗಳು ಹಲವು ಸಂದರ್ಭಗಳಲ್ಲಿ ದೈಹಿಕವಾಗಿ ಸದೃಢರಾಗಿದ್ದರೂ ಕಾಲ ಕಾಲಕ್ಕೆ ತರಬೇತಿ ದೊರಯುವುದಿಲ್ಲ. ಗ್ರಾಮೀಣ ಕ್ರೀಡಾಪಟುಗಳು ಆರ್ಥಿಕವಾಗಿ ದುರ್ಬಲವಾಗಿರುವುದರಿಂದ ತರಬೇತಿ ಪಡೆಯಲು ಸಾಧ್ಯವಾಗುವುದಿಲ್ಲ ಎಂದರು.

ಭಾರತದಲ್ಲಿ ಎಲ್ಲ ತರಹದ ಕ್ರೀಡಾಪಟುಗಳು ದೊರಕುತ್ತಾರೆ. ಆದರೆ ಅವರಿಗೆ ವಿಶೇಷ ತರಬೇತಿ ಕೊರತೆ ಉಂಟಾಗುತ್ತಿದೆ. ಇದರಿಂದ ಕ್ರೀಡಾ ಜೀವನದಲ್ಲಿ ಗುರಿ ಸಾಧಿಸುವಲ್ಲಿ ವಿಫಲರಾಗಿದ್ದಾರೆ. ಸರ್ಕಾರ ಇಂಥ ಕ್ರೀಡಾಪಟುಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಸೂಕ್ತ ತರಬೇತಿಗೆ ವ್ಯವಸ್ಥೆ ಮಾಡಬೇಕು. ಇದರಿಂದ ಭಾರತೀಯ ಕ್ರೀಡಾ ಕ್ಷೇತ್ರ ಇನ್ನಷ್ಟು ಶ್ರೀಮಂತಗೊಳ್ಳಲು ಸಹಕಾರಿ ಆಗಲಿದೆ. ಕ್ರೀಡಾ ಇಲಾಖೆ ಉತ್ತಮ ಕ್ರೀಡಾಪಟುಗಳನ್ನು ದತ್ತು ಪಡೆದು ಅವರ ಕ್ರೀಡಾ ವೆಚ್ಚ ಭರಿಸಲು ಮುಂದಾಗಬೇಕು ಎಂದರು.

ವಿಶ್ರಾಂತ ದೈಹಿಕ ಶಿಕ್ಷಕ ಆರ್‌.ಬಿ. ಬಿರಾದಾರ ಮಾತನಾಡಿ, ಕ್ರೀಡಾಪಟುಗಳಲ್ಲಿರುವ ಆಸಕ್ತಿ ಗುರುತಿಸಿ ಸಮಾಜ ಪೋಷಿಸಬೇಕು. ಪ್ರಸಕ್ತ ಸಂದರ್ಭದಲ್ಲಿ ಯಶಸ್ವಿ ಕ್ರೀಡಾಪಟುಗಳ ಕೊರತೆ ಎದುರಾಗಿದೆ. ಪ್ರಸಕ್ತ ಸಂದರ್ಭದಲ್ಲಿ ಮಕ್ಕಳ ಪಾಲಕರು ಕ್ರೀಡೆಗೆ ಹೆಚ್ಚು ಮಹತ್ವ ನೀಡದೆ ಅಂಕಗಳನ್ನು ಗಳಿಸುವುದರ ಕಡೆಗೆ ಗಮನ ಹರಿಸುತ್ತಿದ್ದಾರೆ. ಶಾಲಾ ಕಾಲೇಜುಗಳು ಕೂಡ ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ಅಂಕ ಗಳಿಕೆ ಹುಚ್ಚಿಗೆ ಬಿದ್ದಿರುವುದರಿಂದ ಕ್ರೀಡೆಗೆ ಅನಾಸಕ್ತಿ ತೊರಿಸುತ್ತಿವೆ. ಹೀಗಾಗಿ ಕ್ರೀಡಾಪಟುಗಳ ಕೊರತೆ ಎದುರಿಸುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಿಶ್ರಾಂತ ಬ್ಯಾಂಕ್‌ ಅಧಿಕಾರಿ ಶ್ರೀಕಾಂತ ಗೊಂಗಡಿ, ರಾಮಗೊಂಡ ಬಿರಾದಾರ, ಶ್ರೀಕಾಂತ ಚೌಧರಿ, ರವಿ ಬಿರಾದಾರ, ರಾಕೇಶ ನಾಟೀಕಾರ, ಮಾರುತಿ ಸುಬೇದಾರ, ಆದಿಲ ಮುಲ್ಲಾ, ಈರಣ್ಣ ಬಿರಾದಾರ, ನಜರಖಾನ್‌ ವಾಲೀಕಾರ ಇದ್ದರು.

ಹಿಟ್ಟಿನಹಳ್ಳಿ, ಮನಗೂಳಿ, ಹೊನಗನಹಳ್ಳಿ, ಬಬಲೇಶ್ವರ, ಮಮದಾಪುರ, ಶಿವಣಗಿ, ಹೊನವಾಡ, ಯರನಾಳ, ಮುತ್ತಗಿ, ಗೊಳಸಂಗಿ ಮುಂತಾದ ಗ್ರಾಮಗಳಿಂದ ತಂಡಗಳು ಆಗಮಿಸಿದ್ದವು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.