ನಗರದಲ್ಲಿ ಇಂದಿನಿಂದ ಮೂರು ದಿನ ನೀರಿಲ್ಲ
ನೀರು ರೇಷನಿಂಗ್ ಪರಿಷ್ಕರಣೆ
Team Udayavani, May 13, 2019, 10:20 AM IST
ಮಹಾನಗರ, ಮೇ 12: ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ನೀರು ಪೂರೈಕೆಗಾಗಿ ಸದ್ಯ ಜಾರಿಯಲ್ಲಿರುವ ರೇಷನಿಂಗ್ ನಿಯಮ ರವಿವಾರದಿಂದ ಪರಿಷ್ಕರಿ ಸಲಾಗಿದೆ.
ಪ್ರಸ್ತುತ ನಾಲ್ಕು ದಿನ ನೀರು ಪೂರೈಕೆ, ಎರಡು ದಿನ ಸ್ಥಗಿತ ಪ್ರಕ್ರಿಯೆ ಚಾಲ್ತಿಯಲ್ಲಿತ್ತು. ನೀರಿನ ಮಟ್ಟ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮೇ 13ರಿಂದ ನಾಲ್ಕು ದಿನ ನೀರು ಪೂರೈಕೆ ಮತ್ತು ಮೂರು ದಿನ ನೀರು ಸರಬರಾಜು ಸ್ಥಗಿತಗೊಳಿಸಲಾಗುವುದು.
ತುಂಬೆ ಅಣೆಕಟ್ಟಿನಲ್ಲಿ ರವಿವಾರ ಬೆಳಗ್ಗೆ ನೀರಿನ ಮಟ್ಟ 3.97ಮೀ. ಇದ್ದು ನೀರು ಸಂಜೆ ವೇಳೆಗೆ 3.94 ಮೀ. ಗೆ ಇಳಿದಿದೆ. ಶನಿವಾರ ಬೆಳಗ್ಗೆ 4.12 ಮೀ. ಇದ್ದ ನೀರಿನ ಮಟ್ಟ ಸಂಜೆ ವೇಳೆಗೆ 4 ಮೀ.ಗೆ ಇಳಿದಿತ್ತು.
ಇದೇ ರೀತಿ ಮುಂದುವರಿದರೆ ನಗರಕ್ಕೆ ನೀರು ಪೂರೈಕೆ ಇನ್ನಷ್ಟು ಕಠಿನವಾಗುವ ಸಾಧ್ಯತೆ ಇದೆ. ಈ ನಡುವೆ ನಗರಕ್ಕೆ ನೀರು ಪೂರೈಕೆ ಅನಿವಾರ್ಯ ಇರುವುದರಿಂದ ರೇಷನಿಂಗ್ ಪರಿಷ್ಕರಣೆ ಅನಿವಾರ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ
ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’
D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್ ನಲ್ಲಿ 6 ಬೆಡ್ ಮೀಸಲು
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ
MUST WATCH
ಹೊಸ ಸೇರ್ಪಡೆ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು
ಕಲಬುರಗಿ: ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ ಮತ ಚಲಾವಣೆ ಆರೋಪ