ಪಂಪ್‌ಸೆಟ್ ನಿಲ್ಲಿಸಿ: ಕುಡಿವ ನೀರಿಗೆ ಸಹಕರಿಸಿ


Team Udayavani, May 12, 2019, 5:22 PM IST

nc-4

ಕಾರವಾರ: ಕುಡಿಯುವ ನೀರಿನ ಮೂಲವಾಗಿರುವ ನದಿಗಳಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ರೈತರು ಸ್ಥಗಿತಗೊಳಿಸಿ, ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ| ಹರೀಶ್‌ಕುಮಾರ್‌ ಕೆ. ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಈಗಾಗಲೇ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಹಾಗೂ ಪಟ್ಟಣಗಳಿಗೆ ಗಂಗಾವಳಿ ಮತ್ತು ಅಘನಾಶಿನಿ ನದಿಗಳಿಂದ ನೀರಿನ ಸಂಪರ್ಕ ಪಡೆಯಲಾಗಿದೆ. ಗಂಗವಳಿ ಹಾಗೂ ಅಘನಾಶಿನಿ ನದಿಯಲ್ಲೂ ನೀರಿನ ಹರಿವು ಕಡಿಮೆಯಾಗುತ್ತಿದೆ. ಇಂಥ ಕಷ್ಟಕರ ಸನ್ನಿವೇಶದಲ್ಲಿ ನದಿ ನೀರನ್ನು ಕೃಷಿಗೆ, ತೋಟಗಳಿಗೆ ಬಳಸುವುದು ಸಮಂಜಸವಲ್ಲ. ಜನರ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಗಂಗಾವಳಿ, ಅಘನಾಶಿನಿ ನದಿಗಳಿಗೆ ರೈತರು ಪಂಪ್‌ಸೆಟ್‌ಗಳನ್ನು ಅಳವಡಿಸಿಕೊಂಡಿದ್ದಲ್ಲಿ, ತಕ್ಷಣ ಸ್ಥಗಿತಗೊಳಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರೈತರಲ್ಲಿ ಮನವಿ ಮಾಡಿದ್ದಾರೆ. ಈ ತಿಂಗಳ ಕೊನೆ ವಾರದೊಳಗೆ ಮಳೆಯಾಗುವ ಸಾಧ್ಯತೆಗಳಿದ್ದು ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿ ಸುವುದರಿಂದ ಹೆಚ್ಚಿನ ಪ್ರಮಾಣದ ಹಾನಿ ಸಂಭವಿಸುವುದಿಲ್ಲ. ಅಲ್ಲದೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಪಂಪ್‌ ಸೆಟ್‌ಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ. ಅದಕ್ಕೆ ರೈತರೂ ಜಿಲ್ಲಾಡಳಿತದೊಂದಿಗೆ ಕುಡಿಯುವ ನೀರನ್ನು ಜನತೆಗೆ ನೀಡುವ ಮಹತ್ತರ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ತಿಳಿಸಿದ್ದಾರೆ.

ಈಗಾಗಲೇ ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ಸರಬರಾಜು ಮಾಡಲಾಗುತ್ತಿದೆ. ನೀರಿನ ಲಭ್ಯತೆ ಇರುವ ಕಡೆಗಳನ್ನು ಪೈಪ್‌ಲೈನ್‌ಗಳನ್ನು ಮಾಡುವ ಅಥವಾ ಕೊಳವೆ ಭಾವಿಗಳನ್ನು ಮತ್ತಷ್ಟು ಆಳಕ್ಕೆ ತೋಡುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನದಿ ಭಾಗದಲ್ಲಿ ಪಂಪ್‌ಸೆಟ್‌ಗಳನ್ನು ನಿಲ್ಲಿಸುವುದರಿಂದ ಆ ನದಿಗಳಿಂದ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಅನುಕೂಲವಾಗುತ್ತವೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

34 ಮಜಿರೆಗಳಿಗೆ 11 ಟ್ಯಾಂಕರ್‌ನಲ್ಲಿ ನೀರು ಪೂರೈಕೆ ಆರಂಭ

ಕುಮಟಾ: ತಾಲೂಕಿನ ಎಲ್ಲೆಡೆ ನೀರಿನ ಬವಣೆ ಹೆಚ್ಚುತ್ತಲೇ ಇದ್ದು, ಟ್ಯಾಂಕರ್‌ ಮೂಲಕ ನೀರನ್ನು ಪೂರೈಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.

