ಮಾಣಿಹೊಳೆ ಸೇತುವೆ ಶೀಘ್ರ ಸಂಚಾರಕ್ಕೆ


Team Udayavani, May 13, 2019, 5:32 PM IST

nc-4

ಸಿದ್ದಾಪುರ: ತಾಲೂಕಿನ 5 ಗ್ರಾಪಂಗಳ ಮತ್ತು ತಾಲೂಕಿನ ಕೇಂದ್ರಸ್ಥಾನ ಸಿದ್ದಾಪುರ ಪಟ್ಟಣ ಹಾಗೂ ಇದರ ಸುತ್ತಲಿನ ವ್ಯಾಪ್ತಿಗೆ ಪ್ರಮುಖ ಕೊಂಡಿಯಾದ ಮಾಣಿಹೊಳೆಯ(ಅಘನಾಶಿನಿ) ನೂತನ ಸೇತುವೆ ಸದ್ಯದಲ್ಲೇ ಸಂಚಾರಕ್ಕೆ ಸಿದ್ಧಗೊಳ್ಳಲಿದೆ. ಶಿಥಿಲಗೊಂಡಿದ್ದ ಇಲ್ಲಿಯ ಹಳೆಯ ಸೇತುವೆ ಕುಸಿದ ನಂತರದಲ್ಲಿ ತಾಲೂಕಿನ ಎರಡೂ ಭಾಗದ ಜನತೆ ಸಂಚಾರದ ಕುರಿತಂತೆ ಅನುಭವಿಸಿದ ಸಮಸ್ಯೆ ನಿವಾರಣೆಯಾಗಲಿದೆ.

2014ರಲ್ಲಿ ಇಲ್ಲಿದ್ದ ಹಳೆಯ ಸೇತುವೆ ಕುಸಿದ ನಂತರದಲ್ಲಿ ಸೇತುವೆಯ ಮೇಲೆ ವಾಹನ ಮತ್ತು ಜನಸಂಚಾರವನ್ನು ನಿರ್ಬಂಧಿಸಲಾಗಿತ್ತು. ಮಳೆಗಾಲದಲ್ಲಿ ಎರಡೂ ಕಡೆಯವರು ಹಾರ್ಸಿಕಟ್ಟಾ- ಮುಠuಳ್ಳಿ-ಯಲುಗಾರ್‌- ಗೋಳೀಮಕ್ಕಿ ಮಾರ್ಗದ ಸುತ್ತುಬಳಸಿನ ದಾರಿಯಲ್ಲಿ ಸಂಚಾರ ನಡೆಸಬೇಕಿತ್ತು. ಬೇಸಿಗೆಯಲ್ಲಿ ಸೇತುವೆ ಪಕ್ಕದಲ್ಲಿ ಹೊಳೆಯಲ್ಲಿ ಪೈಪ್‌ ಜೋಡಿಸಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗುತ್ತಿತ್ತು. ನಂತರ ಮಳೆಗಾಲ ಆರಂಭವಾಗುತ್ತಿದ್ದಂತೆ ಅವನ್ನು ತೆರವುಗೊಳಿಸಲಾಗುತ್ತಿತ್ತು.

2014ರಲ್ಲಿ ಸೇತುವೆ ಕುಸಿದಿದ್ದರೂ ಹೊಸ ಸೇತುವೆ ಕುರಿತಾಗಿ ಯಾವುದೇ ಪ್ರಸ್ತಾವನೆ ಸರಕಾರದ ಕಡೆಯಿಂದ ಬಾರದ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ರಾಜಕೀಯ ಮುಖಂಡರಿಂದ ಪ್ರತಿಭಟನೆಗಳು ನಡೆದಿದ್ದವು.

