6ನೇ ಹಂತ: ಬಂಗಾಲದಲ್ಲಿ ಮತ್ತೆ ಹಿಂಸೆ
Team Udayavani, May 13, 2019, 6:00 AM IST
ಹೊಸದಿಲ್ಲಿ: ಪ್ರತಿ ಹಂತದಂತೆ ಆರನೇ ಹಂತದ ಚುನಾವಣೆಯಲ್ಲೂ ಪಶ್ಚಿಮ ಬಂಗಾಲದಲ್ಲಿ ಹಿಂಸೆ ಮುಂದುವರಿದಿದ್ದು, ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.
ಕೇಶ್ಪುರದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬಂದಿ ಮೇಲೆ ಟಿಎಂಸಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರೆ, ಬಂಕುರಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ. ಬಿಹಾರದಲ್ಲಿ ಗೃಹರಕ್ಷಕ ಸಿಬಂದಿಯೊಬ್ಬರ ಬಂದೂಕಿನಿಂದ ಅಚಾತುರ್ಯವಾಗಿ ಗುಂಡು ಹಾರಿದ ಪರಿಣಾಮ, ಮತಗಟ್ಟೆ ಸಿಬಂದಿ ಅಸುನೀಗಿದ ಘಟನೆ ಸಂಭವಿಸಿದೆ.
ಒಟ್ಟು 7 ಹಂತಗಳ ಪೈಕಿ 6ನೇ ಹಂತದ ಮತದಾನವು ರವಿವಾರ ಮುಕ್ತಾಯಗೊಂಡಿದ್ದು, ದಿಲ್ಲಿ ಸಹಿತ 7 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಈ ಹಂತದಲ್ಲಿ ಒಟ್ಟಾರೆ ಶೇ.63.3ರಷ್ಟು ಮತದಾನ ದಾಖಲಾಗಿದೆ.
ಪಶ್ಚಿಮ ಬಂಗಾಲದ ಬಿಜೆಪಿ ಅಭ್ಯರ್ಥಿ, ಮಾಜಿ ಐಪಿಎಸ್ ಅಧಿಕಾರಿ ಭಾರ್ತಿ ಘೋಷ್ ಮೇಲೆ ತೃಣಮೂಲ ಕಾಂಗ್ರೆಸ್ನ ಬೆಂಬಲಿಗರಿಂದ ಹಲ್ಲೆ ನಡೆದಿದೆ. ಕೇಶ್ಪುರ ಮತಗಟ್ಟೆಯಲ್ಲಿ ಚುನಾವಣ ಅಕ್ರಮ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಭಾರ್ತಿ ಘೋಷ್ ಅಲ್ಲಿಗೆ ಧಾವಿಸಿದಾಗ, ಟಿಎಂಸಿ ಕಾರ್ಯಕರ್ತರು ಏಕಾಏಕಿ ಘೋಷ್ ಅವರ ಬೆಂಗಾವಲು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ, ಬಾಂಬ್ ಎಸೆದಿದ್ದಾರೆ. ಜತೆಗೆ ಘೋಷ್ ಮೇಲೆ ಹಲ್ಲೆಯನ್ನೂ ನಡೆಸಿ, ಅಟ್ಟಾಡಿಸಲಾಗಿದೆ. ಕೊನೆಗೆ ತಾನು ದೇವಸ್ಥಾನವೊಂದರಲ್ಲಿ ಆಶ್ರಯ ಪಡೆದಿದ್ದಾಗಿ ಘೋಷ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್