ನೀರಿನ ಬರ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜನ ನೀರಿಗಾಗಿ ಕಿ.ಮೀ.ಗಳಷ್ಟು ದೂರ ಸಾಗಿ ನೀರು ತರುವ ಪರಿಸ್ಥಿತಿಯೂ ಎದುರಾಗಿದೆ. ಹೀಗಾಗಿ ತಾಲೂಕಿನ ಬಹುತೇಕ ನೀರಿನ ಬರ ಇರುವ ಪ್ರದೇಶಕ್ಕೆ ನೀರನ್ನು ಪೂರೈಸುವುದು ಅನಿವಾರ್ಯವಾಗಿದೆ.

ತಾಲೂಕಿನ ಯಾವ ಪ್ರದೇಶಗಳಲ್ಲಿ ಹೆಚ್ಚು ನೀರಿನ ಸಮಸ್ಯೆ ಇದೆ ಎಂದು ಆಯಾ ಗ್ರಾಪಂ ಪಿಡಿಓಗಳ ಮುಖಾಂತರ ಮಾಹಿತಿ ಪಡೆದು ತಹಶೀಲ್ದಾರ್‌ ಪರಿಮಳ ದೇಶಪಾಂಡೆ ಹಾಗೂ ತಾಪಂ ಇಒ ಸಿ.ಟಿ. ನಾಯ್ಕ ಜಂಟಿಯಾಗಿ ಕೂಡಲೇ ಸ್ಥಳ ಪರಿಶೀಲಿಸಿ ನೀರು ಪೂರೈಕೆಗೆ ಮುಂದಾಗುತ್ತಿರುವುದು ಗ್ರಾಮದ ಜನತೆಯಲ್ಲಿ ಹರ್ಷ ಮೂಡಿಸಿದೆ.

ನೀರು ಪೂರೈಸಲು ಅಷ್ಟು ದೊಡ್ಡ ಜಲಮೂಲ ಇಲ್ಲದಿರುವುದು ಕೂಡ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆದರೂ ಖಾಸಗಿ ಜಾಗದಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ಇರುವುದು ಪರಿಶೀಲನೆಯಿಂದ ತಿಳಿದು ಬಂದಿರುವುದರಿಂದ ಲಭ್ಯವಿರುವ ಕಡೆ ಸಂಪರ್ಕಿಸಿ ನೀರು ನೀಡುವಂತೆ ವಿನಂತಿಸಲಾಗಿದೆ.

ಈಗಾಗಲೇ 11 ಗ್ರಾಮ ಪಂಚಾಯತಗಳ 13 ಗ್ರಾಮಗಳಿಗೆ, 34 ಮಜರೆಗಳಿಗೆ 11 ಟ್ಯಾಂಕರ್‌ ಮೂಲಕ 28ಕ್ಕೂ ಹೆಚ್ಚು ಟ್ರಿಫ್‌ ನೀರು ಪ್ರತಿದಿನ ಸರಬರಾಜು ಮಾಡಲಾಗುತ್ತಿದೆ. ನೀರಿನ ಬರವಿರುವ ಎಲ್ಲಾ ಪ್ರದೇಶಕ್ಕೂ ಕುಡಿಯುವ ನೀರನ್ನು ಪೂರೈಸಲಾಗುವುದು.
• ಪರಿಮಳ ದೇಶಪಾಂಡೆ,ತಹಶೀಲ್ದಾರ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.