ಕೊಳಚೆ ಪ್ರದೇಶದಲ್ಲಿ ಶುದ್ಧ ಕುಡಿವ ನೀರು ಪೂರೈಸಿ

ನಗರಪಾಲಿಕೆಗೆ ಕೊಳಗೇರಿ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ ಆಗ್ರಹ

Team Udayavani, May 13, 2019, 4:32 PM IST

tumkur-tdy-4..

ತುಮಕೂರು ನಗರದಲ್ಲಿ ಜಿಲ್ಲಾ ಕೊಳಗೇರಿ ಸಮಿತಿ ಕಾರ್ಯಕಾರಿ ಸದಸ್ಯರ ಸಭೆ ಜಿಲ್ಲಾ ಕೊಳಗೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು.

ತುಮಕೂರು: ನಗರದ 35 ವಾರ್ಡ್‌ಗಳಲ್ಲಿ ಬರುವ ಕೊಳಚೆ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಿ ನಗರ ಪಾಲಿಕೆಯಿಂದಲೇ ಅವುಗಳನ್ನು ನಿರ್ವಹಿಸಬೇಕೆಂದು ಜಿಲ್ಲಾ ಕೊಳಗೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎ.ನರಸಿಂಹಮೂರ್ತಿ ಒತ್ತಾಯಿಸಿದರು.

ನಗರದಲ್ಲಿ ನಡೆದ ಜಿಲ್ಲಾ ಕೊಳಗೇರಿ ಹಿತರಕ್ಷಣಾ ಸಮಿತಿ ಕಾರ್ಯಕಾರಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಶುದ್ಧ ಕುಡಿವ ನೀರು ನೀಡಿ: ಕೊಳಗೇರಿಗಳ ಪ್ರಸ್ತುತ ಸಮಸ್ಯೆಗಳು, ಮುಂದಿನ ಹೋರಾಟದ ರೂಪುರೇಷಗಳ ಕುರಿತು ವಿವರಿಸಿದ ಅವರು, ಕೊಳಗೇರಿಯಲ್ಲಿ ವಾಸಿಸುವ ಜನರಿಗೂ ಶುದ್ಧ ಕುಡಿಯುವ ನೀರು ಒದಗಿಸಲು ಮಹಾನಗರ ಪಾಲಿಕೆ ಮುಂದಾಗಬೇಕು. ಆಯುಕ್ತರು ಇದಕ್ಕೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಆಗ್ರಹಿಸಿದರು.

ಜನೋಪಯೋಗಿ ಕೆಲಸಕ್ಕೆ ಬೆಂಬಲ: ನಗರದ ವಿವಿಧ ಕಡೆ ಇದ್ದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮಹಾನಗರ ಪಾಲಿಕೆ ಆಯುಕ್ತರು ಪಾಲಿಕೆ ಸುಪರ್ದಿಗೆ ಪಡೆದುಕೊಂಡು ನಿರ್ವಹಣೆಯನ್ನು ಪಾಲಿಕೆಯೇ ವಹಿಸಿಕೊಂಡಿರುವುದು ಅಭಿನಂದನೀಯ. ಆಯುಕ್ತರ ಇಂತಹ ಜನೋಪಯೋಗಿ ಕೆಲಸಗಳಿಗೆ ಜನರ ಸಹಕಾರ ಇರುತ್ತದೆ ಎಂದು ಹೇಳಿದರು.

ದಿಬ್ಬೂರಿನಲ್ಲಿ ರಾಜೀವ್‌ ಆವಾಸ್‌ ಯೋಜನೆಯಡಿ ನಿರ್ಮಿಸಿ ಹಂಚಿಕೆ ಮಾಡಿರುವ 1,200 ಮನೆಗಳಿಗೆ ಜಿಲ್ಲಾಧಿಕಾರಿಗಳು ಶೀಘ್ರವೇ ಹಕ್ಕು ಪತ್ರವನ್ನು ವಿತರಿಸಿ, ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಮುಂದಾಗಬೇಕೆಂದು ಒತ್ತಾಯಿಸಿದರು.