ಕೇಂದ್ರ ಸರಕಾರದ ರಸ್ತೆ ನಿಧಿ ಅನುದಾನದಲ್ಲಿ ಇಲ್ಲಿ ಹೊಸ ಸೇತುವೆಗೆ ಮಂಜೂರಾತಿ ದೊರೆತ ನಂತರದಲ್ಲಿ 2017ರ ಡಿಸೆಂಬರ್‌ ತಿಂಗಳಿನಲ್ಲಿ ಟೆಂಡರ್‌ ಕರೆಯಲಾಯಿತು. 2018ರ ಮಾರ್ಚ್‌ನಲ್ಲಿ ಕಾಮಗಾರಿ ಆರಂಭಗೊಂಡಿತು. ಸೇತುವೆ ಕಾಮಗಾರಿಯ ವೆಚ್ಚ 15 ಕೋಟಿ ರೂ.ಗಳಷ್ಟಿದ್ದು 13.30 ಕೋಟಿ ರೂ.ಗಳಿಗೆ ಟೆಂಡರ್‌ ಸ್ವೀಕರಸಲ್ಪಟ್ಟಿತ್ತು.

ಒಟ್ಟು 4 ಸ್ಪಾನ್‌ಗಳ ಈ ಹೊಸ ಸೇತುವೆಯ 3 ಸ್ಪಾನ್‌(ಕಂಬ)ಗಳ ನಿರ್ಮಾಣ ಕಾರ್ಯ ಮುಗಿದಿದ್ದು ಈಗ 4ನೇ ಸ್ಪಾನ್‌ ಕೆಲಸ ನಡೆಯುತ್ತಿದೆ. 72 ಮೀಟರ್‌ ಉದ್ದದ. 16 ಮೀಟರ್‌ ಒಟ್ಟೂ ಅಗಲದ ಈ ಸೇತುವೆಯಲ್ಲಿ 11 ಮೀಟರ್‌ನಷ್ಟು ಅಗಲದ ಸ್ಥಳವನ್ನು ರಸ್ತೆಗೆ ಬಳಸಿಕೊಳ್ಳಲಾಗುತ್ತದೆ. 4ನೇ ಸ್ಪಾನ್‌ನ ಕಾಮಗಾರಿಯೂ ಬಹುತೇಕ ಮುಗಿದಿದ್ದು ಇನ್ನೊಂದು ತಿಂಗಳಲ್ಲಿ ಸೇತುವೆ ಸಂಚಾರಕ್ಕೆ ತೆರೆದುಕೊಳ್ಳಲಿದೆ.

ಸೇತುವೆ ಕುಸಿದ ಕಾರಣ ಸಂಚಾರಕ್ಕೆ ವ್ಯತ್ಯಯವಾದ ಕಾರಣ ಒಂದು ರೀತಿಯಲ್ಲಿ ತಾಲೂಕು ಇಬ್ಭಾಗವಾದಂತಾಗಿತ್ತು. ಕೇಂದ್ರ ಸ್ಥಾನಕ್ಕೆ ಬರಲು 30-35 ಕಿಮೀ. ದೂರ ಕ್ರಮಿಸಿ ಬರಬೇಕಾದ ಹೇರೂರು, ಹೆಗ್ಗರಣಿ, ನಿಲ್ಕುಂದ ಭಾಗದ ಜನತೆಗೆ ಇದೊಂದು ದ್ರಾವಿಡ ಪ್ರಾಣಾಯಾಮದ ಸ್ಥಿತಿಯೇ ಆಗಿತ್ತು. ಬೃಹತ್‌ ಕಾಮಗಾರಿಯಾಗಿದ್ದಲ್ಲದೇ ಮತ್ತು ಇನ್ನಿತರ ಅಡಚಣೆ ಕಾರಣದಿಂದ ಪೂರ್ಣಗೊಳ್ಳಲು ತುಸು ವಿಳಂಭವೇ ಆದರೂ ಸದ್ಯದಲ್ಲೇ ಸಂಚಾರಕ್ಕೆ ದೊರಕುತ್ತಲ್ಲ ಎನ್ನುವದು ಸಂತಸದ ಸಂಗತಿಯಾಗಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.