ಮಕ್ಕಳಲ್ಲಿ ಸಾಮರಸ್ಯ ಗುಣ ಬೆಳೆಸಿ: ದಿಂಗಾಲೇಶ್ವರ ಶ್ರೀ
Team Udayavani, May 13, 2019, 11:47 AM IST
ಧಾರವಾಡ: ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಲಿಂಗಾಯತ ಭವನದಲ್ಲಿ ಬಸವ ಜಯಂತಿ ಅಂಗವಾಗಿ ಬಸವಣ್ಣನವರ ಸಾಮಾಜಿಕ ಚಿಂತನೆಗಳ ಕುರಿತು ಉಪನ್ಯಾಸ ಹಾಗೂ ವೀರಶೈವ ಲಿಂಗಾಯತ ಸಮಾಜದ ಸಾಧಕರಿಗೆ ಸನ್ಮಾನ ಸಮಾರಂಭ ಜರುಗಿತು.
ಸಾನ್ನಿಧ್ಯ ವಹಿಸಿದ್ದ ಬಾಲೇಹೊಸೂರಿನ ದಿಂಗಾಲೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, ಸಮಾಜ ಒಂದು ಸಾಗರವಿದ್ದಂತೆ. ಇಲ್ಲಿ ಎಲ್ಲ ಸಮುದಾಯದ ಎಲ್ಲ ತರಹದ ಜನ, ಜೀವಿಗಳು ಇದ್ದಾರೆ. ಪರಸ್ಪರ ವಿಶ್ವಾಸ, ವ್ಯಕ್ತಿ ಗೌರವ ಮತ್ತು ಅವರವರ ಆಚಾರ, ವಿಚಾರಗಳ ಬಗ್ಗೆ ಪ್ರೀತಿ, ವಿಶ್ವಾಸ, ಸಹಿಷ್ಣುತೆ ಇರಲಿ. ಸಾಮರಸ್ಯದ ಬದುಕು ನಮ್ಮ ನಾಡಿನ ಇತಿಹಾಸದ ಭಾಗವಾಗಿದೆ. ಬೆಳೆಯುವ ಮಕ್ಕಳಲ್ಲಿ ಪರಸ್ಪರರನ್ನು ಪ್ರೀತಿಸುವ, ಗೌರವಿಸುವ ಮತ್ತು ಸ್ವಾಭಿಮಾನದಿಂದ ಬದುಕುವ ನೀತಿ ಪಾಠ ಕಲಿಸಿ ಎಂದರು.
ಮನುಷ್ಯ ತನ್ನ ಸೌಂದರ್ಯವನ್ನು ಸಾಧನೆ ಮೂಲಕ ಜಗತ್ತಿಗೆ ತೋರಿಸಬೇಕು. ಆತ್ಮವಿಶ್ವಾಸವಿದ್ದರೆ ಮತ್ತು ಸಾಧಿಸುವ ಛಲ ಹಾಗೂ ಸದೃಢ ಸಂಕಲ್ಪಗಳು ಮಾತ್ರ ನಮ್ಮ ಸಾಧನೆಗೆ ಸಹಾಯಕವಾಗುತ್ತವೆ. ಮತ್ತೂಬ್ಬರಿಗೆ ಸಾಧ್ಯವಾದರೆ ಸಹಾಯ ಮಾಡಿ. ಇಲ್ಲದಿದ್ದರೆ ಸುಮ್ಮನಿರಿ. ಆದರೆ ತೊಂದರೆ, ಕೇಡು ಮಾಡಲು ಹೋಗಬೇಡಿ ಎಂದು ಕಿವಿಮಾತು ಹೇಳಿದರು.
ಐಎಎಸ್ನಲ್ಲಿ 17ನೇ ಸ್ಥಾನ ಪಡೆದಿರುವ ರಾಹುಲ್ ಶರಣಪ್ಪ ಸಂಕನೂರ, ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಸ್ಥಾನ ಪಡೆದಿರುವ ಪರಿಣಿತಾ ಹಿರೇಮಠ, ಶ್ರಾವಣಿ ಹಿರೇಮಠ, ಮೇಘಾ ಪರಪ್ಪಗೌಡರ ಹಾಗೂ ಪಿಯುಸಿಯಲ್ಲಿ ರಾಜ್ಯಕ್ಕೆ ಸ್ಥಾನ ಪಡೆದಿರುವ ಲಾವಣ್ಯ ಕುಸುಗಲ್, ಆದರ್ಶ ಕೂಬಿಹಾಳ, ಈರಣ್ಣ ಅಕ್ಕೂರ ಮತ್ತು ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ರಾಚಪ್ಪ ತಿರ್ಲಾಪುರ, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣಿಕೊಪ್ಪ, ಕವಿವಿಯಿಂದ ಚಿನ್ನದ ಪದಕದೊಂದಿಗೆ ಪಿಎಚ್ಡಿ ಪದವಿ ಪಡೆದ ಡಾ|ಸಂಗಯ್ಯ ಸರಗಣಾಚಾರಿ ಅವರನ್ನು ಸನ್ಮಾನಿಸಲಾಯಿತು.
ಕವಿವಿ ಬಸವ ಅಧ್ಯಯನ ಪೀಠದ ಸಂಯೋಜಕ ಡಾ| ಸಿ.ಎಂ. ಕುಂದಗೋಳ ಉಪನ್ಯಾಸ ನೀಡಿದರು. ಮಹಾಸಭಾ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ, ತಹಶೀಲ್ದಾರ್ ಪ್ರಕಾಶ ಕುದರಿ, ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಎಚ್. ಮಿಟ್ಟಲಕೋಡ ಪಾಲ್ಗೊಂಡಿದ್ದರು. ಶಿವಶರಣ ಕಲಬಶೆಟ್ಟರ ಸ್ವಾಗತಿಸಿದರು. ಬಸನಗೌಡ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಸಿದ್ದಪ್ಪ ಕಂಬಾರ ನಿರೂಪಿಸಿದರು. ಶಿವಾನಂದ ಕವಳಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!