ಶ್ರಮದಾನ ಮಾಡಿ ಮಹನೀಯರಿಗೆ ಗೌರವ ಸಮರ್ಪಣೆ

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ಭಗೀರಥ ಜಯಂತಿ • ತಾಲೂಕು ಕಚೇರಿ ಆವರಣದ ಸುತ್ತಮತ್ತ ಅನುಪಯುಕ್ತ ಗಿಡಗಳ ತೆರವು

Team Udayavani, May 13, 2019, 3:17 PM IST

mandya-tdy-7..

.ಆರ್‌.ಪೇಟೆ ತಾಲೂಕು ಕಚೇರಿಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮತ್ತು ಶ್ರೀ ಭಗೀರಥ ಜಯಂತಿಯ ಅಂಗವಾಗಿ ಮಿನಿ ವಿಧಾನಸೌಧದ ಆವರಣ ಸ್ವಚ್ಛ ಮಾಡಲಾಯಿತು.

ಕೆ.ಆರ್‌.ಪೇಟೆ: ಪಟ್ಟಣದ ಮಿನಿವಿಧಾನ ಸೌಧದ ಸುತ್ತಲೂ ಬೆಳೆದಿದ್ದ ಅನುಪಯುಕ್ತ ಗಿಡಗಂಟಿಗಳು ಮತ್ತು ಕಸ ಕಡ್ಡಿಗಳನ್ನು ತಹಶೀಲ್ದಾರ್‌ ಎಂ.ಶಿವಮೂರ್ತಿ ನೇತೃತ್ವದಲ್ಲಿ ಕಂದಾಯ ಇಲಾಖೆ ನೌಕರರು ಹಾಗೂ ಪುರಸಭೆಯ ಪೌರಕಾರ್ಮಿಕರು ಶ್ರಮದಾನ ಕೈಗೊಂಡು ಸ್ವಚ್ಛತೆ ನಡೆಸುವ ಮೂಲಕ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಮತ್ತು ಭಗೀರಥ ಜಯಂತಿಗಳನ್ನು ಅರ್ಥಪೂರ್ಣವಾಗಿ ಅಚರಣೆ ಮಾಡಿದರು.

ತಾಲೂಕು ಕಚೇರಿಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ಭಗೀರಥರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿಸಿದ ಬಳಿಕ ತಾಲೂಕು ಕಚೇರಿ ಆವರಣದ ಸುತ್ತಮತ್ತ ಅನುಪಯುಕ್ತ ಗಿಡಗಳನ್ನು ಕಡಿದು ಸ್ವಚ್ಛತಾ ಕಾರ್ಯಕ್ರಮಕ್ಕೆ ತಹಸೀಲ್ದಾರ್‌ ಎಂ.ಶಿವಮೂರ್ತಿ ಚಾಲನೆ ನೀಡಿದರು.

ಈ ವೇಳೆ ಶಿವಮೂರ್ತಿ ಮಾತನಾಡಿ, ಶಿವಶರಣರು ಕಾಯಕವೇ ಕೈಲಾಸ ಎಂಬ ಧ್ಯೇಯದೊಂದಿಗೆ ಸಮಾಜದ ಅಭಿವೃದ್ಧಿಗೆ 12ನೇ ಶತಮಾನದಲ್ಲಿಯೇ ಶ್ರಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ಭಗೀರಥ ಜಯಂತಿಯನ್ನು ಶ್ರಮದಾನ ಮಾಡುವ ಮೂಲಕ ಇಬ್ಬರೂ ಮಹನೀಯರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.

ಶ್ರಮದಾನ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಎಲ್ಲಾ ನೌಕರರು, ಆಹಾರ ಇಲಾಖೆ, ಪುರಸಭೆಯ ಪೌರಕಾರ್ಮಿಕರು ರಜೆಯ ದಿನವಾದರೂ ಸಹ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಚತಾ ಕಾರ್ಯಕ್ಕೆ ಕೈಜೋಡಿಸಿದ್ದು ಶ್ಲಾಘನೀಯವಾದುದು. ಮಹನೀಯರ ಜಯಂತಿಗಳ ದಿನದಂದು ರಜೆ ಪಡೆದು ಸಮಯ ವ್ಯರ್ಥ ಮಾಡುವ ಬದಲು ಸಾಮಾಜಮುಖೀ ಕಾರ್ಯಗಳನ್ನು ಮಾಡುವ ಮೂಲಕ ಮಹಾನ್‌ನಾಯಕರ ಜಯಂತಿಗಳಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್‌ ಮಹದೇವೇಗೌಡ, ಲಕ್ಷ್ಮೀಕಾಂತ್‌, ಆಹಾರ ಇಲಾಖೆಯ ಶಿರಸ್ತೇದಾರ್‌ ರಾಜು, ರಾಜಸ್ವ ನಿರೀಕ್ಷಕರಾದ ರಾಮಚಂದ್ರಪ್ಪ, ರಾಜಮೂರ್ತಿ, ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಹರೀಶ್‌, ಪುರಸಭೆಯ ಆರೋಗ್ಯ ನಿರೀಕ್ಷಕ ನರಸಿಂಹಶೆಟ್ಟಿ, ಪೌರಕಾರ್ಮಿಕರ ಸಂಘದ ಮುಖಂಡ ಕೆ.ಮುತ್ತುರಾಜ್‌ ಮತ್ತಿತರರು ಭಾಗವಹಿಸಿ ಶ್ರಮದಾನ ಮಾಡಿದರು.

ಟಾಪ್ ನ್ಯೂಸ್

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.