ಮತ ಚಲಾಯಿಸದೆ ನೀವು ದೊಡ್ಡ ಪಾಪ ಮಾಡಿದ್ದೀರಿ: ದಿಗ್ವಿಜಯ್ಗೆ ಮೋದಿ ತಿವಿತ
Team Udayavani, May 13, 2019, 3:45 PM IST
ರತ್ಲಾಮ್ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಧ್ಯ ಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ದಿಗ್ವಿಜಯ್ ಸಿಂಗ್ ಮತ ಚಲಾಯಿಸದೇ ಭಾರೀ ದೊಡ್ಡ ಪಾಪ ಎಸಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದಿಗ್ವಿಜಯ್ ಸಿಂಗ್ ಅವರು ಮಧ್ಯ ಪ್ರದೇಶದ ರಾಘೋಗಢದ ನಿವಾಸಿಯಾಗಿದ್ದು ಅಲ್ಲಿ ಅವರು ನೋಂದಾಯಿತ ಮತದಾರರಾಗಿದ್ದಾರೆ; ಆದರೆ ಅವರು ನಿನ್ನೆ ಭಾನುವಾರ ಇಲ್ಲಿ ತಮ್ಮ ಮತ ಚಲಾಯಿಸಿಲ್ಲ.
“ಡಿಗ್ಗಿ ರಾಜಾ, ಈ ಪ್ರಜಾಸತ್ತೆಯ ಹಬ್ಬದಲ್ಲಿ ನೀವು ಮತ ಚಲಾಯಿಸದೆ ಭಾರೀ ದೊಡ್ಡ ಪಾಪ ಮಾಡಿದ್ದೀರಿ. ರಾಷ್ಟ್ರಪತಿ, ಉಪ ರಾಷ್ಟ್ರಪತಿ ಮುಂತಾದ ಗಣ್ಯರೆಲ್ಲ ಕ್ಯೂ ನಲ್ಲಿ ನಿಂತು ಮತ ಚಲಾಯಿಸಿದ್ದಾರೆ. ಆದರೆ ಡಿಗ್ಗಿ ರಾಜಾ ಅದನ್ನು ಮಾಡಿಲ್ಲ’ ಎಂದು ಪ್ರಧಾನಿ ಮೋದಿ ಅವರು ರತ್ಲಾಂ ಜಿಲ್ಲೆಯಲ್ಲಿ ರಾಲಿಯಲ್ಲಿ ಮಾತನಾಡುತ್ತಾ ಹೇಳಿದರು.
ದಿಗ್ವಿಜಯ್ ಸಿಂಗ್ ತಮ್ಮ ಹುಟ್ಟೂರಿಗೆ ಹೋಗಿ ಖುದ್ದು ಮತ ಚಲಾಯಿಸದೆ, ತಾನು ಅಭ್ಯರ್ಥಿಯಾಗಿರುವ ಭೋಪಾಲ್ ಕ್ಷೇತ್ರದಲ್ಲೇ ಉಳಿದುಕೊಂಡು ಅತ್ಯಧಿಕ ಸಂಖ್ಯೆಯ ಮತದಾರರು ಮುಂದೆ ಬಂದು ಮತಹಾಕಬೇಕೆಂದು ಕೋರವಲ್ಲಿ ನಿರತರಾಗಿದ್ದರು.
ಭೋಪಾಲ್ ಕ್ಷೇತ್ರದಲ್ಲಿ ದಿಗ್ವಿಜಯ್ ಅವರೆದುರು 2008 ಮಾಲೇಗಾಂವ್ ಬ್ಲಾಸ್ಟ್ ಪ್ರಕರಣದ ಆರೋಪಿಯಾಗಿರುವ ಪ್ರಜ್ಞಾ ಠಾಕೂರ್ಅವರು ಸ್ಪರ್ಧಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