ಪ್ರಭಾವಿಗಳ ಭವಿಷ್ಯ ಇಂದು ನಿರ್ಧಾರ

ಇಂದು ಬಮೂಲ್ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ • ಸಂಘಗಳ ಅಧ್ಯಕ್ಷರಿಗೆ ಮತದಾನದ ಅವಕಾಶ

Team Udayavani, May 12, 2019, 3:18 PM IST

ramanagar-tdy01

ಚನ್ನಪಟ್ಟಣ: ಕಳೆದ ಹದಿನೈದು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆ ಭಾನುವಾರ ನಡೆಯಲಿದೆ. ಶತಾಯ ಗತಾಯ ಗೆಲ್ಲಬೇಕೆಂದು ಜಿದ್ದಿಗೆ ಬಿದ್ದಿರುವ ತಾಲೂಕು ಜೆಡಿಎಸ್‌ ಪಕ್ಷದ ಇಬ್ಬರು ಪ್ರಭಾವಿ ಮುಖಂಡರ ಭವಿಷ್ಯವನ್ನು ಮತದಾರರು ನಿರ್ಧಾರಿಸಲಿದ್ದಾರೆ.

ಹಾಲಿ ನಿರ್ದೇಶಕ ಎಸ್‌.ಲಿಂಗೇಶ್‌ಕುಮಾರ್‌ ಹಾಗೂ ಮಾಜಿ ನಿರ್ದೇಶಕ ಜಯಮುತ್ತು ಅವರು ಸ್ಪರ್ಧಾಕಣದಲ್ಲಿದ್ದು, ಕಳೆದ ಬಾರಿಯೂ ಈ ಇಬ್ಬರೇ ನೇರ ಸ್ಪರ್ಧಿಗಳಾಗಿದ್ದರು. ತಾಲೂಕಿನ 147 ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರುಗಳು ಮತದಾನದ ಅವಕಾಶ ಪಡೆದುಕೊಂಡಿದ್ದಾರೆ. ಇವರೆಲ್ಲರೂ ನೂತನ ನಿರ್ದೇಶಕರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದ್ದು, 4ರ ನಂತರ ಎಣಿಕೆ ನಡೆದು, ಫಲಿತಾಂಶವೂ ಸಹ ಪ್ರಕಟವಾಗಲಿದೆ.

ಎರಡು ಅವಧಿಯಲ್ಲೂ ಆಯ್ಕೆ: ಎರಡು ಅವಧಿಯಲ್ಲಿ ಎಸ್‌.ಲಿಂಗೇಶ್‌ಕುಮಾರ್‌ ನಿರ್ದೇಶಕರಾಗಿ ಆಯ್ಕೆಯಾಗಿದ್ದರು. ಜಯಮುತ್ತು ಕಳೆದ ಅವಧಿಯಲ್ಲಿ ಆಯ್ಕೆಯಾಗಿ, ಆಯ್ಕೆಯಾಗಲು ಬೇಕಿರುವ ಹಾಲು ಉತ್ಪಾದಕರ ಸಂಘಗಳ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಕೆಲವೇ ತಿಂಗಳು ನಿರ್ದೇಶಕ ಸ್ಥಾನದಿಂದ ವಂಚಿತರಾಗಬೇಕಾಯಿತು. ನ್ಯಾಯಾಲಯ ಅವರ ಆಯ್ಕೆಯನ್ನು ವಜಾಗೊಳಿಸಿ ಮತ್ತೂಮ್ಮೆ ಮರುಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗಳಿಗೆ ಸೂಚಿಸಿತ್ತು. ನಂತರ ನಡೆದ ಚುನಾವಣೆಯಲ್ಲಿ ಎಸ್‌.ಲಿಂಗೇಶ್‌ ಕುಮಾರ್‌ ಆಯ್ಕೆಗೊಂಡಿದ್ದರು.

ಮುಂದುವರಿದ ಜಿದ್ದಾಜಿದ್ದಿ: ಕಳೆದ ಬಾರಿಯ ಚುನಾವಣೆಯಲ್ಲಿ ಆರಂಭವಾದ ಜಿದ್ದಾಜಿದ್ದಿ, ಈ ಬಾರಿಯೂ ಮುಂದುವರಿದಿದೆ. ತಾಲೂಕು ಜೆಡಿಎಸ್‌ನಲ್ಲಿ ಬಣ ರಾಜಕಾರಣ ಸೃಷ್ಟಿಸುತ್ತಿರುವ ಬಮೂಲ್ ವಿಚಾರವನ್ನು ಸರಿಪಡಿಸಲು ವರಿಷ್ಠರಿಗೆ ಮನಸ್ಸಿಲ್ಲ. ಶಕ್ತಿ ಇದ್ದವರು ಗೆದ್ದುಬನ್ನಿ ಎನ್ನುವ ಮೂಲಕ ಭಿನ್ನಮತಕ್ಕೆ ಪರೋಕ್ಷವಾಗಿ ಅವರೇ ಕಾರಣರಾಗುತ್ತಿದ್ದಾರೆ ಎನ್ನುವ ಮಾತುಗಳು ಕಳೆದ ಬಾರಿಯಿಂದಲೂ ಇವೆ, ಆದು ಈ ಬಾರಿಯೂ ಮರುಕಳಿಸಿದೆ.