ಕೊಳಚೆ ಪ್ರದೇಶ ಘೋಷಿಸಿ: ರಾಜೀವ್‌ ಆವಾಸ್‌ ಯೋಜನೆಯಡಿ ಹಕ್ಕುಪತ್ರವಿಲ್ಲದ ಕೊಳಗೇರಿಗಳಿಗೆ ಶೀಘ್ರವಾಗಿ ಮಹಾನಗರ ಪಾಲಿಕೆ ಮತ್ತು ಆಶ್ರಯ ಸಮಿತಿಯಿಂದ ಹಕ್ಕುಪತ್ರ ವಿತರಿಸಬೇಕು. ಅಘೋಷಿತ ಕೊಳಚೆ ಪ್ರದೇಶಗಳಾದ ಎಸ್‌.ಎನ್‌.ಪಾಳ್ಯ, ಸಂಪಾದನೆ ಮಠ ಮತ್ತು ಭಾರತೀ ನಗರ-2 ಕೊಳಚೆ ಪ್ರದೇಶಗಳನ್ನು ಶೀಘ್ರವಾಗಿ ಘೋಷಿಸಬೇಕು. ಇಸ್ಮಾಯಿಲ್ ನಗರ ಹಂದಿಜೋಗಿ ಕೊಳಚೆ ಪ್ರದೇಶದಲ್ಲಿ ಕೆಲವೊಂದು ಕಿಡಿಗೇಡಿಗಳು ಅಮಾಯಕರ ಮೇಲೆ ಪೊಲೀಸ್‌ ಕೇಸು ದಾಖಲಿಸುತ್ತಿರುವುದರ ಬಗ್ಗೆ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಸೂಕ್ತ ರಕ್ಷಣೆ ಪಡೆಯಬೇಕು ಎಂದು ತಿಳಿಸಿದರು.

ಅಭಿನಂದನೆ: ಸ್ಮಾರ್ಟ್‌ ಸಿಟಿ ಯೋಜನೆಯಡಿ ಮಾರಿಯಮ್ಮ ನಗರದಲ್ಲಿ ವಸತಿ ಸಂಕೀರ್ಣ ನಿರ್ಮಿಸಲು ಕಾರಣರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ಪಿ.ಮೋಹನ್‌ರಾಜ್‌, ನಗರ ಶಾಸಕ‌ ಜಿ.ಬಿ.ಜ್ಯೋತಿ ಗಣೇಶ್‌, ಮಾಜಿ ಶಾಸಕ ಡಾ.ಎಸ್‌.ರಫೀಕ್‌ ಅಹಮ್ಮದ್‌, ತುಮಕೂರು ಮಹಾನಗರ ಪಾಲಿಕೆ ಮಹಾಪೌರರು, ಉಪಮಹಾಪೌರರು, ಪಾಲಿಕೆಯ ಎಲ್ಲಾ ಸದಸ್ಯರಿಗೆ ಹಾಗೂ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎಂ.ಪಿ.ಮಹೇಶ್‌ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಜಿಲ್ಲಾ ಕೊಳಗೇರಿ ಸಮಿತಿ ಪದಾಧಿಕಾರಿಗಳಾದ ದೀಪಿಕಾ, ಶೆಟ್ಟಾಳಯ್ಯ, ಕಣ್ಣನ್‌, ಕೃಷ್ಣ, ಜಾಬೀರ್‌, ಶಾರದಮ್ಮ, ಗಂಗಮ್ಮ, ರಂಗನಾಥ್‌, ಸರ್ವರ್‌, ಭೂಮಿಪಾಲನ್‌, ಎಂ.ಶಂಕರಪ್ಪ ನಾಗಮ್ಮ, ಮೊಹಮ್ಮದ್‌ ಹಯಾತ್‌ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-pavagada

Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ

Tumkur ಕೊಟ್ಟಿಗೆಗೆ ಒಟ್ಟಿಗೆ ನುಗ್ಗಿದ 5 ಚಿರತೆಗಳು:32 ಕುರಿಗಳ ಸಾವು

Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Kunigal: ಹಿಂದು ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ : ಈದ್ ಮೀಲಾದ್ ಮೆರವಣಿಗೆ

Kunigal: ಹಿಂದೂ ಮುಸ್ಲಿಂ ಭಾವೈಕ್ಯತೆ, ಸಂಗಮಕ್ಕೆ ಸಾಕ್ಷಿಯಾದ ಈದ್ ಮಿಲಾದ್ ಮೆರವಣಿಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.