ಈ ಬಾರಿಯೂ ಎರಡು ಬಣಗಳ ಸೃಷ್ಟಿ: ಸ್ಪರ್ಧಿಗಳಿಬ್ಬರನ್ನೂ ಕರೆಸಿ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ವಿಚಾರದಲ್ಲಿಯೂ ಸಹ ವರಿಷ್ಠರು ಸ್ಪಷ್ಟಪಡಿಸುವ ಗೋಜಿಗೆ ಹೋಗಿಲ್ಲ. ಪರಿಣಾಮ ತಾಲೂಕು ಜೆಡಿಎಸ್‌ನಲ್ಲಿ ಈ ಬಾರಿಯೂ ಎರಡು ಬಣಗಳ ಸೃಷ್ಟಿಯಾಗಿದೆ. ಜಿದ್ದಾಜಿದ್ದಿಗೆ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಟೊಂಕಕಟ್ಟಿ ನಿಂತಿವೆ. ಮತದಾನ ಹೊಂದಿರುವ ಗ್ರಾಮಗಳಲ್ಲಿ ಎರಡೂ ಅಭ್ಯರ್ಥಿಗಳ ಪರ ಗುಂಪುಗಳು ಸೃಷ್ಪಿಸಯಾಗಿ ಮತಯಾಚನೆ ಮಾಡಿವೆ. ನೆರೆಯ ಕನಕಪುರ ಕ್ಷೇತ್ರದಲ್ಲಿ ಡಿಕೆ ಸಹೋದರರು ಅವಿರೋಧವಾಗಿ ನಿರ್ದೇಶಕರನ್ನು ಆಯ್ಕೆ ಮಾಡಿದ್ದಾರೆ. ಆದರೆ, ಸಿಎಂ ಕುಮಾರಸ್ವಾಮಿ ಕ್ಷೇತ್ರದಲ್ಲಿ ಮಾತ್ರ ಜಿದ್ದಾಜಿದ್ದಿ ಏರ್ಪಟ್ಟಿದೆ.

ಮತದಾರರಿಗೆ ಪ್ರವಾಸ ಭಾಗ್ಯ: ವಿಧಾನಸಭೆ ಚುನಾವಣೆಯನ್ನೂ ಮೀರಿಸುವಂತೆ ಬಮೂಲ್ ಚುನಾವಣೆಯಲ್ಲಿ ಕಾಂಚಾಣ ಸದ್ದುಮಾಡಿದೆ. ಹಣ, ಪ್ರವಾಸ ಭಾಗ್ಯ ಈಗಾಗಲೇ ಪ್ರಾಪ್ತಿಯಾಗಿವೆ. ಚುನಾವಣೆ ಹಕ್ಕನ್ನು ಅಧ್ಯಕ್ಷರಿಗೆ ನೀಡುವ ಸಭೆಯಿಂದ ಹಿಡಿದು, ಮತದಾನ ಆಗುವವರೆಗೂ ಸಂಪೂರ್ಣ ಖರ್ಚು ವೆಚ್ಚಗಳನ್ನು ಅಭ್ಯರ್ಥಿಗಳೇ ನೋಡಿಕೊಂಡಿದ್ದಾರೆ. ಯಾವುದೇ ಅದ್ಧೂರಿ, ಸದ್ದುಗದ್ದಲಿಲ್ಲದೇ ನಡೆಯುತ್ತಿದ್ದ ಚುನಾವಣೆ ಅಖಾಡದಲ್ಲಿ ಈ ಬಾರಿ ಲಕ್ಷಾಂತರ ರೂ.ಹಣ ಹರಿಯಲು ಅಭ್ಯರ್ಥಿಗಳ ಪ್ರತಿಷ್ಠೆಯೇ ಕಾರಣ ಎನ್ನಬಹುದಾಗಿದೆ. ಪ್ರತಿ ಮತಕ್ಕೆ 1.5 ಲಕ್ಷ ರೂ.ಗಳಿಂದ 2 ಲಕ್ಷ ರೂ.ವರೆಗೆ ದುಬಾರಿಯಾಗಿದೆ. ಮತದಾರರಿಗಿಂತ ಅಭ್ಯರ್ಥಿಗಳೇ ಈ ಹಣ ನಿಗದಿಪಡಿಸಿದ್ದಾರೆ ಎನ್ನುವುದು ಇಲ್ಲಿ ಗಮನಾರ್ಹ. ಅಲ್ಲದೆ, ಈ ಹಣದ ಪ್ರಮಾಣ ದುಪ್ಪಟ್ಟಾಗುವ ಮಾತುಗಳೂ ಸಹ ಈ ಹಿಂದೆ ಕೇಳಿ ಬಂದಿದ್ದವು.

ಬಮೂಲ್ ರಾಜಕಾರಣ ಇಂದು ಅಂತ್ಯ: ಕಳೆದ ಹದಿನೈದು ದಿನಗಳಿಂದ ನಡೆಯುತ್ತಿದ್ದ ಬಮೂಲ್ ರಾಜಕಾರಣ ಇದೀಗ ಅಂತ್ಯಗೊಳ್ಳುವ ಸಂದರ್ಭ ಎದುರಾಗಿದೆ. ಭಾನುವಾರ ಅಭ್ಯರ್ಥಿಗಳು ನಡೆಸಿದ ಶ್ರಮಕ್ಕೆ ಮತದಾರರು ಉತ್ತರ ನೀಡಲಿದ್ದಾರೆ. ಇಬ್ಬರೂ ಅಭ್ಯರ್ಥಿಗಳು ಸಮನಾಗಿ ಅಖಾಡವನ್ನು ರಂಗುಗೊಳಿಸಿದ್ದಾರೆ. ಎಲ್ಲ ಪಟ್ಟುಗಳನ್ನೂ ಹಾಕಿದ್ದಾರೆ. ಮತದಾರರು ಯಾರ ಬೆಂಬಲಿಸಲಿದ್ದಾರೆ ಎಂಬುದು ನಿಗೂಢವಾಗಿದೆ.

● ಎಂ.ಶಿವಮಾದು

 

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.